Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫ್ರಾನ್ಸ್ ವಿರುದ್ಧ ಡ್ರಾ ಸಾಧಿಸಿದ...

ಫ್ರಾನ್ಸ್ ವಿರುದ್ಧ ಡ್ರಾ ಸಾಧಿಸಿದ ಸ್ಪೇನ್

ಹಾಕಿ ವಿಶ್ವಕಪ್

ವಾರ್ತಾಭಾರತಿವಾರ್ತಾಭಾರತಿ3 Dec 2018 11:26 PM IST
share
ಫ್ರಾನ್ಸ್ ವಿರುದ್ಧ ಡ್ರಾ ಸಾಧಿಸಿದ ಸ್ಪೇನ್

ಭುವನೇಶ್ವರ, ಡಿ.3: ನಾಯಕ ಹಾಗೂ ಗೋಲ್‌ಕೀಪರ್ ಕ್ವಿಕೊ ಕಾರ್ಟೆಸ್ ಎದುರಾಳಿ ತಂಡಕ್ಕೆ ಪೆನಾಲ್ಟಿ ಸ್ಟ್ರೋಕ್‌ನಲ್ಲಿನ ಗೋಲು ನಿರಾಕರಿಸುವ ಮೂಲಕ ಮೂರು ಬಾರಿಯ ಚಾಂಪಿಯನ್ ಸ್ಪೇನ್ ತಂಡ ಹಾಕಿ ವಿಶ್ವಕಪ್‌ನ ‘ಎ’ ಗುಂಪಿನ ತನ್ನ 2ನೇ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ 1-1 ಅಂತರದಿಂದ ಡ್ರಾ ಸಾಧಿಸಲು ನೆರವಾಗಿದ್ದಾರೆ.

 ಸೋಮವಾರ ನಡೆದ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಉಭಯ ತಂಡಗಳು 2 ಪಂದ್ಯಗಳಲ್ಲಿ ತಲಾ ಒಂದು ಅಂಕ ಗಳಿಸಿವೆ. ಕ್ರಾಸ್ ಓವರ್ ಮೂಲಕ ಮುಂದಿನ ಸುತ್ತಿಗೇರುವ ವಿಶ್ವಾಸವನ್ನು ಜೀವಂತವಾಗಿರಿಸಿಕೊಂಡಿವೆ. ‘ಎ’ ಗುಂಪಿನಲ್ಲಿ ಅರ್ಜೆಂಟೀನ ಮೊದಲ ಸ್ಥಾನದಲ್ಲಿದೆ. ವಿಶ್ವದ ನಂ.8ನೇ ತಂಡ ಸ್ಪೇನ್ ಹಾಗೂ 20ನೇ ರ್ಯಾಂಕಿನ ಫ್ರಾನ್ಸ್ ನಡುವಿನ ಮುಖಾಮುಖಿ ಅತ್ಯಂತ ಪೈಪೋಟಿಯಿಂದ ಕೂಡಿತ್ತು. ಫ್ರಾನ್ಸ್ 60 ನಿಮಿಷಗಳ ಪಂದ್ಯದುದ್ದಕ್ಕೂ ಪ್ರಾಬಲ್ಯ ಮೆರೆದಿತ್ತು. ಹಲವು ಅವಕಾಶವನ್ನು ಪಡೆದಿದ್ದ ಫ್ರಾನ್ಸ್‌ಗೆ ಸ್ಪೇನ್ ತಡೆಗೋಡೆಯಾಗಿ ನಿಂತಿತು.

ಫ್ರಾನ್ಸ್ ಆರನೇ ನಿಮಿಷದಲ್ಲಿ ಗೋಲು ದಾಖಲಿಸಿ ಸ್ಪೇನ್‌ಗೆ ಆಘಾತ ನೀಡಿತು. ಟಿಮೊಥಿ ಕ್ಲೆಮೆಂಟ್ ಫೀಲ್ಡ್ ಗೋಲು ಮೂಲಕ ಫ್ರಾನ್ಸ್‌ನ ಗೋಲು ಖಾತೆ ತೆರೆದರು.

  48ನೇ ನಿಮಿಷದಲ್ಲಿ ಗೋಲು ಬಾರಿಸಿದ ಅಲ್ವಾರೊ ಇಗ್ಲೆಸಿಯಾಸ್ ಸ್ಪೇನ್ ತಿರುಗೇಟು ನೀಡಲು ನೆರವಾದರು. ಫ್ರಾನ್ಸ್‌ಗೆ ಪ್ರಮುಖ ಟೂರ್ನಿಯಲ್ಲಿ ಸ್ಪೇನ್‌ಗೆ ಮೊದಲ ಬಾರಿ ಸೋಲುಣಿಸುವ ಉತ್ತಮ ಅವಕಾಶ ಲಭಿಸಿತ್ತು. ಆದರೆ, ಸ್ಪೇನ್ ನಾಯಕ ಕಾರ್ಟೆಸ್ ತಂಡದ ನೆರವಿಗೆ ಧಾವಿಸಿ ಫ್ರಾನ್ಸ್‌ಗೆ ಗೆಲುವನ್ನು ನಿರಾಕರಿಸಿದರು.

ಸ್ಪೇನ್‌ಗೆ ಕೂಡ ಗೋಲು ಗಳಿಸುವ ಉತ್ತಮ ಅವಕಾಶಗಳಿದ್ದವು. ಆದರೆ, ಗೋಲ್‌ಕೀಪರ್ ಅರ್ಥರ್ ಥಿಫ್ರೆ ನೇತೃತ್ವದ ಫ್ರಾನ್ಸ್‌ನ ಡಿಫೆನ್ಸ್ ವಿಭಾಗ ಸ್ಪೇನ್‌ಗೆ ಗೋಲು ನಿರಾಕರಿಸಿತು.

ಸ್ಪೇನ್ ಪಂದ್ಯದಲ್ಲಿ ಒಟ್ಟು ಏಳು ಬಾರಿ ಪೆನಾಲ್ಟಿ ಕಾರ್ನರ್ ಅವಕಾಶ ಪಡೆದಿತ್ತು. ಆದರೆ,ಒಂದೂ ಬಾರಿಯೂ ಫ್ರಾನ್ಸ್‌ನ ರಕ್ಷಣಾಕೋಟೆ ಭೇದಿಸಲು ಸಾಧ್ಯವಾಗಲಿಲ್ಲ. ಸ್ಪೇನ್ ತಂಡ ಟೂರ್ನಮೆಂಟ್‌ನ ತನ್ನ ಮೊದಲ ಪಂದ್ಯದಲ್ಲಿ ಒಲಿಂಪಿಕ್ಸ್ ಚಾಂಪಿಯನ್ ಅರ್ಜೆಂಟೀನ ವಿರುದ್ಧ ಸೋತಿತ್ತು. ಫ್ರಾನ್ಸ್ ತಂಡ ನ್ಯೂಝಿಲೆಂಡ್ ವಿರುದ್ಧ 1-2 ಅಂತರದಿಂದ ಸೋಲುಂಡಿದೆ.

ಡಿ.6 ರಂದು ನಡೆಯಲಿರುವ ಅಂತಿಮ ಗ್ರೂಪ್ ಪಂದ್ಯದಲ್ಲಿ ಸ್ಪೇನ್ ತಂಡ ನ್ಯೂಝಿಲೆಂಡ್ ತಂಡವನ್ನೂ ಹಾಗೂ ಫ್ರಾನ್ಸ್ ತಂಡ ಅರ್ಜೆಂಟೀನ ತಂಡವನ್ನು ಎದುರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X