Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಪಿಎಸ್‌ಸಿ ನೇಮಕಾತಿ ವಿಳಂಬ ಖಂಡಿಸಿ...

ಕೆಪಿಎಸ್‌ಸಿ ನೇಮಕಾತಿ ವಿಳಂಬ ಖಂಡಿಸಿ ಉದ್ಯೋಗಾಕಾಂಕ್ಷಿಗಳ ಧರಣಿ

ವಾರ್ತಾಭಾರತಿವಾರ್ತಾಭಾರತಿ4 Dec 2018 10:07 PM IST
share
ಕೆಪಿಎಸ್‌ಸಿ ನೇಮಕಾತಿ ವಿಳಂಬ ಖಂಡಿಸಿ ಉದ್ಯೋಗಾಕಾಂಕ್ಷಿಗಳ ಧರಣಿ

ಬೆಂಗಳೂರು, ಡಿ.4: ಕೆಪಿಎಸ್‌ಸಿ ನೇಮಕ ವಿಳಂಬವಾಗುತ್ತಿರುವುದನ್ನು ಖಂಡಿಸಿ ವಿವಿಧ ಇಲಾಖೆಗಳ ಉದ್ಯೋಗಾಕಾಂಕ್ಷಿಗಳು ಕೆಪಿಎಸ್‌ಸಿ ಕೇಂದ್ರ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.

ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ ನಗರದ ವಿಧಾನಸೌಧದ ಹಿಂಭಾಗದಲ್ಲಿನ ಕೆಪಿಎಸ್‌ಸಿ ಕಚೇರಿ ಎದುರು ಜಮಾಯಿಸಿದ್ದ ನೂರಾರು ಉದ್ಯೋಗಾಕಾಂಕ್ಷಿಗಳು ಕೆಪಿಎಸ್‌ಸಿ ವಿರುದ್ಧ ಧಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

2015ನೆ ವೃಂದದ ಕೆಪಿಎಸ್‌ಸಿ ಪರೀಕ್ಷೆಗಾಗಿ 2017ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದೇ ರೀತಿ, 2017ರ ಆಗಸ್ಟ್‌ನಲ್ಲಿ ಪ್ರಾಥಮಿಕ ಪರೀಕ್ಷೆ ಹಾಗೂ ಡಿಸೆಂಬರ್ ತಿಂಗಳಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗಿತ್ತು. ಆದರೆ, ಪರೀಕ್ಷೆಗಳು ನಡೆದು ಒಂದು ವರ್ಷವಾಗುತ್ತಿದ್ದರೂ ಫಲಿತಾಂಶ ಪ್ರಕಟಿಸಿಲ್ಲ. ಈ ಸಂಬಂಧ ಸರಕಾರಕ್ಕೆ ಹಾಗೂ ಕೆಪಿಎಸ್‌ಸಿ ಅಧಿಕಾರಿಗಳಿಗೆ ಹಲವು ಬಾರಿ ಪತ್ರ ಬರೆದು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೆಪಿಎಸ್‌ಸಿಯಿಂದ ನೇಮಕಾತಿಗಳಿಗಾಗಿ ಅಧಿಸೂಚನೆ ಹೊರಡಿಸಿ ನಿಗದಿತ ವಯೋಮಿತಿಯನ್ನು ಅಳವಡಿಸಲಾಗುತ್ತದೆ. ಆದರೆ, ಅವರು ಅಧಿಸೂಚನೆಯ ನಂತರ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಣೆ, ಅಂತಿಮ ಪಟ್ಟಿ ಪ್ರಕಟಣೆಗಾಗಿ ವಿಳಂಬ ಮಾಡುತ್ತಾರೆ. ಇದರಿಂದಾಗಿ ನಮ್ಮ ನೇಮಕಾತಿಯ ವಯೋಮಿತಿ ಮುಗಿದಿರುತ್ತದೆ. ಇಲ್ಲಿಗೆ ನಮ್ಮ ನೇಮಕಾತಿಗಳಿಗೆ ತಡೆ ನೀಡಲಾಗುತ್ತದೆ. ಕೆಪಿಎಸ್‌ಸಿ ಇಂತಹ ನೀತಿಗಳ ಮೂಲಕ ನಮ್ಮ ಜೀವನದ ಜತೆ ಚೆಲ್ಲಾಡವಾಡುತ್ತಿದೆ ಎಂದು ಕೆಎಎಸ್ ಅಭ್ಯರ್ಥಿ ರಘುನಾಥ್ ಬೇಸರ ವ್ಯಕ್ತಪಡಿಸಿದರು.

ಕೆಪಿಎಸ್‌ಸಿ ಅಧಿಕಾರಿಗಳೊಂದಿಗೆ ಸುಮಾರು ಒಂದೂವರೆ ಗಂಟೆಗಳ ಕಾಲ ಸುಧೀರ್ಷ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಶಾಸಕ ಸುರೇಶ್ ಕುಮಾರ್, ವಿವಿಧ ಇಲಾಖೆಗಳಲ್ಲಿ ಬಾಕಿಯಿರುವ ನೇಮಕಾತಿಗಳಿಗೆ ಸಂಬಂಧಿಸಿದಂತೆ ಕೂಡಲೇ ಪಟ್ಟಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದೇನೆ. ಅವರು ಕಾಲಾವಕಾಶ ಕೇಳಿದ್ದಾರೆ ಎಂದರು.

ಡಿ.26 ರವರೆಗೂ ಅಧಿವೇಶನ ಹಾಗೂ ಸಾಲು ಸಾಲುಗಳ ರಜೆಗಳ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಅಂತಿಮ ಪಟ್ಟಿ ಬಿಡುಗಡೆ ಮಾಡಲು ಕಾಲಾವಕಾಶ ನೀಡಲಾಗಿದೆ. ಅಷ್ಟರೊಳಗೆ ಅವರು ಪಟ್ಟಿ ಬಿಡುಗಡೆ ಮಾಡದಿದ್ದಲ್ಲಿ ಮತ್ತೊಮ್ಮೆ ಕೆಪಿಎಸ್‌ಸಿ ಬಾಗಿಲು ಕದ ತಟ್ಟಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕೆಪಿಎಸ್ಸಿ ಆಯ್ಕೆ ಮಾಡಿರುವ ಟೈಪಿಸ್ಟ್‌ಗಳ ಪಟ್ಟಿಗೆ ಅನುಮೋದನೆ ಸಿಗುವ ಸಾಧ್ಯತೆ ಇದೆ. ಅದೇ ರೀತಿ, ಅಬಕಾರಿ ಆರಕ್ಷಕ ಹುದ್ದೆಗಳಲ್ಲಿ ಮೂರು ದಿನಗಳಲ್ಲಿ ಮಹಿಳೆ, ಒಂದು ವಾರದಲ್ಲಿ ಪುರುಷರ ಆಯ್ಕೆ ಪಟ್ಟಿ ಬಿಡುಗಡೆಯಾಗಲಿದ್ದು, ಆರೋಗ್ಯ ನಿರೀಕ್ಷಕ ಹುದ್ದೆಗಳಿಗೆ ಒಂದು ವಾರದಲ್ಲಿ ಪಟ್ಟಿ ಪ್ರಕಟಿಸುವ ಭರವಸೆಯನ್ನು ಕೆಪಿಎಸ್ಸಿ ಅಧಿಕಾರಿಗಳು ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ದಿನಗಳಲ್ಲಿ ಕೆಪಿಎಸ್‌ಸಿ ಹೆಸರು ಸಂಪೂರ್ಣ ಹಾಳಾಗಿದೆ. ಅದನ್ನು ಸರಿಪಡಿಸಿಕೊಳ್ಳಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಇಚ್ಛಾಶಕ್ತಿಯಿಲ್ಲ. ಹೀಗಾಗಿ, ಯಾವುದೇ ಪ್ರಕ್ರಿಯೆಗಳು ಸುಗಮವಾಗಿ ನೆರವೇರಲು ಸಾಧ್ಯವಾಗುತ್ತಿಲ್ಲ ಎಂದು ಸುರೇಶ್ ಕುಮಾರ್ ದೂರಿದರು.

ನನ್ನ ಮಗುವಿಗೆ ಎರಡು ತಿಂಗಳಿದ್ದಾಗ ಪರೀಕ್ಷೆ ಬರೆದಿದ್ದೆ. ಈಗ ಮಗಳಿಗೆ ಎರಡು ವರ್ಷಗಳು ತುಂಬಿದೆ. ಇದುವರೆಗೂ ಫಲಿತಾಂಶ ಪ್ರಕಟವಾಗಿಲ್ಲ. ಕೆಪಿಎಸ್‌ಸಿ ಈ ನೀತಿಯಿಂದಾಗಿ ಸಂಕಷ್ಟದಲ್ಲಿದ್ದೇವೆ.

-ಪಲ್ಲವಿ, ಉದ್ಯೋಗಾಕಾಂಕ್ಷಿ, ಬೀದರ್

2016 ರಲ್ಲಿ ನೋಟಿಫಿಕೇಷನ್ ಬಂದು, ಪರೀಕ್ಷೆ ಬರೆದಿದ್ದೇವೆ. ಅದರ ಫಲಿತಾಂಶ ಪ್ರಕಟ ಮಾಡಲು ಒಂದು ವರ್ಷ ಬೇಕಾಯಿತು. ಇದೀಗ ಅಂತಿಮ ಪಟ್ಟಿ ಪ್ರಕಟಿಸಲು ಮುಂದಾಗುತ್ತಿಲ್ಲ. ನಾವು ಕೆಪಿಎಸ್‌ಸಿಯಲ್ಲಿ ಕೇಳಿದರೆ ಇವತ್ತು-ನಾಳೆ ಎಂದು ಅಲೆದಾಡಿಸುತ್ತಿದ್ದಾರೆ. ಪ್ರತಿಸಲ ಬೆಂಗಳೂರಿಗೆ ಬಂದು ಹೋಗಲು ಕನಿಷ್ಠ 2 ಸಾವಿರ ಬೇಕಾಗುತ್ತದೆ. ಅಲ್ಲದೆ, ನಾವು ಬೇರೆ ಕಡೆ ಕೆಲಸ ಹುಡುಕಿಕೊಳ್ಳಲು ಸಾಧ್ಯವಾಗುತ್ತಿಲ್ಲ.

-ರೇಖಾ, ಟೈಫಿಸ್ಟ್ ಉದ್ಯೋಗಾಕಾಂಕ್ಷಿ, ಬಳ್ಳಾರಿ

ನಾನು ಅಬಕಾರಿ ಆರಕ್ಷಕ ಹುದ್ದೆಗೆ ಪರೀಕ್ಷೆ ಬರೆದಿದ್ದೇನೆ. ಆದರೆ, ಇದುವರೆಗೂ ಅದರ ಫಲಿತಾಂಶ ಪ್ರಕಟಿಸಿಲ್ಲ. ನಾವು ಹಲವು ಬಾರಿ ಕೆಪಿಎಸ್‌ಸಿಗೆ ಪತ್ರ ಬರೆದು, ಖುದ್ದು ಭೇಟಿ ಮಾಡಿ ಕೇಳಿದರೂ ಸರಿಯಾದ ಉತ್ತರ ಸಿಗುತ್ತಿಲ್ಲ. ಪ್ರಾಧಿಕಾರ ಬೇಗ ಫಲಿತಾಂಶ ಪ್ರಕಟಿಸಿದರೆ, ಮುಂದಿನ ದಾರಿಯನ್ನು ಹುಡುಕಿಕೊಳ್ಳಲು ಸುಲಭವಾಗುತ್ತದೆ.

-ರವಿಕುಮಾರ್, ಉದ್ಯೋಗಾಕಾಂಕ್ಷಿ, ಚಿಕ್ಕಬಳ್ಳಾಪುರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X