Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಸಿರಿ'ಯ ಪ್ರದರ್ಶನಕ್ಕಿಂತ ಬದುಕು ಮುಖ್ಯ:...

'ಸಿರಿ'ಯ ಪ್ರದರ್ಶನಕ್ಕಿಂತ ಬದುಕು ಮುಖ್ಯ: ಮಾವಳ್ಳಿ ಶಂಕರ್

ವಾರ್ತಾಭಾರತಿವಾರ್ತಾಭಾರತಿ2 Dec 2018 10:46 PM IST
share
ಸಿರಿಯ ಪ್ರದರ್ಶನಕ್ಕಿಂತ ಬದುಕು ಮುಖ್ಯ: ಮಾವಳ್ಳಿ ಶಂಕರ್

ಮಂಗಳೂರು, ಡಿ.2: ‘ನುಡಿಸಿರಿ’ಯಂತಹ 'ಸಿರಿ'ಯ ಗರ್ವ ಪ್ರದರ್ಶನಕ್ಕೆ ಪರ್ಯಾಯವಾಗಿ ಸಿರಿಯಲ್ಲಿ ಬದುಕು ಕಂಡುಕೊಂಡ ‘ಜನನುಡಿ’ ಎಷ್ಟೋ ಪಾಲು ಮಹತ್ವದ್ದಾಗಿದೆ ಎಂದು ದಸಂಸ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಶ್ಲಾಘನೆ ವ್ಯಕ್ತಪಡಿಸಿದರು.

ನಗರದ ನಂತೂರು ಶಾಂತಿಕಿರಣ ಸಭಾಂಗಣದಲ್ಲಿ ಅಭಿಮತ ಮಂಗಳೂರು ವತಿಯಿಂದ ರವಿವಾರ ಹಮ್ಮಿಕೊಳ್ಳಲಾದ ಜನನುಡಿ 5ನೇ ಆವೃತ್ತಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬಲಿಷ್ಠ ಭಾರತ ಎನ್ನುವ ಮಾತುಗಳನ್ನು ಆಡುವ ಮೂಲಕ ಕೋಮುವಾದಿ ಶಕ್ತಿಗಳು ಭಾರತವನ್ನು ವಿಭಜಿಸುವ ತಂತ್ರಗಳನ್ನು ಹೂಡುತ್ತಿದೆ. ಇದರ ವಿರುದ್ಧ ದೊಡ್ಡ ಮಟ್ಟದ ಜಾಗೃತಿಯ ಚಳವಳಿಯಾಗಬೇಕು ಎಂದರು.

2019ರ ಲೋಕಸಭೆ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಸಂವಿಧಾನದ ಉಳಿವಿಗೆ ಹಾಗೂ ಬಹುತ್ವದ ಭಾರತದ ಉಳಿವಿಗೆ ಪ್ರಾಮಾಣಿಕ ಹೋರಾಟ ಅಗತ್ಯ. ಸಂವಿಧಾನ ವಿರೋಧಿಗಳು ಚುನಾವಣೆಯನ್ನು ಎದುರಿಸಲು ನಾನಾ ತಂತ್ರಗಳನ್ನು ರೂಪಿಸುತ್ತಿವೆ. ಮತದಾರರ ಕಣ್ಣು ಮುಚ್ಚಿ ಕುಳಿತುಕೊಳ್ಳುವ ಬದಲು ಈ ಬಾರಿ ಎಚ್ಚರಿಕೆ ವಹಿಸಿ ಮುಂದೆ ಹೆಜ್ಜೆ ಇಡಬೇಕು ಎಂದು ಹೇಳಿದರು.

ಕಾರ್ಮಿಕ ಚಳವಳಿ ಮುಂದಾಳು, ಹೋರಾಟಗಾರ್ತಿ ಎಸ್.ವರಲಕ್ಷ್ಮೀ ಮಾತನಾಡಿ, ಬಿಜೆಪಿ ಸರಕಾರದಿಂದ ಕಳೆದ 4 ವರ್ಷಗಳಲ್ಲಿ ಸಿಕ್ಕಿದ್ದು ಕೇವಲ ಘೋಷಣೆಗಳು ಮಾತ್ರ. ಅದರಿಂದಲೇ ಜನರ ಹೊಟ್ಟೆ ತುಂಬಿಸಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಉದ್ಯೋಗ ನೀಡುತ್ತೇವೆ ಎಂದರು, ನೋಟು ಅಮಾನ್ಯ ಮಾಡಿ 70 ಲಕ್ಷ ಉದ್ಯೋಗಗಳನ್ನು ನಾಶ ಮಾಡಿದರು. ಇತ್ತೀಚೆಗೆ ರೈಲ್ವೆ ಇಲಾಖೆ ಸಿ,ಡಿ ಗ್ರೂಪ್‌ನ 60 ಸಾವಿರ ಹುದ್ದೆಗೆ 1.09 ಲಕ್ಷ ಅರ್ಜಿಗಳು ಬಂದಿವೆ ಎಂದರೆ ನಿರುದ್ಯೋಗ ಸ್ಥಿತಿಗೆ ಕೇಂದ್ರ ಸರಕಾರ ತಳ್ಳಿದ್ದು ನಿಚ್ಚಳವಾಗಿದೆ ಎಂದು ಆರೋಪಿಸಿದರು.

ಆರೆಸ್ಸೆಸ್ ಯಾವ ಕ್ಷೇತ್ರವನ್ನೂ ಬಿಟ್ಟಿಲ್ಲ, ಕಾರ್ಮಿಕ, ಶಿಕ್ಷಕ ಕ್ಷೇತ್ರಕ್ಕೂ ಕಾಲಿಟ್ಟಿರುವ ಅಪಾಯ ಮುಂದಿದೆ. ಇದರ ವಿರುದ್ಧ ಎಲ್ಲರೂ ಒಂದಾಗಬೇಕಿದೆ ಎಂದು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X