Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಪಿಎಎಸ್‍ಸಿಯಲ್ಲಿನ ದಲಿತ ವಿರೋಧಿ ಆದೇಶದ...

ಕೆಪಿಎಎಸ್‍ಸಿಯಲ್ಲಿನ ದಲಿತ ವಿರೋಧಿ ಆದೇಶದ ಹಿಂದೆ ಐಎಎಸ್ ಅಧಿಕಾರಿಗಳ ಕೈವಾಡ: ಕೆ.ಎಸ್.ಶಿವರಾಮು

ಆದೇಶ ಹಿಂಪಡೆಯದಿದ್ದರೆ ಡಿ.5 ರಂದು ಮೌನ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Dec 2018 10:53 PM IST
share
ಕೆಪಿಎಎಸ್‍ಸಿಯಲ್ಲಿನ ದಲಿತ ವಿರೋಧಿ ಆದೇಶದ ಹಿಂದೆ ಐಎಎಸ್ ಅಧಿಕಾರಿಗಳ ಕೈವಾಡ: ಕೆ.ಎಸ್.ಶಿವರಾಮು

ಮೈಸೂರು,ಡಿ.3: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯಲ್ಲಿ ಎಸ್ಸಿ,ಎಸ್ಟಿ ಮತ್ತು ಹಿಂದುಳಿದ ವರ್ಗಗಳ ಮೆರಿಟ್ ಆಧಾರದಲ್ಲಿ ಸಾಮಾನ್ಯ ವರ್ಗಕ್ಕೆ ಪರಿಗಣನೆ ಮಾಡದಂತೆ ಹೊರಡಿಸಿರುವ ಆದೇಶ ದುರುದ್ದೇಶದಿಂದ ಕೂಡಿದ್ದು, ಇದರ ಹಿಂದೆ ಇತರೆ ವರ್ಗಗಳ ಐಎಎಸ್ ಅಧಿಕಾರಿಗಳ ಕೈವಾಡವಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಗಂಭೀರ ಆರೋಪ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ರವಿವಾರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ, ಮೈಸೂರು-ಚಾಮರಾಜನಗರ ಜಿಲ್ಲಾ ಉಪ್ಪಾರರ ಸಂಘ, ಜಿಲ್ಲಾ ವಿಶ್ವಕರ್ಮ ಮಹಾಮಂಡಳ, ಜಿಲ್ಲಾ ಸವಿತಾ ಸಂಘರ್ಷ ಸಮಿತಿ, ಅರಸು ಮಹಾಸಭಾ, ಜಿಲ್ಲಾ ಕುಂಬಾರರ ಸಂಘದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಪಿಎಸ್‍ಸಿ ಹೊರಡಿಸಿರುವ ಆದೇಶ ದಲಿತರ ಸಮಾಧಿ ಕಟ್ಟುವಂತಿದ್ದು, ಇದೊಂದು ಉದ್ದೇಶ ಪೂರ್ವಕವಾಗಿ ನಡೆದಿರುವ ಅಂಶ. ದಲಿತರು ಹಿಂದುಳಿದವರು ಎಷ್ಟೇ ಮೆರಿಟ್ ಪಡೆದರೂ ಅವರವರ ಜಾತಿಗಳಲ್ಲೆ ಹೊಡೆದಾಡಬೇಕು. ಸಾಮನ್ಯ ವರ್ಗಗಳಿಗೆ ಹೋದರೆ ಅಲ್ಲಿರುವವರಿಗೆ ತೊಂದರೆಯಗುತ್ತದೆ ಎಂದು ಭಾವಿಸಿ ದಲಿತರು, ಹಿಂದುಳಿದವರನ್ನು ತುಳಿಯುವ ಪ್ರಯತ್ನವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಮಾಡಿದ್ದು, ಈತ ಒಬ್ಬ ದಲಿತ ವಿರೋಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕಾಂಗದ ಗಮನಕ್ಕೂ ಬರದೆ ಏಕಾಏಕಿ ಮುಖ್ಯ ಕಾರ್ಯದರ್ಶಿ ಆದೇಶದಂತೆ ಈ ನಿರ್ಧಾವನ್ನು ಕೆಪಿಎಸ್‍ಸಿ ತೆಗೆದುಕೊಂಡಿದ್ದು, ಇದರ ಹಿಂದೆ ಅಡಗಿರುವ ಅಧಿಕಾರಿಗಳನ್ನು ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಈ ಆದೇಶದ ವಿರುದ್ಧ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ಹಿಂದುಳದ ವರ್ಗಗಳ ಸಚಿವ ಪುಟ್ಟರಂಗಶೆಟ್ಟಿ ಕ್ಯಾಬಿನೆಟ್‍ನಲ್ಲಿ ಪ್ರಸ್ತಾಪಿಸಿದ್ದು, ಮುಖ್ಯಮಂತ್ರಿಗಳು ಇದು ನನ್ನ ಗಮನಕ್ಕೆ ಬಾರದೆ ನಡೆದಿದ್ದು, ಇದನ್ನು ಸರಿಪಡಿಸುವುದಾಗಿ ಹೇಳಿದ್ದರು. ಜೊತೆಗೆ ನಮ್ಮ ವೇದಿಕೆ ವತಿಯಿಂದಲೂ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡಲಾಗಿತ್ತು. ಕೂಡಲೇ ಸರಿಪಡಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿಗಳು ಮೊನ್ನೆ ಕಾನೂನು ಸಲಹೆಗೆ ಕಳುಹಿಸಿರುವುದಾಗಿ ಹೇಳುತ್ತಿದ್ದಾರೆ. ಹಾಗಾದರೆ ಈ ಹಿಂದೆ 1998,1999,2004 ರ ಬ್ಯಾಚ್‍ನ ಕೆಎಎಸ್ ನಿಂದ ಐಎಎಸ್ ಮುಂಬಡ್ತಿ ಪಡೆದಿರುವವರನ್ನು ವಾಪಸ್ ಕಳಹಿಸುವಂತೆ ಆದೇಶಿಸಿದೆ. ಅದನ್ನೇಕೆ ಸರ್ಕಾರ ಮಾಡಿಲ್ಲ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಒಂದು ಕಡೆ ಕೋರ್ಟಿನ ಅದೇಶವನ್ನು ಪಾಲಿಸಲು ಹೇಳುತ್ತದೆ. ಮತ್ತೊಂದು ಕಡೆ ಕೋರ್ಟಿನ ಆದೇಶದ ವಿರುದ್ಧ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸುತ್ತದೆ. ಮತ್ತೊಂದು ಕಡೆ ಲೋಕಸೇವಾ ಆಯೋಗಕ್ಕೆ ಪತ್ರ ಬರೆದು ನ್ಯಾಯಾಲಯವು ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸುತ್ತದೆ. ಅಂದರೆ 1998,1999,2004 ಬ್ಯಾಚ್ ನಲ್ಲಿ ಅಕ್ರಮಗಳ ಮೂಲಕ ಕೆಎಎಸ್ ಉನ್ನತ ಹುದ್ದಗೆ ಅಯ್ಕೆಯಾಗಿ ಐಎಎಸ್, ಐಪಿಎಸ್ ಹುದ್ದೆಗಳಿಗೆ ಮುಂಬಡ್ತಿ ಪಡೆದು ಆಯಕಟ್ಟಿನ ಸ್ಥಳದಲ್ಲಿ ಕುಳಿತಿರುವ ಅಧಿಕಾರಿಗಳನ್ನು ರಕ್ಷಿಸಲು ಈ ತೀರ್ಮಾನ ಕೈಗೊಂಡಿದೆ ಎಂದು ಆರೋಪಿಸಿದರು.

ಕೂಡಲೇ ತನ್ನ ಆದೇಶವನ್ನು ಸರ್ಕಾರ ಹಿಂಪಡೆಯದಿದ್ದರೆ ಡಿ.5 ರಂದು ಊಟಿ ರಸ್ತೆಯಲ್ಲಿರುವ ಮೀಸಲಾತಿ ಪಿತಾಮಹ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಮಾಧಿಗೆ ಮಾಲಾರ್ಪಣೆ ಮಾಡಿ ಮೌನ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು. ಇದಕ್ಕೆ ಬಗ್ಗದಿದ್ದರೆ ಮುಂದಿನ ದಿನಗಳಲ್ಲಿ ದಲಿತ ಹಿಂದುಳಿದ  ಅಲ್ಪಸಂಖ್ಯಾತ ಸಂಘಟನೆಗಳ ಜೊತೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಪ್ಪಾರ ಸಮಾಜದ ಕೆ.ಸೋಮಶೇಖರ್, ವಿಶ್ವಕರ್ಮ ಮಹಾಮಂಡಳದ ಸಿ.ಟಿ.ಆಚಾರ್ಯ, ಝಾಕೀರ್ ಹುಸೇನ್, ನಂದೀಶ್ ಅರಸ್, ಜಿಲ್ಲಾ ಸವಿತಾ ಸಂಘರ್ಷ ಸಮಿತಿ ಅಧ್ಯಕ್ಷ ವಿ.ಮಂಜುನಾಥ್, ವಿದ್ಯಾರ್ಥಿ ಮುಖಂಡ ಕೆ.ಪಿ.ಚಿಕ್ಕಸ್ವಾಮಿ, ಎಚ್.ಎಸ್.ಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X