Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ವಿಧಾನ ಪರಿಷತ್ ಸದಸ್ಯ ರಘು...

ದಾವಣಗೆರೆ: ವಿಧಾನ ಪರಿಷತ್ ಸದಸ್ಯ ರಘು ಆಚಾರ್ ವಿರುದ್ಧ ವಿವಿಧ ಸಂಘ-ಸಂಸ್ಥೆಗಳಿಂದ ಪ್ರತಿಭಟನೆ

ಶಿವಾಚಾರ್ಯ ಸ್ವಾಮಿಗಳ ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ

ವಾರ್ತಾಭಾರತಿವಾರ್ತಾಭಾರತಿ5 Dec 2018 6:31 PM IST
share
ದಾವಣಗೆರೆ: ವಿಧಾನ ಪರಿಷತ್ ಸದಸ್ಯ ರಘು ಆಚಾರ್ ವಿರುದ್ಧ ವಿವಿಧ ಸಂಘ-ಸಂಸ್ಥೆಗಳಿಂದ ಪ್ರತಿಭಟನೆ

ದಾವಣಗೆರೆ,ಡಿ.5: ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ವಿರುದ್ಧ ವಿವಿಧ ಸಂಘ-ಸಂಸ್ಥೆಗಳು, ಶ್ರೀಮಠದ ಸದ್ಭಕ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. 

ನಗರದ ಗಾಂಧಿ ವೃತ್ತದಲ್ಲಿ ರಘು ಆಚಾರ್ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.  

ಈ ಸಂದರ್ಭ ಮಾತನಾಡಿದ ಕೂಡಲ ಸಂಗಮದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ, ಬೆಳಗಾವಿ ಅಧಿವೇಶನದಲ್ಲಿ ರಘು ಆಚಾರ್ ದುರ್ವರ್ತನೆ ಬಗ್ಗೆ ಚರ್ಚಿಸಿ, ವಿಪ ಸದಸ್ಯತ್ವದಿಂದ ಅನರ್ಹಗೊಳಿಸಲಿ. ಒಂದು ವೇಳೆ ಸರ್ಕಾರ ಅಧಿವೇಶನದ ಒಳಗಾಗಿ ಕ್ರಮ ಕೈಗೊಳ್ಳದಿದ್ದರೆ ನಾವೆಲ್ಲರೂ ಸುವರ್ಣ ಸೌಧಕ್ಕೆ ಬರಬೇಕಾಗುತ್ತದೆ. ಸಿರಿಗೆರೆ ಮಠದ ಭಕ್ತರಷ್ಟೇ ಅಲ್ಲ, ಪಂಚಮಸಾಲಿ ಸಮಾಜ, ಜಾಗತಿಕ ಲಿಂಗಾಯತ ಮಹಾಸಭಾ ಇಡೀ ರಾಜ್ಯಾದ್ಯಂತ ಹೋರಾಟ ನಡೆಸಬೇಕಾದೀತು ಎಂದು ಎಚ್ಚರಿಸಿದ ಅವರು, ವಿಪ ಸಭಾಧ್ಯಕ್ಷರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಭಕ್ತಾದಿಗಳು ಸುವರ್ಣ ಸೌಧದತ್ತ ಹೊರಡಲು ಸಜ್ಜಾಗಬೇಕಾದೀತು. ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ. ವ್ಯಕ್ತಿಯ ದುರ್ವರ್ತನೆ ವಿರುದ್ಧದ ಹೋರಾಟ ಇದು. ಇಂತಹ ವ್ಯಕ್ತಿಯನ್ನು ಪಕ್ಷದಿಂದಲೇ ಉಚ್ಛಾಟಿಸುವ ಕೆಲಸ ಪಕ್ಷದಿಂದ ಆಗಬೇಕಾಗಿದೆ. ಒಬ್ಬ ಮಠಾಧೀಶರ ಬಗ್ಗೆ ಹಗುರ ಮಾತನಾಡಿದ್ದನ್ನು ಇಡೀ ಸಮಾಜ, ಸಮಸ್ತ ಭಕ್ತಾದಿಗಳು ತೀವ್ರವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಿ ಎಂದರು. 

ಶಿವಸೈನ್ಯ ಯುವಕ ಸಂಘದ ಹೆಮ್ಮನಬೇತೂರು ಶಶಿಧರ್ ಮಾತನಾಡಿ, ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯರ ಬಗ್ಗೆ ವಿಪ ಸದಸ್ಯ ರಘು ಆಚಾರ್ ಹಗುರವಾಗಿ ಮಾತನಾಡಿ, ಶ್ರೀಗಳು ಪೀಠ ತ್ಯಾಗ ಮಾಡಿ, ಮಠ ಬಿಟ್ಟು ಹೊರಗೆ ಬರಲಿ ಎಂಬ ಉದ್ಧಟತನ ಹೇಳಿಕೆ ನೀಡಿದ್ದನ್ನು ಇಡೀ ಸಮಾಜ ಖಂಡಿಸುತ್ತದೆ. ಗುರುಗಳ ಬಗ್ಗೆ ಹಗುರವಾಗಿ ಮಾತನಾಡಿರುವ ರಘು ಆಚಾರ್ ಗುರುಗಳ ಘನತೆ, ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಇದು ಕೇವಲ ತರಳಬಾಳು ಮಠ, ಮಠದ ಭಕ್ತರಿಗಷ್ಟೇ ಮಾಡಿದ ಅವಮಾನವಲ್ಲ. ಇಡೀ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಭಕ್ತ ವೃಂದಕ್ಕೆ, ಅಭಿಮಾನಿಗಳಿಗೆ ಮಾಡಿದ ಅವಮಾನ ಎಂದು ಆರೋಪಿಸಿದರು. 

ತಕ್ಷಣವೇ ರಘು ಆಚಾರ್ ಸಾರ್ವಜನಿಕವಾಗಿ ಕ್ಷಮೆಯಾಚಿಸಲೆಂದು ತಾಕೀತು ಮಾಡಿದ್ದರೂ ಇಲ್ಲಿವರೆಗೂ ಸ್ಪಂದಿಸಿಲ್ಲ.  ಸಾರ್ವಜನಿಕ ಕ್ಷಮೆ ಕೇಳುವಂತೆ ಸಿಎಂ ಕ್ರಮ ಕೈಗೊಳ್ಳಲಿ. ಈ ಬಗ್ಗೆ ಉದಾಸೀನ ಮಾಡಿದರೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಬೇಕಾದೀತು ಎಂದು ಎಚ್ಚರಿಸಿದರು. 

ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಎಂ. ಶಿವಕುಮಾರ ಮಾತನಾಡಿ, ರಘು ಆಚಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವವರೆಗೂ ರಾಜ್ಯಾದ್ಯಂತ ನಿರಂತರ ಹೋರಾಟ ನಡೆಸಲಿದ್ದು, ದಾವಣಗೆರೆಯಿಂದಲೇ ಹೋರಾಟ ಆರಂಭಗೊಂಡಿದೆ. ತಕ್ಷಣವೇ ಆಡಳಿತ ಮತ್ತು ವಿಪಕ್ಷಗಳ ಎಚ್ಚೆತ್ತು, ಪಕ್ಷಬೇಧ ಮರೆತು, ಯಾರಿಗೆ ಹೇಗೆ ಮಾತನಾಡಬೇಕೆಂಬ ಸಾಮಾನ್ಯ ಜ್ಞಾನವನ್ನು ಆ ವಿಪ ಸದಸ್ಯಗೆ ತಿಳಿ ಹೇಳಿ, ವಿಪ ಸದಸ್ಯತ್ವವನ್ನು ಅನರ್ಹಗೊಳಿಸಬೇಕೆಂದು ಹೇಳಿದರು. 

ರವಿಕುಮಾರ ನುಗ್ಗೇಹಳ್ಳಿ, ಧನಂಜಯ ಕಡ್ಲೇಬಾಳು, ಆವರಗೆರೆ ರುದ್ರಮುನಿ, ಎಸ್.ಟಿ. ಶಾಂತಗಂಗಾಧರ, ಸುನಿಲ್ ದಾಸಪ್ಳ, ಚೇತನ ಫಾರ್ಮ ಕೆ.ಇ.ಪ್ರಕಾಶ, ನಿಂಗರಾಜ ಅಗಸನಕಟ್ಟೆ, ವನಜಾ ಮಹಲಿಂಗಯ್ಯ, ಕುಮಾರ ಮೆಳ್ಳೇಕಟ್ಟೆ, ದೇವರಾಜ ಅಗಸನಕಟ್ಟೆ, ಶ್ರೀನಿವಾಸ ರಾಮಘಟ್ಟ ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X