Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮೆ ಹಣಕ್ಕಾಗಿ ಬೇರೊಬ್ಬನನ್ನು ಕೊಂದು...

ವಿಮೆ ಹಣಕ್ಕಾಗಿ ಬೇರೊಬ್ಬನನ್ನು ಕೊಂದು ತನ್ನ ಸಾವಿನ ನಾಟಕವಾಡಿದ ವ್ಯಕ್ತಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ6 Dec 2018 12:41 PM IST
share
ವಿಮೆ ಹಣಕ್ಕಾಗಿ ಬೇರೊಬ್ಬನನ್ನು ಕೊಂದು ತನ್ನ ಸಾವಿನ ನಾಟಕವಾಡಿದ ವ್ಯಕ್ತಿಯ ಬಂಧನ

ಚಂಡೀಗಢ, ಡಿ.6: ದೊಡ್ಡ ಮೊತ್ತದ ವಿಮೆ ಪಡೆಯುವ ದುರುದ್ದೇಶದಿಂದ ಕಾರ್ಮಿಕನೊಬ್ಬನನ್ನು ಕೊಂದು ತನ್ನ ಕಾರಿನಲ್ಲಿ ಆತನ ಮೃತದೇಹಕ್ಕೆ ಬೆಂಕಿ ಹಚ್ಚಿದ ವ್ಯಕ್ತಿಯನ್ನು ಪೊಲೀಸರು ಪಲ್ವಾಲ್ ರೈಲು ನಿಲ್ದಾಣದಿಂದ ಬಂಧಿಸಿದ್ದಾರೆ.

ಆರೋಪಿ ಆಕಾಶ್ ಎಂಬಾತ ಚಂಡೀಗಢದ ನಿವಾಸಿಯಾಗಿದ್ದಾನೆ. ಆಕಾಶ್ ಕುಟುಂಬಕ್ಕೆ ಆತನ ಹೆಸರಿನಲ್ಲಿದ್ದ ದೊಡ್ಡ ಮೊತ್ತದ ವಿಮೆ ಹಣ ಪಡೆಯುವ ಉದ್ದೇಶವಿತ್ತು. ಆಕಾಶ್ ಸೋದರಳಿಯ ರವಿ ಕುಮಾರ್ (29) ಎಂಬಾತ ಕೂಡ ಈ ಸಂಚಿನಲ್ಲಿ ಭಾಗಿಯಾಗಿದ್ದನೆಂದು ಹೇಳಲಾಗಿದ್ದು ಆತನನ್ನು ಹಿಮಾಚಲ ಪ್ರದೇಶದ ನಹಾನ್ ಎಂಬಲ್ಲಿಂದ ಈಗಾಗಲೇ ಬಂಧಿಸಲಾಗಿದೆ.

ನವೆಂಬರ್ 20ರಂದು ನಹಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿತ್ತು. ಜುಡ್ಡಾ ಕಾ ಜೋಹರ್ ಎಂಬಲ್ಲಿ ಕಾರೊಂದು ರಸ್ತೆ ಬದಿಗೆ ಡಿಕ್ಕಿ ಹೊಡೆದು ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಸುಟ್ಟು ಕರಕಲಾಗಿತ್ತು ಎಂದು ದೂರಲಾಗಿತ್ತು. ಘಟನೆಯಲ್ಲಿ ತನ್ನ ಕಾರಿನೊಳಗಿದ್ದ ಆಕಾಶ್ ಎಂಬಾತ ಸತ್ತಿದ್ದಾನೆಂದೂ ಹೇಳಲಾಗಿತ್ತು. ಫೊರೆನ್ಸಿಕ್ ತಜ್ಞರೂ ಮರು ದಿನ ಕಾರು ಪರಿಶೀಲಿಸಿದ್ದರು.

ಆದರೆ ಘಟನೆ ನಡೆದ ಮರುದಿನವೇ ಮರಣ ಪ್ರಮಾಣ ಪತ್ರ ನೀಡುವಂತೆ ಆಕಾಶ್ ಕುಟುಂಬ ಒತ್ತಡ ಹೇರಲಾರಂಭಿಸಿದಾಗ ಪೊಲೀಸರಿಗೆ ಸಂಶಯ ಮೂಡಲಾರಂಭಿಸಿತ್ತು. ಕೆಲ ದಿನಗಳ ಹಿಂದೆ ಪಂಜಾಬ್ ಪೊಲೀಸರ ತಂಡ ನಹಾನ್‌ಗೆ ಆಗಮಿಸಿ ರಾಜಸ್ಥಾನದಿಂದ ನಾಪತ್ತೆಯಾಗಿರುವ ಕಾರ್ಮಿಕನೊಬ್ಬನನ್ನು ಹುಡುಕಲು ಆಗಮಿಸಿದಾಗ ಪೊಲೀಸರ ಸಂಶಯ ಮತ್ತಷ್ಟು ಬಲಗೊಂಡಿತ್ತು. ಈ ಕಾರ್ಮಿಕ ಆಕಾಶ್‌ಗಾಗಿ ಕೆಲಸ ಮಾಡುತ್ತಿದ್ದನಲ್ಲದೆ ಕೊನೆಯ ಬಾರಿ ಆತ ಆಕಾಶ್‌ಗೇ ಕರೆ ಮಾಡಿದ್ದ.

ತರುವಾಯ ರವಿ ಡಿಸೆಂಬರ್ 3ರಂದು ನಹಾನ್‌ಗೆ ಭೇಟಿ ನೀಡಿದಾಗ ಆತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಆಕಾಶ್ ತನ್ನದೇ ಕಾರನ್ನು ಸುಟ್ಟಾಗ ರವಿ ಆತನ ಜತೆಗಿದ್ದನೆಂದು ತಿಳಿದು ಬಂದಿತ್ತು. ಆಕಾಶ್ ಉದ್ದೇಶಪೂರ್ವಕವಾಗಿ ತನ್ನ ಕಾರು ನವೆಂಬರ್ 19, 20ರ ರಾತ್ರಿ ಅಪಘಾತಕ್ಕೀಡಾಗುವಂತೆ ಮಾಡಿ ಅದರಲ್ಲಿ ಕಾರ್ಮಿಕನ ಮೃತದೇಹ ಇರುವಂತೆಯೇ ಬೆಂಕಿ ಹಚ್ಚಿದ್ದ.

ಆತ ಬಿಹಾರದಿಂದ ದಿಲ್ಲಿಗೆ ಡಿಸೆಂಬರ್ 4ರಂದು ರೈಲಿನಲ್ಲಿ ಸಂಚರಿಸುತ್ತಿದ್ದಾಗ ಆತನನ್ನು ಬಂಧಿಸಲಾಯಿತು. ಆದರೆ ಆತ ಕಾರ್ಮಿಕನನ್ನು ಹೇಗೆ ಕೊಂದ ಎಂಬ ಬಗ್ಗೆ ವಿಚಾರಣೆಯಿಂದ ಇನ್ನಷ್ಟೇ ತಿಳಿಯಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X