Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀರವ್ ಮೋದಿ ಹಗರಣ: 8 ತಿಂಗಳ ಹಿಂದೆಯೇ...

ನೀರವ್ ಮೋದಿ ಹಗರಣ: 8 ತಿಂಗಳ ಹಿಂದೆಯೇ ಎಚ್ಚರಿಸಿದ್ದ ಐಟಿ ತನಿಖಾ ವರದಿಯನ್ನು ಗೌಪ್ಯವಾಗಿಡಲಾಗಿತ್ತು

ವಾರ್ತಾಭಾರತಿವಾರ್ತಾಭಾರತಿ3 Dec 2018 1:31 PM IST
share
ನೀರವ್ ಮೋದಿ ಹಗರಣ: 8 ತಿಂಗಳ ಹಿಂದೆಯೇ ಎಚ್ಚರಿಸಿದ್ದ ಐಟಿ ತನಿಖಾ ವರದಿಯನ್ನು ಗೌಪ್ಯವಾಗಿಡಲಾಗಿತ್ತು

ಮುಂಬೈ, ಡಿ.3: ಜೂನ್ 8, 2017ರಂದು ಅಂತಿಮಗೊಳಿಸಲಾದ ಮಹತ್ವದ ಆದಾಯ ತೆರಿಗೆ ತನಿಖಾ ವರದಿಯೊಂದು ಸ್ಫೋಟಕ ಮಾಹಿತಿ ಹೊರಗೆಡಹಿದೆ. ಬೋಗಸ್ ಖರೀದಿ, ಸಂಬಂಧಿಗಳಿಗೆ ಶಂಕಾಸ್ಪದ ಹಣ ಪಾವತಿ, ಶಂಕಾಸ್ಪದ ಸಾಲಗಳು, ಹೀಗೆ ವಜ್ರೋದ್ಯಮಿಗಳಾದ ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿಯ ವ್ಯವಹಾರಗಳತ್ತ ಪಿಎನ್‍ ಬಿ ಹಗರಣ ಹೊರ ಬೀಳುವ ಎಂಟು ತಿಂಗಳು ಮುನ್ನವೇ  ಬೊಟ್ಟು ಮಾಡಿ ತೋರಿಸಿತ್ತೆನ್ನುವ ಅಂಶ ಈಗ ಬಹಿರಂಗಗೊಂಡಿದೆ.

ಆದರೆ ಆ ಐಟಿ ತನಿಖಾ ವರದಿಯನ್ನು ಇತರ ಯಾವುದೇ ಏಜನ್ಸಿ ಜತೆ ಹಂಚಿಕೊಳ್ಳಲಾಗಿರಲಿಲ್ಲ. ಈ ತನಿಖಾ ವರದಿ ಸುಮಾರು 10,000 ಪುಟಗಳಷ್ಟಿದ್ದು ಅದರಲ್ಲಿನ ಮಾಹಿತಿಯನ್ನು ಸಿಬಿಐ, ಜಾರಿ ನಿರ್ದೇಶನಾಲಯ, ಡಿಆರ್‍ಐ ಅಥವಾ  ಗಂಭೀರ ವಂಚನಾ ಪ್ರಕರಣಗಳ ತನಿಖಾ ಕಚೇರಿಗಗೂ (ಎಸ್‍ಎಫ್‍ಐಒ) ಫೆಬ್ರವರಿ 2018ರ ತನಕ ನೀಡಲಾಗಿರಲಿಲ್ಲ. ಹಗರಣ ಬಹಿರಂಗಗೊಂಡ ಫೆಬ್ರವರಿ 2018ಕ್ಕಿಂತ ಮೊದಲು ರೀಜನಲ್ ಇಕನಾಮಿಕ್ ಇಂಟಲಿಜೆನ್ಸ್ ಕೌನ್ಸಿಲ್‍ಗೂ ಮಾಹಿತಿ ನೀಡಲಾಗಿರಲಿಲ್ಲ.

ಇದೀಗ ಪಿಎಎನ್ ಬಿ ಹಗರಣ ಹೊರಬಿದ್ದ ಹತ್ತು ತಿಂಗಳ ನಂತರ ಭಾರತ ಸರಕಾರ ಮತ್ತದರ ಏಜನ್ಸಿಗಳು ನೀರವ್ ಮೋದಿಯನ್ನು ಭಾರತಕ್ಕೆ ತನಿಖೆ ಎದುರಿಸಲು ಕರೆ ತರಲು ಹೆಣಗಾಡುತ್ತಿವೆ. ಆದರೆ ಇಲ್ಲಿಯ ತನಕ ಎಲ್ಲಾ ಪ್ರಯತ್ನಗಳೂ ವ್ಯರ್ಥವಾಗಿವೆ. ಐಟಿ ತನಿಖಾ ವರದಿಯನ್ನು ಮೊದಲೇ ಇತರ ಏಜನ್ಸಿಗಳಿಗೆ ತಿಳಿಸಿದ್ದರೆ ರೂ 13,500 ಕೋಟಿ ವಂಚನೆ ಪ್ರಕರಣದಲ್ಲಿನ ಆರೋಪಿಗಳು ತಪ್ಪಿಸಿ ಹೋಗುವ ಸಾಧ್ಯತೆಯಿರಲಿಲ್ಲ.

ಇಂತಹ ತನಿಖಾ ವರದಿಗಳಲ್ಲಿನ ಮಾಹಿತಿಗಳನ್ನು ಇತರ ಏಜನ್ಸಿಗಳೊಂದಿಗೆ ಹಂಚಿಕೊಳ್ಳಬೇಕೆಂಬ ಯಾವುದೇ ನಿಯಮವಿಲ್ಲ ಎಂದು ಹಿರಿಯ ತೆರಿಗೆ ಅಧಿಕಾರಿಯೊಬ್ಬರು ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X