Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ-ಬೆಲ್ಜಿಯಂ ಪಂದ್ಯ ರೋಚಕ ಡ್ರಾ

ಭಾರತ-ಬೆಲ್ಜಿಯಂ ಪಂದ್ಯ ರೋಚಕ ಡ್ರಾ

ಹಾಕಿ ವಿಶ್ವಕಪ್‌

ವಾರ್ತಾಭಾರತಿವಾರ್ತಾಭಾರತಿ2 Dec 2018 11:57 PM IST
share
ಭಾರತ-ಬೆಲ್ಜಿಯಂ ಪಂದ್ಯ ರೋಚಕ ಡ್ರಾ

 ಭುವನೇಶ್ವರ, ಡಿ.2: ಅತ್ಯುತ್ತಮ ಪ್ರದರ್ಶನ ನೀಡಿದ ಆತಿಥೇಯ ಭಾರತ ತಂಡ ಬೆಲ್ಜಿಯಂ ವಿರುದ್ಧ ರವಿವಾರ ನಡೆದ ಹಾಕಿ ವಿಶ್ವಕಪ್‌ನ ‘ಸಿ’ ಗುಂಪಿನ ಪಂದ್ಯದಲ್ಲಿ 2-2 ಅಂತರದಿಂದ ರೋಚಕ ಡ್ರಾ ಸಾಧಿಸಿದೆ. ಕಳಿಂಗ ಸ್ಟೇಡಿಯಂನಲ್ಲಿ ಬೆಲ್ಜಿಯಂ 8ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಗೋಲು ಬಾರಿಸಿ 1-0 ಮುನ್ನಡೆ ಸಾಧಿಸಿತು. ಗೋಲುಕೀಪರ್ ಪಿ.ಆರ್. ಶ್ರೀಜೇಶ್‌ರನ್ನು ವಂಚಿಸಿದ ಅಲೆಕ್ಸಾಂಡರ್ ಹೆಂಡ್ರಿಕ್ಸ್ ಬೆಲ್ಜಿಯಂಗೆ ಆರಂಭಿಕ ಮುನ್ನಡೆ ಒದಗಿಸಿದರು.

ಅತ್ಯುತ್ತಮ ಪ್ರದರ್ಶನದಿಂದ ಗಮನ ಸೆಳೆದ ಭಾರತದ ಪರ ಹರ್ಮನ್‌ಪ್ರೀತ್ 39ನೇ ನಿಮಿಷದಲ್ಲಿ ಪೆನಾಲ್ಟಿ ಸ್ಟ್ರೋಕ್ ಮೂಲಕ ಗೋಲು ದಾಖಲಿಸಿ ಸ್ಕೋರನ್ನು 1-1 ರಿಂದ ಸಮಬಲಗೊಳಿಸಿದರು. ಸಿಮ್ರನ್‌ಜೀತ್ 47ನೇ ನಿಮಿಷದಲ್ಲಿ ಗೋಲು ಬಾರಿಸಿ ಭಾರತದ ಮುನ್ನಡೆಯನ್ನು 2-1ಕ್ಕೆ ವಿಸ್ತರಿಸಿದರು.

 ಆದರೆ, ಭಾರತ ಕೊನೆಯ ಕ್ಷಣದಲ್ಲಿ ಬೆಲ್ಜಿಯಂಗೆ ಗೋಲು ಬಿಟ್ಟುಕೊಟ್ಟು ಎಡವಿತು. 56ನೇ ನಿಮಿಷದಲ್ಲಿ ಗೋಲು ಬಾರಿಸಿದ ಸೈಮನ್ ಗೌಗ್‌ನಾರ್ಡ್ ಪಂದ್ಯ ಡ್ರಾಗೊಳಿಸಿದರು.

ಈ ಫಲಿತಾಂಶದೊಂದಿಗೆ ಭಾರತ ಸಿ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಗೋಲು ವ್ಯತ್ಯಾಸದಲ್ಲಿ ಬೆಲ್ಜಿಯಂಗಿಂತ ಮುನ್ನಡೆಯಲ್ಲಿದೆ. ಉಭಯ ತಂಡಗಳು ತಲಾ 1ರಲ್ಲಿ ಡ್ರಾ ಹಾಗೂ ಗೆಲುವು ದಾಖಲಿಸಿವೆ. ‘ಸಿ’ ಗುಂಪಿನಲ್ಲಿರುವ ಎಲ್ಲ ನಾಲ್ಕು ತಂಡಗಳಿಗೆ ನಾಕೌಟ್ ಹಂತಕ್ಕೇರಿರುವ ಸಮಾನ ಅವಕಾಶವಿದೆ.

ಭಾರತ ಟೂರ್ನಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕವನ್ನು 5-0 ಅಂತರದಿಂದ ಮಣಿಸಿತ್ತು. ಮತ್ತೊಂದು ಪಂದ್ಯದಲ್ಲಿ ಬೆಲ್ಜಿಯಂ ತಂಡ ಕೆನಡಾವನ್ನು 2-1 ರಿಂದ ಸೋಲಿಸಿತ್ತು. ಭಾರತ ಡಿ.8ರಂದು ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಕೆನಡಾವನ್ನು ಎದುರಿಸಲಿದ್ದು, ಬೆಲ್ಜಿಯಂ ಅದೇ ದಿನ ದ.ಆಫ್ರಿಕವನ್ನು ಎದುರಿಸಲಿದೆ.

ಭಾರತ ಮೊದಲಾರ್ಧದಲ್ಲಿ ನೀರಸ ಪ್ರದರ್ಶನ ನೀಡಿತ್ತು. ದ್ವಿತೀಯಾ ರ್ಧದಲ್ಲಿ ಎರಡು ಗೋಲುಗಳನ್ನು ಬಾರಿಸಿ ತಿರುಗೇಟು ನೀಡಿತು. ವಿಶ್ವದ ನಂ.3ನೇ ತಂಡ ಬೆಲ್ಜಿಯಂ ವಿಶ್ವದ ನಂ.5ನೇ ತಂಡ ಭಾರತದ ವಿರುದ್ಧ 2013ರಿಂದ ಆಡಿರುವ 19 ಪಂದ್ಯಗಳ ಪೈಕಿ 13ರಲ್ಲಿ ಜಯ ಸಾಧಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X