Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರದಿಂದ ಮಾಹಿತಿ ಆಯೋಗಕ್ಕೆ ಬೆದರಿಕೆ:...

ಕೇಂದ್ರದಿಂದ ಮಾಹಿತಿ ಆಯೋಗಕ್ಕೆ ಬೆದರಿಕೆ: ಮಾಜಿ ಮಾಹಿತಿ ಆಯುಕ್ತರ ಆರೋಪ

ರಾಷ್ಟ್ರಪತಿ ಹಸ್ತಕ್ಷೇಪಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ4 Dec 2018 9:02 PM IST
share
ಕೇಂದ್ರದಿಂದ ಮಾಹಿತಿ ಆಯೋಗಕ್ಕೆ ಬೆದರಿಕೆ: ಮಾಜಿ ಮಾಹಿತಿ ಆಯುಕ್ತರ ಆರೋಪ

ಹೊಸದಿಲ್ಲಿ, ಡಿ.4: ಕೇಂದ್ರ ಮಾಹಿತಿ ಆಯೋಗವು ಕೇಂದ್ರದಿಂದ (ಸಿಐಸಿ) ಕಾನೂನಾತ್ಮಕ ಬೆದರಿಕೆಯನ್ನು ಎದುರಿಸುತ್ತಿದೆ ಎಂದು ಮಾಜಿ ಮಾಹಿತಿ ಆಯುಕ್ತ ಶ್ರೀಧರ ಆಚಾರ್ಯುಲು ಮಂಗಳವಾರ ಆರೋಪಿಸಿದ್ದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹಸ್ತಕ್ಷೇಪಕ್ಕೆ ಮನವಿ ಮಾಡಿದ್ದಾರೆ.

 ಸಾರ್ವಜನಿಕ ಸಂಸ್ಥೆಗಳ ವಿರುದ್ಧ ದೂರುಗಳನ್ನು ದಾಖಲಿಸುವ ಜಾಗತಿಕ ವಿದ್ಯಾಮಾನದ ಮೇಲೆ ಬೆಳಕು ಚೆಲ್ಲಿ ರಾಷ್ಟ್ರಪತಿಗೆ ಬರೆದಿರುವ ಪತ್ರದಲ್ಲಿ ಆಚಾರ್ಯುಲು ಅವರು, ಇದೊಂದು ರೀತಿಯ ಬೆದರಿಕೆಯ ತಂತ್ರವಾಗಿದ್ದು ಗೆಲ್ಲಬೇಕೆಂಬ ಆಶಯದಿಂದಲ್ಲ, ಬದಲಿಗೆ ಗುರಿಯು ಓರ್ವ ವ್ಯಕ್ತಿ ಅಥವಾ ಸಂಘಟನೆ ವಿರುದ್ಧ ಹೇಳಿಕೆಗಳನ್ನು ನೀಡದಂತೆ ಬೆದರಿಸುವ ಉದ್ದೇಶದಿಂದ ದೂರು ದಾಖಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇಲ್ಲಿ ಗುರಿ ಸಿಐಸಿ ಮತ್ತು ಪ್ರಜೆಗಳಾಗಿದ್ದಾರೆ. ದುರಾದೃಷ್ಟವಶಾತ್, ಸರಕಾರವು ಸಿಐಸಿ ಮತ್ತು ಮಾಹಿತಿ ಕಾಯ್ದೆಯಡಿ ಮಾಹಿತಿ ಪಡೆಯಲು ಬಯಸುವ ಪ್ರಜೆಗಳ ವಿರುದ್ಧ ಎಲ್ಲ ದಿಕ್ಕುಗಳಿಂದಲೂ ನ್ಯಾಯಾಲಯದಲ್ಲಿ ದೂರುಗಳನ್ನು ದಾಖಲಿಸುತ್ತಿದೆ ಎಂದು ಆಚಾರ್ಯುಲು ಆರೋಪಿಸಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ಉದ್ದೇಶಪೂರ್ವಕ ಸಾಲಬಾಕಿದಾರರ ಹೆಸರುಗಳನ್ನು ಬಹಿರಂಗಪಡಿಸಿ ಎಂದು ಆರ್‌ಬಿಐಗೆ ನಿರ್ದೇಶನ ನೀಡುವುದು ಸೇರಿದಂತೆ ಅನೇಕ ಮಹತ್ವದ ಆದೇಶಗಳನ್ನು ನೀಡಿರುವ ಆಚಾರ್ಯುಲು ಸದ್ಯ ರಾಷ್ಟ್ರಪತಿ ರಾಮನಾಥ ಕೋವಿಂದ್ ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಮನವಿ ಮಾಡಿದ್ದಾರೆ.

“ನನ್ನ ಪ್ರಶ್ನೆಯೆಂದರೆ, ಸಿಐಸಿಯಾಗಿ ನಾನು ಕೇಂದ್ರ ಸರಕಾರದ ಭಾಗವಾಗಿದ್ದೇನೆ ಮತ್ತು ಅದೇ ಕೇಂದ್ರ ಸರಕಾರ ನನ್ನ ಆದೇಶದ ವಿರುದ್ಧ ಹೋರಾಡಿದರೆ ನನ್ನ ಪರ ನಿಲ್ಲುವವರು ಯಾರು?” ಎಂದು ಆಚಾರ್ಯುಲು ಪ್ರಶ್ನಿಸಿದ್ದಾರೆ. “ನನಗನಿಸುವ ಪ್ರಕಾರ, ಆಯುಕ್ತರೇ ನೀವು ಮಾಹಿತಿಯನ್ನು ಬಹಿರಂಗಪಡಿಸಲು ಆದೇಶ ನೀಡಬೇಡಿ. ನಿಮ್ಮ ಒಂದು ಆದೇಶಕ್ಕೆ ನಿಮ್ಮ ಮೇಲೆ ಮೂರು ದೂರುಗಳನ್ನು ದಾಖಲಿಸಲಾಗುವುದು” ಎಂದು ಸರಕಾರ ಸೂಚಿಸುವಂತಿದೆ ಎಂದು ಮಾಜಿ ಆಯುಕ್ತರು ತಿಳಿಸಿದ್ದಾರೆ. ಈಗಾಗಲೇ 1,700 ಮೇಲ್ಮನವಿಗಳನ್ನು ದಾಖಲಿಸಲಾಗಿದೆ. ಆಶ್ಚರ್ಯ ಮತ್ತು ಖೇದಕರವೆಂದರೆ ಇವುಗಳಲ್ಲಿ ಬಹುತೇಕವನ್ನು ಸರಕಾರ ಮತ್ತು ಆರ್‌ಬಿಐಯಂಥ ಅದರ ಅಂಗ ಸಂಸ್ಥೆಗಳೇ ದಾಖಲಿಸಿವೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X