Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕರೆನ್ಸಿ ವಿನಿಮಯ ಒಪ್ಪಂದಕ್ಕೆ ಭಾರತ,...

ಕರೆನ್ಸಿ ವಿನಿಮಯ ಒಪ್ಪಂದಕ್ಕೆ ಭಾರತ, ಯುಎಇ ಸಹಿ: ಸುಶ್ಮಾ ಸ್ವರಾಜ್, ಯುಎಇ ವಿದೇಶ ಸಚಿವರ ‘ಜಂಟಿ ಆಯೋಗ ಸಭೆ’

ವಾರ್ತಾಭಾರತಿವಾರ್ತಾಭಾರತಿ4 Dec 2018 9:20 PM IST
share
ಕರೆನ್ಸಿ ವಿನಿಮಯ ಒಪ್ಪಂದಕ್ಕೆ ಭಾರತ, ಯುಎಇ ಸಹಿ: ಸುಶ್ಮಾ ಸ್ವರಾಜ್, ಯುಎಇ ವಿದೇಶ ಸಚಿವರ ‘ಜಂಟಿ ಆಯೋಗ ಸಭೆ’

ಅಬುಧಾಬಿ, ಡಿ. 4: ಕರೆನ್ಸಿ ವಿನಿಮಯ ಸೇರಿದಂತೆ ಎರಡು ಒಪ್ಪಂದಗಳಿಗೆ ಭಾರತ ಮತ್ತು ಯುಎಇ ಮಂಗಳವಾರ ಸಹಿ ಹಾಕಿವೆ. ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ಎರಡು ದಿನಗಳ ಭೇಟಿಗಾಗಿ ಇಲ್ಲಿಗೆ ಬಂದ ಸಂದರ್ಭದಲ್ಲಿ ಒಪ್ಪಂದಗಳಿಗೆ ಸಹಿ ಬಿದ್ದಿವೆ. ಸೋಮವಾರ ಇಲ್ಲಿಗೆ ಆಗಮಿಸಿದ ಸುಶ್ಮಾರನ್ನು ಯುಎಇ ವಿದೇಶ ಸಚಿವ ಅಬ್ದುಲ್ಲಾ ಬಿನ್ ಝಾಯೇದ್ ಅಲ್ ನಹ್ಯನ್ ಸ್ವಾಗತಿಸಿದರು.

ಬಳಿಕ, ವ್ಯಾಪಾರ, ಭದ್ರತೆ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿನ ಉಭಯ ದೇಶಗಳ ನಡುವಿನ ಸಹಕಾರವನ್ನು ವೃದ್ಧಿಸುವ ನಿಟ್ಟಿನಲ್ಲಿ ಉಭಯ ನಾಯಕರು ‘ಜಂಟಿ ಆಯೋಗ ಸಭೆ’ (ಜೆಸಿಎಂ) ಮಾತುಕತೆ ನಡೆಸಿದರು.

‘‘ಸುಶ್ಮಾ ಸ್ವರಾಜ್ ಮತ್ತು ಯುಎಇ ವಿದೇಶ ಸಚಿವ ಶೇಖ್ ಅಬ್ದುಲ್ಲಾ ಬಿನ್ ಝಾಯಿದ್ ಅಲ್ ನಹ್ಯನ್ 12ನೇ ಭಾರತ-ಯುಎಇ ಜಂಟಿ ಆಯೋಗ ಸಭೆ ನಡೆಸಿದರು. ಇಂಧನ, ಭದ್ರತೆ, ವ್ಯಾಪರ, ಹೂಡಿಕೆ, ಬಾಹ್ಯಾಕಾಶ, ರಕ್ಷಣೆ, ಕಾನ್ಸುಲರ್ ಹಾಗೂ ಇತರ ವಿಷಯಗಳಲ್ಲಿ ಸಮಗ್ರ ಮಾತುಕತೆ ನಡೆಸಿದರು’’ ಎಂದು ವಿದೇಶ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

‘‘ಸುಶ್ಮಾ ಸ್ವರಾಜ್‌ರ ಯುಎಇ ಭೇಟಿಯ ವೇಳೆ ಎರಡು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ: ಒಂದು, ಕರೆನ್ಸಿ ವಿನಿಮಯ ಒಪ್ಪಂದ, ಇನ್ನೊಂದು, ಆಫ್ರಿಕದಲ್ಲಿ ಅಭಿವೃದ್ಧಿ ಸಹಕಾರಕ್ಕಾಗಿ ತಿಳುವಳಿಕೆ ಪತ್ರ’’ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

 ಕರೆನ್ಸಿ ವಿನಿಮಯ ಎಂದರೆ ಎರಡು ದೇಶಗಳು ತಮ್ಮ ನಡುವಿನ ವ್ಯಾಪಾರವನ್ನು ತಮ್ಮದೇ ಕರೆನ್ಸಿಗಳಲ್ಲಿ ಮಾಡುವುದು ಹಾಗೂ ಆಮದು ಮತ್ತು ರಫ್ತುಗಳಿಗೆ ಪೂರ್ವ ನಿರ್ಧರಿತ ವಿನಿಮಯ ದರದಲ್ಲಿ ತಮ್ಮದೇ ಕರೆನ್ಸಿಗಳನ್ನು ಪಾವತಿಸುವುದು. ಅಂದರೆ, ಅವುಗಳ ನಡುವಿನ ವ್ಯವಹಾರದಲ್ಲಿ ಅಮೆರಿಕದ ಡಾಲರ್‌ನಂತಹ ಮೂರನೇ ಕರೆನ್ಸಿ ಬರುವುದಿಲ್ಲ.

ಎರಡನೇ ಒಪ್ಪಂದವು, ಆಫ್ರಿಕದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಎರಡೂ ದೇಶಗಳಿಗೆ ಅವಕಾಶ ನೀಡುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X