Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾನವ ಹಕ್ಕುಗಳ ಉಲ್ಲಂಘನೆ ಸತ್ಯವಾಗಿದ್ದರೆ...

ಮಾನವ ಹಕ್ಕುಗಳ ಉಲ್ಲಂಘನೆ ಸತ್ಯವಾಗಿದ್ದರೆ ಆಯೋಗ ಮಧ್ಯಪ್ರವೇಶಿಸಲಿದೆ: ನ್ಯಾ.ಡಿ.ಎಚ್.ವೇಲಾ

ವಾರ್ತಾಭಾರತಿವಾರ್ತಾಭಾರತಿ5 Dec 2018 10:03 PM IST
share

ಬೆಂಗಳೂರು, ಡಿ.5: ಪೊಲೀಸ್ ಕಸ್ಟಡಿಯಲ್ಲಿ ಸಂಭವಿಸುವ ಸಾವುಗಳು ಹಾಗೂ ಎನ್‌ಕೌಂಟರ್‌ಗಳ ಬಗ್ಗೆ ಆಯೋಗ ನಿಗಾ ಇಟ್ಟು, ಮಾನವ ಹಕ್ಕುಗಳ ಉಲ್ಲಂಘನೆ ಆಗಿದ್ದು ಸತ್ಯವೇ ಆಗಿದ್ದಲ್ಲಿ ಅಗತ್ಯಮಧ್ಯಪ್ರವೇಶ ಮಾಡಲಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾ.ಡಿ.ಎಚ್.ವೇಲಾ ಹೇಳಿದ್ದಾರೆ.

ಬುಧವಾರ ನಗರದ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಡಿ.10ರಂದು ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ನಡೆಯುತ್ತಿದ್ದು, ಮಾನವ ಹಕ್ಕುಗಳನ್ನು ಸ್ವಾಭಾವಿಕ ಹಕ್ಕುಗಳೆಂದು ಪರಿಗಣಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಾನವ ಹಕ್ಕುಗಳನ್ನು ಪಡೆದುಕೊಳ್ಳಲು ಮನುಷ್ಯ ಆಗಬೇಕಿರುವುದೊಂದೇ ಅರ್ಹತೆ. ಈ ವಿಚಾರದಲ್ಲಿ ಲಿಂಗ, ಜಾತಿ, ಧರ್ಮ, ಪ್ರದೇಶ, ಭಾಷೆ ಯಾವುದನ್ನೂ ನೋಡಲಾಗುವುದಿಲ್ಲ. ಖಾಸಗಿ ದೂರು ಅಥವಾ ಆಯೋಗ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡ ದೂರು ಮಾತ್ರವೇ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಪ್ರಮುಖ ಮಾನದಂಡ ಎಂದು ಹೇಳಿದರು. ಯಾವುದೇ ರೀತಿಯ ಮಾನವ ಹಕ್ಕುಗಳ ಉಲ್ಲಂಘನೆ ಯಾರೇ ಮಾಡಲಿ ಅದರ ಬಗ್ಗೆ ಆಯೋಗ ಗಮನಹರಿಸಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ವಶದಲ್ಲಿ ಸಂಭವಿಸುವ ಸಾವುಗಳು ಮತ್ತು ಎನ್‌ಕೌಂಟರ್‌ಗಳ ಬಗ್ಗೆಯೂ ಆಯೋಗ ನಿಗಾ ಇಟ್ಟು, ಸಂದರ್ಭಾನುಸಾರ ಅಗತ್ಯ ಮಧ್ಯಪ್ರವೇಶ ಮಾಡಲಿದೆ. ಈ ಮಧ್ಯ ಪ್ರವೇಶ ಕಾನೂನು ಪ್ರಕ್ರಿಯೆಯಲ್ಲಿನ ಹಸ್ತಕ್ಷೇಪ ಆಗಿರುವುದಿಲ್ಲ. ಏಕೆಂದರೆ, ಆಯೋಗ ವಿಚಾರಣಾ ನ್ಯಾಯಾಲಯ ಅಲ್ಲ. ಒಂದೊಮ್ಮೆ ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ಸ್ಪಷ್ಟತೆ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರಕಾರ ಅಥವಾ ಸಂಬಂಧಿಸಿದ ಶಿಸ್ತುಕ್ರಮ ಜಾರಿ ಪ್ರಾಧಿಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಮಾನವ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ಕಾಳಜಿಯೊಂದಿಗೆ ಕೆಲಸ ಮಾಡುವ ಹಲವು ಸಂಘಟನೆಗಳು, ವ್ಯಕ್ತಿಗಳು ಇದ್ದಿರಬಹುದು. ಆದರೆ, ನಕಲಿ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ಮಾನವ ಹಕ್ಕು ಕಾರ್ಯಕರ್ತರ ಸಂಖ್ಯೆ ಹೆಚ್ಚಾಗಿದೆ. ಈ ನಕಲಿಗಳ ಹಾವಳಿಯಲ್ಲಿ ಅಸಲಿಗಳು ಕಣ್ಮರೆಯಾಗುತ್ತಿದ್ದಾರೆ, ಮುಗ್ಧ ಜನ ಮೋಸ ಹೋಗುತ್ತಿದ್ದಾರೆ. ಹೀಗಾಗಿ, ನಕಲಿ ಸಂಘಟನೆಗಳು ಮತ್ತು ವ್ಯಕ್ತಿಗಳ ಬಗ್ಗೆ ಸಮಾಜ ಎಚ್ಚರದಿಂದಿರಬೇಕು. ಮಾನವ ಹಕ್ಕುಗಳ ಆಯೋಗವೊಂದೇ ಮಾನವ ಹಕ್ಕುಗಳ ರಕ್ಷಣೆಗೆ ಇರುವ ಏಕೈಕ ಹಾಗೂ ಸಾಂವಿಧಾನಿಕ ಸಂಸ್ಥೆ. ನಕಲಿಗಳ ಬಗ್ಗೆ ಕ್ರಮ ಕೈಗೊಳ್ಳಲು ಆಯೋಗಕ್ಕೆ ನೇರವಾಗಿ ಅಧಿಕಾರ ಇಲ್ಲದಿದ್ದರೂ, ಅಂತಹ ಪ್ರಕರಣಗಳು ಗಮನಕ್ಕೆ ಬಂದರೆ, ಕ್ರಮ ಜರುಗಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗುತ್ತದೆ ಎಂದು ತಿಳಿಸಿದರು.

ಆಯೋಗ ಅಸ್ತಿತ್ವಕ್ಕೆ ಬಂದಾಗಿನಿಂದ ಕಳೆದ 11 ವರ್ಷಗಳಲ್ಲಿ ಆಯೋಗದಲ್ಲಿ ಸುಮಾರು 77 ಸಾವಿರ ದೂರುಗಳು ದಾಖಲಾಗಿವೆ. ಈ ಫೈಕಿ ಶೇ.30ರಷ್ಟು ಆಯೋಗವು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ದೂರುಗಳಾಗಿವೆ. ಇದರಲ್ಲಿ 72,450 ದೂರುಗಳನ್ನು ವಿಲೇವಾರಿ ಮಾಡಲಾಗಿದೆ. 2018ರಲ್ಲಿ ಇಲ್ಲಿತನಕ 5 ಸಾವಿರ ದೂರುಗಳನ್ನು ಸ್ವೀಕರಿಸಲಾಗಿದ್ದು, ಹಿಂದಿನ ದೂರುಗಳು ಸೇರಿ 5,900 ದೂರುಗಳನ್ನು ವಿಲೇವಾರಿ ಮಾಡಲಾಗಿದೆ. 4,800 ದೂರುಗಳು ವಿಲೇವಾರಿಗೆ ಬಾಕಿ ಇವೆ. ಪ್ರತಿ ದಿನ ಸರಾಸರಿ 13 ರಿಂದ 15 ದೂರುಗಳು ದಾಖಲಾಗುತ್ತವೆ. ದೂರು ದಾಖಲಾದ ದಿನದಿಂದ 3 ತಿಂಗಳಲ್ಲಿ ಅದನ್ನು ವಿಲೇವಾರಿ ಮಾಡಲು ಆಯೋಗದಲ್ಲಿ ಮಿತಿ ನಿಗದಿಪಡಿಸಿಕೊಳ್ಳಲಾಗಿದೆ ಎಂದು ವೇಲಾ ತಿಳಿಸಿದರು.

ಆಯೋಗಕ್ಕೆ 110 ಸಿಬ್ಬಂದಿ ಬೇಕು. ಆದರೆ, ಸರಕಾರ 40 ಸಿಬ್ಬಂದಿಯನ್ನು ಮಾತ್ರ ಎರವಲು ಸೇವೆ ಮೇಲೆ ಒದಗಿಸಿದೆ. 36 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಆಯೋಗಕ್ಕೆ ಹಣಕಾಸಿನ ಸಮಸ್ಯೆ ಇಲ್ಲ. ಆದರೆ, ಸಿಬ್ಬಂದಿ ಮತ್ತು ಮೂಲ ಸೌಕರ್ಯಗಳ ಕೊರತೆ ಇದೆ. ಆದರೂ ಸೀಮಿತ ಸಂಪನ್ಮೂಲಗಳನ್ನು ಬಳಸಿಕೊಂಡು ಆಯೋಗ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X