Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೊದಲ ದಿನ ಅಗ್ರಸ್ಥಾನದಲ್ಲಿ 12 ತಂಡಗಳಿಗೆ...

ಮೊದಲ ದಿನ ಅಗ್ರಸ್ಥಾನದಲ್ಲಿ 12 ತಂಡಗಳಿಗೆ ತಲಾ 4 ಅಂಕಗಳು

ಮಣಿಪಾಲ: ದಕ್ಷಿಣ ವಲಯ ಅಂತರ ವಿವಿ ಪುರುಷರ ಚೆಸ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ4 Dec 2018 9:11 PM IST
share
ಮೊದಲ ದಿನ ಅಗ್ರಸ್ಥಾನದಲ್ಲಿ 12 ತಂಡಗಳಿಗೆ ತಲಾ 4 ಅಂಕಗಳು

 ಮಣಿಪಾಲ, ಡಿ.4: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಆಶ್ರಯದಲ್ಲಿ ದಕ್ಷಿಣ ವಲಯ ಅಂತರ ವಿವಿ ಪುರುಷರ ಚೆಸ್ ಚಾಂಪಿಯನ್‌ಷಿಪ್ ಇಂದು ಕೆಎಂಸಿಯ ಡಾ.ಟಿಎಂಎ ಪೈ ಸಭಾಂಗಣದಲ್ಲಿ ಪ್ರಾರಂಭಗೊಂಡಿದ್ದು, ಮೊದಲ ದಿನದ ಕೊನೆಗೆ ಎರಡು ಸುತ್ತಿನ ಪಂದ್ಯಗಳ ಕೊನೆಗೆ ಒಟ್ಟು 12 ತಂಡಗಳು ತಲಾ 4 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿವೆ.

ನಾಲ್ಕು ದಿನಗಳ ಈ ಚಾಂಪಿಯನ್‌ಷಿಪ್‌ನಲ್ಲಿ ದಕ್ಷಿಣ ವಲಯದ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ತೆಲಂಗಾಣ ಹಾಗೂ ಪಾಂಡಿಚೇರಿಯ ಒಟ್ಟು 57 ತಂಡಗಳು ಸ್ಪರ್ಧಿಸುತ್ತಿವೆ. ಸ್ವಿಸ್ ಲೀಗ್ ಮಾದರಿಯಲ್ಲಿ ಪ್ರತಿ ತಂಡಗಳು ಒಟ್ಟು ಏಳು ಪಂದ್ಯಗಳನ್ನು ಆಡಬೇಕಾಗಿದೆ.

ಟೂರ್ನಿಯನ್ನು ಶಿವಮೊಗ್ಗದ ಖ್ಯಾತ ಚೆಸ್ ಆಟಗಾರ ಅಂತಾರಾಷ್ಟ್ರೀಯ ಮಾಸ್ಟರ್ ಸ್ಟಾನಿ ಜೋರ್ಜ್ ಅಂತೋಣಿ ಅವರು ಉದ್ಘಾಟಿಸಿದರು. ಮಾಹೆ ವಿವಿಯಲ್ಲಿ ಚೆಸ್ ಸ್ಪರ್ಧೆಗೆ ಇರುವ ಸೌಲಭ್ಯವನ್ನು ಪ್ರಶಂಸಿಸಿದ ಅಂತೋಣಿ, ಈ ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಇಲ್ಲಿ ಅಂತಾರಾಷ್ಟ್ರೀಯ ಗ್ರಾಂಡ್ ಮಾಸ್ಟರ್ಸ್‌ ಟೂರ್ನಿಯನ್ನು ಸಹ ಆಯೋಜಿಸಬಹುದಾಗಿದೆ ಎಂದರು.

ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಉಪಸ್ಥಿತರಿದ್ದರು. ರಿಜಿಸ್ಟ್ರಾರ್ ಡಾ.ನಾರಾಯಮ ಸಭಾಹಿತ್ ಅತಿಥಿಗಳನ್ನು ಸ್ವಾಗತಿಸಿದರೆ, ಕ್ರೀಡಾ ಕಾರ್ಯದರ್ಶಿ ಡಾ.ವಿನೋದ್ ನಾಯಕ್ ವಂದಿಸಿದರು.

2158 ಸರಾಸರಿ ರೇಟಿಂಗ್‌ನೊಂದಿಗೆ ಹೈದರಾಬಾದ್‌ನ ಉಸ್ಮಾನಿಯಾ ವಿವಿ ಟೂರ್ನಿಯಲ್ಲಿ ಅಗ್ರಸೀಡ್ ತಂಡವಾಗಿದೆ. ಹಾಲಿ ಚಾಂಪಿಯನ್ ಚೆನ್ನೈನ ಅಣ್ಣಾ ವಿವಿ2121 ರೇಟಿಂಗ್‌ನೊಂದಿಗೆ ಎರಡನೇ ಸೀಡ್ ಪಡೆದಿದೆ.

ಎಸ್‌ಆರ್‌ಎಂ ವಿವಿಯ ಅಂತಾರಾಷ್ಟ್ರೀಯ ಮಾಸ್ಟರ್ ಎ.ಐ.ಮುತ್ತಯ್ಯ (2408), ಉಸ್ಮಾನಿಯಾ ವಿವಿಯ ಫಿಡೆ ಮಾಸ್ಟರ್ ಸಾಯಿಅಗ್ನಿ ಜೀವಿತ್ಸ್ (2336), ಮದರಾಸು ವಿವಿಯ ಕುಮಾರನ್ ಬಿ. ಹಾಗೂ ಅಣ್ಣಾ ವಿವಿಯ ಅಜಯ್ ಕೃಷ್ಣನ್ (2289) ಅವರು ಈ ಟೂರ್ನಿಯಲ್ಲಿ ಸ್ಪರ್ಧಿಸುತ್ತಿರುವ ಸ್ಟಾರ್ ಚೆಸ್ ಆಟಗಾರರಾಗಿದ್ದಾರೆ.

ಇಲ್ಲಿ ಮೊದಲ ನಾಲ್ಕು ಸ್ಥಾನಗಳನ್ನು ಪಡೆಯುವ ವಿವಿ ತಂಡಗಳು ಇದೇ ಡಿ.15ರಿಂದ ಮೀರತ್‌ನಲ್ಲಿ ನಡೆಯುವ ಅಖಿಲ ಭಾರತ ಅಂತರ ವಿವಿ ಚೆಸ್ ಟೂರ್ನಿಯಲ್ಲಿ ದಕ್ಷಿಣ ವಲಯದಿಂದ ಆಡಲು ತೇರ್ಗಡೆಗೊಳ್ಳಲಿವೆ. ಚೆನ್ನೈನ ಅಣ್ಣಾ ವಿವಿ ದಕ್ಷಿಣ ವಲಯದ ಹಾಲಿ ಚಾಂಪಿಯನ್ ತಂಡವಾದರೆ, ಚೆನ್ನೈನದೇ ಆದ ಎಸ್‌ಆರ್‌ಎಂ ವಿವಿ ರನ್ನರ್ ಅಪ್ ಆಗಿದೆ. ಬೆಂಗಳೂರಿನ ಪಿಇಎಸ್ ವಿವಿ ಹಾಗೂ ಕಲ್ಲಿಕೋಟೆ ವಿವಿಗಳು ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನಗಳನ್ನು ಕಳೆದ ಬಾರಿಯ ಟೂರ್ನಿಯಲ್ಲಿ ಪಡೆದಿವೆ.

ಇಂದಿನ ಎರಡನೇ ಸುತ್ತಿನ ಪ್ರಮುಖ ಪಂದ್ಯಗಳಲ್ಲಿ ಉಸ್ಮಾನಿಯಾ ವಿವಿ(4), ಕೇರಳ ವಿವಿ(2)ಯನ್ನು, ಅಣ್ಣಾ ವಿವಿ(4) ಕಲ್ಲಿಕೋಟೆ (2) ವಿವಿಯನ್ನು, ಮದರಾಸು ವಿವಿ (4) ಆಂಧ್ರ ವಿವಿ (2)ಯನ್ನು, ಎಸ್‌ಆರ್‌ಎಂ ವಿವಿ (4) ಭಾರತಿಯಾರ್ ವಿವಿ (2)ಯನ್ನು, ಕಣ್ಣೂರು ವಿವಿ(4) ಬೆಂಗಳೂರಿನ ಪಿಇಎಸ್(2) ವಿವಿಯನ್ನು , ಸುರತ್ಕಲ್‌ನ ಕರ್ನಾಟಕ ನೇಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (4) ಎಂಎಸ್‌ವಿವಿ (2)ಯನ್ನು ಹಾಗೂ ಮಂಗಳೂರು ವಿವಿ (4), ಆಚಾರ್ಯ ನಾಗಾರ್ಜುನ ವಿವಿ (2)ಯನ್ನು ಪರಾಭವಗೊಳಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X