ಡಿ. 7ರಿಂದ ಕಿಶೋರ ಯಕ್ಷಸಂಭ್ರಮ
ಉಡುಪಿ, ಡಿ.5: ಯಕ್ಷಗಾನ ಕಲಾರಂಗದ ಯಕ್ಷ ಶಿಕ್ಷಣ ಟ್ರಸ್ಟ್ನ ವತಿಯಿಂದ ನಡೆಯುವ ಕಿಶೋರ ಯಕ್ಷಗಾನ ಸಂಭ್ರಮ ಈ ಬಾರಿ ಡಿ.7ರಿಂದ 22ರವರೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಹಾಗೂ ಡಿ.23ರಿಂದ 29ರವರೆಗೆ ಬ್ರಹ್ಮಾವರದಲ್ಲಿ ನಡೆಯಲಿದೆ.
ಈ ಬಾರಿಯ ಕಿಶೋರ ಯಕ್ಷ ಸಂಭ್ರಮದ ಉದ್ಘಾಟನೆ ಡಿ.7ರ ಸಂಜೆ 3 ಗಂಟೆಗೆ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ. ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಯಕ್ಷಶಿಕ್ಷಣ ಟ್ರಸ್ಟ್ನ ಅಧ್ಯಕ್ಷ ಉಡುಪಿ ಶಾಸಕ ಕೆ. ರಘುಪತಿ ಟ್ ಉಪಸ್ಥಿತರಿರುವರು.
ಉಡುಪಿ ಆಸುಪಾಸಿನ 30 ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಂದ ಡಿ.22ರ ವರೆಗೆ ರಾಜಾಂಗಣದಲ್ಲಿ ಪ್ರದರ್ಶನಗಳು ನಡೆಯಲಿವೆ. ಉಳಿದ 14 ಪ್ರೌಢ ಶಾಲೆಗಳ ವಿದ್ಯಾರ್ಥಿಗಳ ಪ್ರದರ್ಶನ ಡಿ.23ರಿಂದ 29ರ ತನಕ ಬ್ರಹ್ಮಾವರದಲ್ಲಿ ಜರಗಲಿದೆ.
ಮೊದಲ ದಿನ ಉದ್ಘಾಟನೆಯ ಬಳಿಕ ಅನಂತೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಯಕ್ಷ ಶಿಕ್ಷಣ ಟ್ರಸ್ಟ್ನ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.