Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೀಡಿ ಕಾರ್ಮಿಕರ ಮೇಲೆ ನಡೆಯುವ ವಂಚನೆ:...

ಬೀಡಿ ಕಾರ್ಮಿಕರ ಮೇಲೆ ನಡೆಯುವ ವಂಚನೆ: ತನಿಖೆಗೆ ರಾಜನ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 Dec 2018 9:28 PM IST
share
ಬೀಡಿ ಕಾರ್ಮಿಕರ ಮೇಲೆ ನಡೆಯುವ ವಂಚನೆ: ತನಿಖೆಗೆ ರಾಜನ್ ಆಗ್ರಹ

ಮಂಗಳೂರು/ಬೆಂಗಳೂರು, ಡಿ.4: ಬೀಡಿ ಕಾರ್ಮಿಕರಿಗೆ ಕಾನೂನು ಸವಲತ್ತು ಕಾರ್ಮಿಕರಿಗೆ ತಲುಪದೇ ಬೀಡಿ ಕಾರ್ಮಿಕರ ಬದುಕು ಚಿಂತಾಜನಕವಾಗಿದೆ. ಸರಕಾರ ಸವಲತ್ತು ನೀಡಿದರೂ ಹೊರದೇಶದಲ್ಲಿ ಮಾಲಕರ ಜೊತೆ ಒಪ್ಪಂದ ಮಾಡಿ ಸವಲತ್ತನ್ನು ಬಿಟ್ಟುಕೊಡುವ ಕೆಲವು ಕಾರ್ಮಿಕ ವಿರೋಧಿಗಳಿಂದ ಕಾರ್ಮಿಕರು ಬಲಿಪಶುವಾಗಿದ್ದಾರೆ. ಇದರ ತನಿಖೆ ನಡೆಸಬೇಕಿದೆ ಎಂದು ರಾಜ್ಯದ ಹಿರಿಯ ಕಾರ್ಮಿಕ ಮುಖಂಡ ಇ.ಕೆ.ಎನ್ ರಾಜನ್ ಆಗ್ರಹಿಸಿದರು.

ಬೆಂಗಳೂರು ಕಾರ್ಮಿಕ ಆಯುಕ್ತರ ಕಚೇರಿ ಎದುರು ದ.ಕ. ಜಿಲ್ಲಾ ಬೀಡಿ ಕಾರ್ಮಿಕ ಒಕ್ಕೂಟದ ನೇತೃತ್ವದಲ್ಲಿ ಮಂಗಳವಾರ ಬೀಡಿ ಕಾರ್ಮಿಕರು ಸರಕಾರ ನಿಗದಿಗೊಳಿಸಿದ ಕನಿಷ್ಠ ಕೂಲಿ 1,000 ಬೀಡಿಗೆ 220.52 ರೂ. ಜಾರಿ, 2015ರಿಂದ ಬಾಕಿಯಾದ ಡಿ.ಎ. ತಲಾ 11,934, ಹಾಗೂ ಕಾನೂನು ಬದ್ಧ ಹಕ್ಕಾದ ಗ್ರಾಚ್ಯುವಿಟಿ ಪಾವತಿಗಾಗಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ನಡೆದ ಬೀಡಿ ಕಾರ್ಮಿಕರ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಬಿ.ಎಂ.ಭಟ್ ಅವರಂತಹ ನಾಯಕತ್ವದಲ್ಲಿ ನಡೆಯುವ ಈ ನ್ಯಾಯಬದ್ಧ ಹೋರಾಟ ಯಶಸ್ವಿಯಾಗಲಿ, ಕಾರ್ಮಿಕ ದ್ರೋಹಿಗಳನ್ನು ಜಿಲ್ಲೆಯಲ್ಲಿ ಕಾಲೂರಲು ಬಿಬಾರದು ಎಂದು ಸಲಹೆ ನೀಡಿದ ಅವರು, ನ್ಯಾಯ ಸಿಗುವ ತನಕ ಹೋರಾಟ ಮುಂದುವರಿಯಲಿದೆ ಎಂದರು.

ಪ್ರಜಾರಂಗದ ಮುಖಂಡ ಅಸ್ತ್ರ ಆದಿತ್ಯ ಹೋರಾಟವನ್ನು ಬೆಂಬಲಿಸಿ ಮಾತಾಡುತ್ತಾ, ಕಾರ್ಮಿಕರಿಗೆ ಆಗುವ ವಂಚನೆಯನ್ನು ಕಾರ್ಮಿಕ ಇಲಾಖೆ, ಸರಕಾರ ಕಣ್ಣು ಮುಚ್ಚಿ ಕುಳಿತು ಪರೋಕ್ಷವಾಗಿ ಮಾಲಕರ ಹಿತ ಕಾಪಾಡುತ್ತಿದೆ ಎಂದು ಟೀಕಿಸಿದರು.

ಹೋರಾಟದ ನೇತೃತ್ವ ವಹಿಸಿದ್ದ ದ.ಕ. ಜಿಲ್ಲಾ ಬೀಡಿ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ನ್ಯಾಯವಾದಿ ಬಿ.ಎಂ.ಭಟ್ ಮಾತನಾಡಿ, ಸರಕಾರ ನಿಗದಿಗೊಳಿಸಿದ ಡಿ.ಎ. ಕನಿಷ್ಠ ಕೂಲಿಗಳು 2006ರಿಂದ ನಿರಂತರ ವಂಚನೆಯಾಗಲು ಕಾರಣ ಏನೆಂಬುದನ್ನು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೂಗೊಳ್ಳಬೇಕೆಂದು ಒತ್ತಾಯಿಸಿದರು.

ಕಾರ್ಮಿಕರ ವಿಶ್ವಾಸ ಕಳಕ್ಕೊಂಡ ದ.ಕ. ಜಿಲ್ಲೆಯ ಕಾರ್ಮಿಕ ಚಳವಳಿ ಇಂದು ಜಿಲ್ಲೆಯಲ್ಲಿ ಕೋಮುವಾದಿಗಳ ಬೆಳವಣಿಗೆಗೆ ಅವಕಾಶ ಮಾಡಿ ಕೊಟ್ಟಂತಾಗಿದೆ. ಮಾಲಕರ ಏಜೆಂಟರ ಮೂಲಕ ಕಾರ್ಮಿಕರ ಸದಸ್ಯತ್ವ ಮಾಡಿಸುವ ಕೆಲವು ಕಾರ್ಮಿಕ ಸಂಘಗಳ ದೆಸೆಯಿಂದ ಎಡಚಳವಳಿಗೂ ಹೊಡೆತ ಬಿದ್ದಿದೆ ಎಂದು ತಿಳಿಸಿದರು.

ರಾಜ್ಯದ ಬಹುಸಂಖ್ಯಾತ ಕಾರ್ಮಿಕ ವರ್ಗವಾದ ಬೀಡಿ ಕಾರ್ಮಿಕರ ಶೋಷಣೆಯ ತಡೆಯಲು ಮುಂದಾಗದೆ ಮಾಲಕರಿಂದ ಹಣ ಸಂಗ್ರಹಿಸಿ ಕಾರ್ಮಿಕರ ಸದಸ್ಯತ್ವ ಮಾಡಿಸುವವರ ಹಿಡಿತದ ನಾಯಕತ್ವದಿಂದ ಕಾರ್ಮಿಕರಿಗಷ್ಟೇ ಅಲ್ಲ, ರಾಜ್ಯದ ಎಡಚಳವಳಿಗೂ ಹೊಡೆತ ಬಿದ್ದಿದೆ. ಕಾರ್ಮಿಕರ ವಂಚನೆ ನಿಲ್ಲುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.

ಹೋರಾಟದಲ್ಲಿ ಪ್ರಮುಖರಾದ ನೆಬಿಸಾ, ಲೋಕೇಶ್ ಕುದ್ಯಾಡಿ, ನಾರಾಯಣ ಕೈಕಂಬ, ಜಯರಾಮ ಮಯ್ಯ, ಗುಡ್ಡಪ್ಪ ಗೌಡ, ಕೇಶವ ಗೌಡ, ಜಯಶ್ರೀ, ರಾಮಚಂದ್ರ, ಸಂಜೀವ ನಾಯ್ಕ, ಪುಷ್ಪಾ, ಧನಂಜಯ ಗೌಡ, ಡೊಂಬಯ ಗೌಡ ಮೊದಲಾದವರು ಇದ್ದರು. ಕ್ರಾಂತಿ ಗೀತೆ, ಘೋಷಣೆಗಳು ಹೋರಾಟದ ಮೆರುಗನ್ನು ಹೆಚ್ಚಿಸಿತ್ತು. ಸಂಘದ ಕಾರ್ಯದರ್ಶಿ ಈಶ್ವರಿ ಸ್ವಾಗತಿಸಿದರು. ಶ್ಯಾಮರಾಜ ಪಟ್ರಮೆ ವಂದಿಸಿದರು.

‘ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ’

2019ರ ಜನವರಿ 8 ಮತ್ತು 9ರಂದು ನಡೆಯಲಿರುವ ಕಾರ್ಮಿಕರ ಅಖಿಲ ಭಾರತ ಮುಷ್ಕರಕ್ಕೆ ಬೀಡಿ ಕಾರ್ಮಿಕರ ಸಂಪೂರ್ಣ ಬೆಂಬಲ ಇದೆ ಎಂದು ಸಂಘಟನೆಯ ಪ್ರಮುಖ ಬಿ.ಎಂ.ಭಟ್ ಘೋಷಿಸಿದರು.

ಬೀಡಿ ಕಾರ್ಮಿಕರಿಗೆ ಮಾಲಕರಿಂದ ಹಾಗೂ ಸರಕಾರದ ನಡೆಯಿಂದ ಆಗುವ ಅನ್ಯಾಯವನ್ನು ಪ್ರತಿಭಟಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ನೀಡಿದ ಕರೆಯಂತೆ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ, ಬೆಲೆ ಏರಿಕೆ, ಇತ್ಯಾದಿಗಳನ್ನು ಖಂಡಿಸುತ್ತಾ, ಕನಿಷ್ಠ ಕೂಲಿ, ಕೆಲಸದ ಭದ್ರತೆ ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ನಡೆಯಲಿರುವ ಕಾರ್ಮಿಕರ ಅಖಿಲ ಭಾರತ ಮುಷ್ಕರದಲ್ಲಿ ಬೀಡಿ ಕಾರ್ಮಿಕರು ಭಾಗವಹಿಸಿ ಯಶಸ್ವಿಗೊಳಿಸಲು ಶ್ರಮಿಸಿಲಿದ್ದಾರೆ ಎಂದು ಘೋಷಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X