Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುಜರಾತನ್ನೇ ನೋಡದ ನಾವು ಗುಜರಾತ್...

ಗುಜರಾತನ್ನೇ ನೋಡದ ನಾವು ಗುಜರಾತ್ ಹೀಗಿದೆ, ಅಭಿವೃದ್ಧಿಯಾಗಿದೆ ಎಂದು ವಂಚಿಸುತ್ತಿದ್ದೆವು

ಜನನುಡಿಯಲ್ಲಿ ನಮೋ ಬ್ರಿಗೇಡ್ ನಿಂದ ಹೊರಬಂದ ನಿಕೇತ್ ರಾಜ್ ಮೌರ್ಯ

ವಾರ್ತಾಭಾರತಿವಾರ್ತಾಭಾರತಿ2 Dec 2018 6:46 PM IST
share
ಗುಜರಾತನ್ನೇ ನೋಡದ ನಾವು ಗುಜರಾತ್ ಹೀಗಿದೆ, ಅಭಿವೃದ್ಧಿಯಾಗಿದೆ ಎಂದು ವಂಚಿಸುತ್ತಿದ್ದೆವು

#ನಮಗೆ ಮುಸ್ಲಿಮರ, ಕ್ರೈಸ್ತರ ವಿರುದ್ಧ ಪ್ರತೀಕಾರದ ಭಾವನೆ ಇತ್ತು

#ಆರೆಸ್ಸೆಸ್ ನ ನಿಲುವು ಮತ್ತು ವಾಸ್ತವ ಏನೆಂಬುದು ಅದರೊಳಗಿನವರಿಗೇ ಗೊತ್ತಾಗಿದೆ

#ವಿವೇಕಾನಂದರಿಗೆ ಪ್ರವಾದಿ ಮುಹಮ್ಮದ್, ಕ್ರೈಸ್ತ ಧರ್ಮದ ಬಗ್ಗೆ ಇದ್ದ ಗೌರವವನ್ನು ಮರೆಮಾಚಲಾಗುತ್ತಿದೆ

ಮಂಗಳೂರು, ಡಿ.2: "ಅಂದು ಸುಳ್ಳೇ ನಮ್ಮ ಬಂಡವಾಳವಾಗಿತ್ತು. ಅದನ್ನು ಭಾಷಣದ ಮೂಲಕ ಹೇಳಿ ಜನರನ್ನು ಮೋಸ ಮಾಡುತ್ತಿದ್ದೆವು. ನಮಗೆ ಮುಸ್ಲಿಮರ, ಕ್ರೈಸ್ತರ ವಿರುದ್ಧ ಪ್ರತೀಕಾರದ ಭಾವನೆ ಇತ್ತೇ ವಿನಃ ಬೇರೇನೂ ಇರಲಿಲ್ಲ. ಗುಜರಾತನ್ನೇ ನೋಡದ ನಾವು ನೋಡಿ ಗುಜರಾತ್ ಹೀಗಿವೆ, ಎಷ್ಟು ಅಭಿವೃದ್ಧಿಯಾಗಿದೆ ಎಂದು ಹೇಳಿ ವಂಚಿಸುತ್ತಿದ್ದೆವು. ಸ್ವಾಮಿ ವಿವೇಕಾನಂದರ ಬಗ್ಗೆ ಚಿಂತಕ ದಿನೇಶ್ ಅಮೀನ್ ಮಟ್ಟು ಲೇಖನ ಬರೆದಾಗ ಫೋನ್ ಕರೆ ಮಾಡಿ ಅವರನ್ನು ಬೈದವನಲ್ಲಿ ನಾನೂ ಒಬ್ಬ..."

ಇದು ಜಾಗೋ ಭಾರತ್, ನಮೋ ಬ್ರಿಗೇಡ್‌ನಲ್ಲಿ ಸಕ್ರಿಯರಾಗಿದ್ದ ತುಮಕೂರಿನ ನಿಕೇತ್ ರಾಜ್ ಮೌರ್ಯ ತನ್ನ ‘ಹೊರಳುನೋಟ’ದಲ್ಲಿ ಹೇಳಿದ ಮಾತುಗಳು.

"ಸ್ವಾಮಿ ವಿವೇಕಾನಂದರಿಗೆ ಪ್ರವಾದಿ ಮುಹಮ್ಮದರು, ಕ್ರೈಸ್ತ ಧರ್ಮದ ಬಗ್ಗೆ ಇದ್ದ ಗೌರವವನ್ನು ಮರೆಮಾಚಲಾಗುತ್ತದೆ. ವಿವೇಕಾನಂದರ ಬಗ್ಗೆ ಏನನ್ನೂ ಓದದ ನಾನು ಸಂಘದ ನಾಯಕರು ಹೇಳಿಕೊಟ್ಟದ್ದನ್ನೇ ಹೇಳಿ ಸಂಘಟನೆಯಲ್ಲಿ ಸಕ್ರಿಯನಾಗಿದ್ದೆ. ಸಂಘದ ನಿಲುವು ಮತ್ತು ವಾಸ್ತವ ಏನು ಎಂಬುದು ಈಗ ಹೆಚ್ಚಿನವರಿಗೆ ಗೊತ್ತಾಗಿದೆ. ಆದರೆ ಧೈರ್ಯದಿಂದ ಹೇಳಿ ಹೊರಬರಲಾಗದೆ ತೊಳಲಾಡುತ್ತಿದ್ದಾರೆ. ಹೈದರಾಲಿ, ಟಿಪ್ಪುವನ್ನು ಮೊದಲು ಕೊಂಡಾಡಿದ್ದೇ ಬಿಜೆಪಿಯವರು. ಯಾವಾಗ ಸಿದ್ದರಾಮಯ್ಯ ಟಿಪ್ಪು ಜಯಂತಿಗೆ ಕರೆ ನೀಡಿದರೋ ಆ ಕ್ಷಣದಿಂದ ಬಿಜೆಪಿಗರಿಗೆ ಟಿಪ್ಪು ದೇಶದ್ರೋಹಿ, ಮತಾಂಧನಾಗಿ ಬಿಟ್ಟ" ಎಂದು ನಿಕೇತ್‌ರಾಜ್ ಮೌರ್ಯ ಬಿಜೆಪಿ-ಸಂಘಪರಿವಾರದ ದ್ವಿಮುಖ ನೀತಿಯನ್ನು ಬಹಿರಂಗಪಡಿಸಿದರು.

ಚುನಾವಣೆ ಸಮೀಪಿಸಿದಾಗ ಗೋಹತ್ಯೆ, ರಾಮಮಂದಿರವನ್ನು ಇವರು ಜಪಿಸುತ್ತಾರೆ. ಈ ಬಗ್ಗೆ ಎಚ್ಚರಿಕೆ ಅಗತ್ಯ. ಸಮಾನ ಮನಸ್ಕರು ಸೇರಿ ನಡೆಸುವ ಜನನುಡಿಯಂತಹ ಕಾರ್ಯಕ್ರಮಗಳಲ್ಲೇ ಇದರ ವಿರುದ್ಧ ಜಾಗೃತಿ ಹುಟ್ಟಬೇಕು. ಅದಕ್ಕಾಗಿ ಜನನುಡಿಯ ಸಮಾವೇಶ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯಬೇಕು ಎಂದು ನಿಕೇತ್ ರಾಜ್ ಮೌರ್ಯ ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X