Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೊರ ರಾಜ್ಯದ ವಿದ್ಯಾರ್ಥಿಗಳ ಪುಂಡಾಟಕ್ಕೆ...

ಹೊರ ರಾಜ್ಯದ ವಿದ್ಯಾರ್ಥಿಗಳ ಪುಂಡಾಟಕ್ಕೆ ಹೈಕೋರ್ಟ್ ಅಸಮಾಧಾನ

‘ಒದ್ದು ಕಾಲೇಜಿನಿಂದ ಹೊರಹಾಕಿ’

ವಾರ್ತಾಭಾರತಿವಾರ್ತಾಭಾರತಿ6 Dec 2018 11:03 PM IST
share
ಹೊರ ರಾಜ್ಯದ ವಿದ್ಯಾರ್ಥಿಗಳ ಪುಂಡಾಟಕ್ಕೆ ಹೈಕೋರ್ಟ್ ಅಸಮಾಧಾನ

ಬೆಂಗಳೂರು, ಡಿ.6: ನಗರದಲ್ಲಿರುವ ಹೊರ ರಾಜ್ಯದ ವಿದ್ಯಾರ್ಥಿಗಳ ಪುಂಡಾಟಕ್ಕೆ ಹೈಕೋರ್ಟ್ ಆತಂಕ ವ್ಯಕ್ತಪಡಿಸಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಸಾಮಾಜಿಕ ಹೊಣೆಗಾರಿಕೆ ಎಂಬುದು ಇಲ್ಲವಾಗಿದೆ. ಅಲ್ಲದೆ, ಲಾಭದ ಆಸೆಗಾಗಿ ಇಂತಹ ಕಿಡಿಗೇಡಿಗಳನ್ನು ಸುಮ್ಮನೆ ಬಿಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ನಗರದ ಡೀಮ್ಡ್ ವಿಶ್ವ ವಿದ್ಯಾಲಯದ ಕಾನೂನು ವಿದ್ಯಾರ್ಥಿನಿಯೊಬ್ಬರು ಹೊರ ರಾಜ್ಯದಿಂದ ಬಂದ ತನ್ನ ಸಹಪಾಠಿಗಳು ಮಾನಸಿಕ ದೌರ್ಜನ್ಯ ನೀಡುತ್ತಿದ್ದಾರೆಂದು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲೆ ಜಯ್ನ ಕೊಠಾರಿ ಅವರು, ಹೊಸದಿಲ್ಲಿಯಿಂದ ಬಂದು ಇಲ್ಲಿ ಕಲಿಯುತ್ತಿರುವ ಇಬ್ಬರು ಸಹಪಾಠಿಗಳು, ವಿದ್ಯಾರ್ಥಿನಿ ಮೊಬೈಲ್‌ಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳು ಮೋಜಿನ ಜೀವನ ಮಾಡುತ್ತಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಡೀಮ್ಡ್ ಯೂನಿವರ್ಸಿಟಿ ಪರ ವಕೀಲರಿಗೆ ತೀವ್ರ ತರಾಟೆಗೆ ತಗೆದುಕೊಂಡರು. ಕಾಲೇಜು ಕ್ಯಾಂಪಸ್‌ಗಳಲ್ಲಿನ ಈ ರೀತಿಯ ಚಟುವಟಿಕೆಗಳನ್ನು ನಿಯಂತ್ರಣ ಮಾಡಬೇಕು. 19ರ ಹರೆಯದಲ್ಲಿರುವ ಇಂತಹ ವಿದ್ಯಾರ್ಥಿಗಳು ಮುಂದೆ ಸಮಾಜ ಘಾತುಕ ಶಕ್ತಿಗಳಾಗುತ್ತಾರೆ. ರಾಜ್ಯಕ್ಕೆ, ದೇಶಕ್ಕೆ ಕೆಟ್ಟ ಹೆಸರು ತರುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅವರ ಅಪ್ಪಅಮ್ಮ ಕಷ್ಟಪಟ್ಟು ದುಡಿದು ಹಣ ಕಳುಹಿಸಿ ಓದಿಸುತ್ತಾರೆ. ಆದರೆ ಅವರು ಇಲ್ಲಿ ಬಂದು ಮೋಜಿನ ಜೀವನ ಮಾಡುತ್ತಿದ್ದಾರೆ. ಇಂತಹವರನ್ನೆಲ್ಲಾ ಒದ್ದು ಆಚೆಗೆ ಹಾಕಬೇಕು. ಇಂತಹ ವಿದ್ಯಾರ್ಥಿಗಳನ್ನು ಮಿಲಿಟರಿ ಶಿಸ್ತಿನಲ್ಲಿ ಸದೆ ಬಡಿದರೆ ಬುದ್ಧಿ ಬರುತ್ತದೆ ಎಂದು ನ್ಯಾಯಾಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಡೀಮ್ಡ್ ಪರ ವಾದಿಸಿದ ವಕೀಲರು, ಅಕಸ್ಮಾತ್ ಆಗಿ ಈ ರೀತಿಯ ಸಂದೇಶಗಳು ಮೊಬೈಲ್‌ನಲ್ಲಿ ರವಾನೆಯಾಗಿವೆ. ಅರ್ಜಿದಾರರು ಮುಗ್ಧರು ಅದಕ್ಕೆ ಅವರು ನೊಂದುಕೊಂಡಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ಆಗ ಮತ್ತೆ ಗರಂ ಆದ ನ್ಯಾಯಮೂರ್ತಿಗಳು, ನೀವು ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷರು ಎಂಬುದನ್ನು ಮರೆಯಬೇಡಿ. ಕಾನೂನು ಕಾಲೇಜಿನಲ್ಲಿ ಈ ರೀತಿಯ ಚಟುವಟಿಕೆ ನಡೆಯುತ್ತಿವೆ ಎಂದಾದರೆ ನೀವೇನು ಮಾಡುತ್ತಿದ್ದೀರಿ. ನಿಮಗೆ ಬರೀ ಪರಿಷತ್ ಚುನಾವಣೆಯದ್ದೇ ಧ್ಯಾನ ಎಂದು ತರಾಟೆ ತಗೆದುಕೊಂಡರು.

ಬಳಿಕ ಈ ಪ್ರಕರಣ ಅರ್ಜಿದಾರರು ಮತ್ತು ಪ್ರತಿವಾದಿಗಳ ಎರಡು ಕಡೆಯ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ. ಅರ್ಜಿದಾರರ ಪರ ವಕೀಲೆ ಜಯ್ನೆ ಕೊಠಾರಿ ಮತ್ತು ನೀವು ಕುಳಿತು ಮಾತುಕತೆ ನಡೆಸಿ. ಸಮಸ್ಯೆಗೆ ಪರಿಹಾರ ಕಂಡುಕೊಂಡು ಕೋರ್ಟ್‌ಗೆ ತಿಳಿಸಿ ಎಂದು ಸೂಚಿಸಿ, ಪ್ರಕರಣದ ವಿಚಾರಣೆಯನ್ನು ಡಿ.14ಕ್ಕೆ ಮುಂದೂಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X