Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ ವಿಧಾನಸಭೆಯಲ್ಲಿ ಗದ್ದಲ: ಯುಡಿಎಫ್...

ಕೇರಳ ವಿಧಾನಸಭೆಯಲ್ಲಿ ಗದ್ದಲ: ಯುಡಿಎಫ್ ಶಾಸಕರ ಉಪವಾಸ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ3 Dec 2018 9:52 PM IST
share
ಕೇರಳ ವಿಧಾನಸಭೆಯಲ್ಲಿ ಗದ್ದಲ: ಯುಡಿಎಫ್ ಶಾಸಕರ ಉಪವಾಸ ಸತ್ಯಾಗ್ರಹ

 ತಿರುವನಂತಪುರಂ, ಡಿ.3: ಶಬರಿಮಲೆ ಪ್ರಕರಣದ ಹಿನ್ನೆಲೆಯಲ್ಲಿ ಕೇರಳದ ವಿಧಾನಸಭೆ ಯ ಕಲಾಪ ಸತತ ನಾಲ್ಕನೇ ದಿನವಾದ ಸೋಮವಾರವೂ ಗದ್ದಲಮಯವಾಗಿದ್ದು, ಅರ್ಧಗಂಟೆಯಲ್ಲೇ ಸದನದ ಕಲಾಪವನ್ನು ಮುಂದೂಡಲಾಯಿತು. ಶಬರಿಮಲೆ ವಿಷಯದ ಬಗ್ಗೆ ಸರಕಾರದ ನಿಲುವನ್ನು ಖಂಡಿಸಿ ಹಲವು ಯುಡಿಎಫ್ ಶಾಸಕರು ಹಾಗೂ ಬಿಜೆಪಿ ನಾಯಕರೊಬ್ಬರು ಉಪವಾಸ ಸತ್ಯಾಗ್ರಹ ಆರಂಭಿಸಿದರು.

ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ ಶಬರಿಮಲೆ ವಿಷಯದ ಬಗ್ಗೆ ಗದ್ದಲ ಆರಂಭವಾಯಿತು. ಶಬರಿಮಲೆಯಲ್ಲಿ ಜಾರಿಯಲ್ಲಿರುವ ಸೆಕ್ಷನ್ 144ನ್ನು ಹಿಂಪಡೆಯಬೇಕೆಂದು ವಿಪಕ್ಷ ನಾಯಕ ರಮೇಶ್ ಚೆನ್ನಿತ್ತಲ ಒತ್ತಾಯಿಸಿದರು. ಶಬರಿಮಲೆ, ಪಂಬಾ ಮತ್ತು ನಿಲಕ್ಕಲ್‌ಗೆ ಆಗಮಿಸುವ ಯಾತ್ರಿಗಳಿಗೆ ಹೆಚ್ಚಿನ ಸವಲತ್ತು ಒದಗಿಸುವಂತೆ ಅವರು ಸರಕಾರವನ್ನು ಆಗ್ರಹಿಸಿದರು. ಕಳೆದ ನಾಲ್ಕು ದಿನಗಳಿಂದ ವಿಪಕ್ಷ ಈ ಬೇಡಿಕೆಯನ್ನು ಮುಂದಿರಿಸಿದ್ದರೂ ಸರಕಾರ ಈ ಬಗ್ಗೆ ಚರ್ಚೆಗೆ ಸಿದ್ದವಿಲ್ಲ. ಆದ್ದರಿಂದ ಸದನದಲ್ಲಿ ಈ ವಿಷಯವನ್ನು ಎತ್ತಿದ್ದು ಸದನದಲ್ಲಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದೇವೆ ಎಂದರು.

ಕಾಂಗ್ರೆಸ್ ಸ್ಪೀಕರ್ ಜೊತೆ ಸಹಕರಿಸಲಿದೆ ಎಂದು ಪ್ರಶ್ನೋತ್ತರ ಅವಧಿಯ ಆರಂಭದಲ್ಲಿ ಹೇಳಿದ್ದ ಚೆನ್ನಿತ್ತಲ, ಬಳಿಕ ಮಾತು ಬದಲಿಸಿದರು. ಶಬರಿಮಲೆ ನಗರದಲ್ಲಿ ಕಾಂಗ್ರೆಸ್ ಮುಂದಿರಿಸಿದ ಬೇಡಿಕೆಗಳನ್ನು ತಿರಸ್ಕರಿಸಿರುವ ಸರಕಾರದ ಕ್ರಮವನ್ನು ವಿರೋಧಿಸಿ ಪಕ್ಷದ ಮೂವರು ಶಾಸಕರು ವಿಧಾನಸಭೆಯ ಮುಖ್ಯದ್ವಾರದ ಎದುರು ಅನಿರ್ದಿಷ್ಟಾವಧಿಯ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಿಸಿದರು.

 ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ವಿಜಯನ್, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮಧ್ಯೆ ಯಾವುದೇ ವ್ಯತ್ಯಾಸವಿಲ್ಲ. ಬಿಜೆಪಿ ಸಚಿವಾಲಯದ ಎದುರು ಧರಣಿ ನಡೆಸಿದರೆ, ಕಾಂಗ್ರೆಸ್ ಇಲ್ಲಿ ಆರಂಭಿಸಿದೆ. ಇದು ನೀವು(ಕಾಂಗ್ರೆಸಿಗರು) ಬಿಜೆಪಿ/ಆರೆಸ್ಸೆಸ್‌ನೊಂದಿಗೆ ಹೊಂದಿರುವ ಸಂಬಂಧವನ್ನು ಸ್ಪಷ್ಟಪಡಿಸಿದೆ ಎಂದು ತಿರುಗೇಟು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X