Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಟ್‌ ಸದಸ್ಯರು ಸಿಖ್ ವಿರೋಧಿ ದಂಗೆ...

ಸಿಟ್‌ ಸದಸ್ಯರು ಸಿಖ್ ವಿರೋಧಿ ದಂಗೆ ಪ್ರಕರಣಗಳ ತನಿಖೆಯ ಉಸ್ತುವಾರಿ ಮುಂದುವರಿಸಬಹುದು

ಸರ್ವೋಚ್ಚ ನ್ಯಾಯಾಲಯಕ್ಕೆ ಸರಕಾರದ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ3 Dec 2018 9:21 PM IST
share
ಸಿಟ್‌ ಸದಸ್ಯರು ಸಿಖ್ ವಿರೋಧಿ ದಂಗೆ ಪ್ರಕರಣಗಳ ತನಿಖೆಯ ಉಸ್ತುವಾರಿ ಮುಂದುವರಿಸಬಹುದು

ಹೊಸದಿಲ್ಲಿ, ಡಿ.3:  1984ರ ಸಿಖ್ ವಿರೋಧಿ ದಂಗೆಗಳಿಗೆ ಸಂಬಂಧಿಸಿದಂತೆ ಮುಕ್ತಾಯ ವರದಿಗಳು ಸಲ್ಲಿಕೆಯಾಗಿದ್ದ 186 ಪ್ರಕರಣಗಳಲ್ಲಿ ಇನ್ನಷ್ಟು ತನಿಖೆಯ ಉಸ್ತುವಾರಿಯನ್ನು ಹೊಂದಿರುವ ಮೂವರು ಸದಸ್ಯರ ವಿಶೇಷ ತನಿಖಾ ತಂಡ(ಸಿಟ್)ದಲ್ಲಿ ಮುಂದುವರಿಯಲು ವೈಯಕ್ತಿಕ ಕಾರಣಗಳಿಂದ ನಿರಾಕರಿಸಿರುವ ನಿವೃತ್ತ ಐಪಿಎಸ್ ಅಧಿಕಾರಿ ರಾಜದೀಪ್ ಸಿಂಗ್ ಅವರ ಬದಲಿಗೆ ಇನ್ನೋರ್ವ ಸದಸ್ಯರನ್ನು ನೇಮಕಗೊಳಿಸುವುದು ಅಗತ್ಯವಲ್ಲದಿರಬಹುದು ಎಂದು ಕೇಂದ್ರವು ಸೋಮವಾರ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.

ಸಿಟ್‌ನ ಇತರ ಇಬ್ಬರು ಸದಸ್ಯರಾಗಿರುವ ದಿಲ್ಲಿ ಉಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಎಸ್.ಎನ್.ಧಿಂಗ್ರಾ ಮತ್ತು ಹಾಲಿ ಸೇವೆಯಲ್ಲಿರುವ ಐಪಿಎಸ್ ಅಧಿಕಾರಿ ಅಭಿಷೇಕ್ ದುಲಾರ್ ಅವರು ಉಸ್ತುವಾರಿಯನ್ನು ಮುಂದುವರಿಸಲು ತನ್ನ ಆಕ್ಷೇಪವಿಲ್ಲ ಎಂದು ಸರಕಾರವು ನ್ಯಾಯಮೂರ್ತಿಗಳಾದ ಎಂ.ಬಿ.ಲೋಕೂರ್ ಮತ್ತು ದೀಪಕ್ ಗುಪ್ತಾ ಅವರ ಪೀಠಕ್ಕೆ ತಿಳಿಸಿತು.

ಆದರೆ ಮೂವರು ಸದಸ್ಯರ ಸಿಟ್ ರಚನೆಯ ಜ.11ರ ಆದೇಶವನ್ನು ಮೂವರು ನ್ಯಾಯಾಧೀಶರ ಪೀಠವು ಹೊರಡಿಸಿರುವುದರಿಂದ ಇಬ್ಬರು ನ್ಯಾಯಾಧೀಶರ ಪೀಠವು ಈ ಆದೇಶವನ್ನು ಪರಿಷ್ಕರಿಸುವಂತಿಲ್ಲ ಎಂದು ನ್ಯಾಯಾಲಯವು ಹೇಳಿತು.

ಸಿಂಗ್ ಜಾಗಕ್ಕೆ ಮಾಜಿ ಐಪಿಎಸ್ ಅಧಿಕಾರಿ ನವನೀತ ರಾಜನ್ ವಾಸನ್ ಅವರುನ್ನು ನೇಮಕಗೊಳಿಸುವಂತೆ ಸರಕಾರವು ಸಲಹೆ ನೀಡಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ಅವರು ಪೀಠಕ್ಕೆ ತಿಳಿಸಿದಾಗ,ನೀವು ನಿಮ್ಮದೇ ಆದ ನ್ಯಾಯಾಧೀಶರನ್ನು ನೇಮಕಗೊಳಿಸುವಂತಿಲ್ಲ. 2-3 ಹೆಸರುಗಳನ್ನು ನೀಡಿ ಎಂದು ಅದು ಪ್ರತಿಕ್ರಿಯಿಸಿತು. ಈ ಹಂತದಲ್ಲಿ ಆನಂದ್ ಅವರು ಸರ್ವೋಚ್ಚ ನ್ಯಾಯಾಲಯವು ಸಿಂಗ್ ಬದಲಿಗೆ ಯಾರನ್ನೂ ನೇಮಕಗೊಳಿಸಬಹುದು ಎಂದು ತಿಳಿಸಿದರು.

ಸಿಟ್‌ಗೆ ಇನ್ನೋರ್ವ ಸದಸ್ಯರ ನೇಮಕಾತಿ ಪ್ರಕ್ರಿಯೆಯು ವಿಳಂಬಗೊಳ್ಳಬಹುದು ಹೀಗಾಗಿ ಇತರ ಇಬ್ಬರು ಸದಸ್ಯರು ಉಸ್ತುವಾರಿ ಕಾರ್ಯವನ್ನು ಮುಂದುವರಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ,ಆನಂದ್ ಅವರು ಇದಕ್ಕೆ ಸಹಮತ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X