Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಹಿತ್ಯ ನಮ್ಮ ಅಂತರಂಗದ ಶುದ್ಧತೆಯನ್ನು...

ಸಾಹಿತ್ಯ ನಮ್ಮ ಅಂತರಂಗದ ಶುದ್ಧತೆಯನ್ನು ಕಾಪಾಡುವ ಕೊಂಡಿ: ಪ್ರೊ. ಟಿ.ಪಿ ಅಶೋಕ್

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ6 Dec 2018 11:06 PM IST
share
ಸಾಹಿತ್ಯ ನಮ್ಮ ಅಂತರಂಗದ ಶುದ್ಧತೆಯನ್ನು ಕಾಪಾಡುವ ಕೊಂಡಿ: ಪ್ರೊ. ಟಿ.ಪಿ ಅಶೋಕ್

ಬೆಳ್ತಂಗಡಿ, ಡಿ. 6: ನಮ್ಮ ನಡುವೆ ಇರುವ ಎಲ್ಲ ಗೊಂದಲಗಳ ನಡುವೆಯೂ ಸಾಹಿತ್ಯ ಇಂದಿಗೂ ಹೆಚ್ಚು ಪ್ರಸ್ತುತವಾಗಿದೆ. ಸಾಹಿತ್ಯ ಮಾತ್ರ ನಮ್ಮ ಅಂತರಂಗದ ಶುದ್ಧತೆಯನ್ನು ನೈತಿಕತೆಯನ್ನು ಕಾಪಾಡುವ ಕೊಂಡಿಯಾಗಿದೆ. ಓದುಗನ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸುವ ಕಾರ್ಯವನ್ನು ಸಾಹಿತ್ಯ ಮಾಡಬೇಕಾಗಿದೆ ಎಂದು ಹಿರಿಯ ವಿಮರ್ಶಕ ಪ್ರೊ. ಟಿ.ಪಿ ಅಶೋಕ್ ಹೇಳಿದರು.

ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಅಂಗವಾಗಿ ನಡೆದ ಸಾಹಿತ್ಯಸಮ್ಮೇಳನದ 86ನೆ ಅಧಿವೇಶನದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕಾವ್ಯ ಸೃಷ್ಟಿಯ ಒಂದು ತುದಿಯಲ್ಲಿ ಲೇಖಕನಿರುತ್ತಾನೆ, ಮತ್ತೊಂದು ತುದಿಯಲ್ಲಿ ಓದುಗನಿರುತ್ತಾನೆ, ಓದುಗ ಓದಿದಾಗ ಮಾತ್ರ ಅದು ಪೂರ್ಣತೆಯನ್ನು ಪಡೆಯಲು ಸಾಧ್ಯವಾಗುತ್ತದೆ. ಕಾವ್ಯ ಯಾವಾಗಲೂ ಒಂದೇ ಅರ್ಥ  ನೀಡುವುದಿಲ್ಲ ಅದು ಬಹು ಅರ್ಥಗಳ ಚಿಂತನೆಗಳನ್ನು ನೀಡುತ್ತದೆ, ನಮ್ಮ ಅನುಭವಗಳನ್ನು ಇತರರ ಅನುಭವಗಳೊಂದಿಗೆ ಸಂವಾದ ನಡೆಯಬೇಕಾಗಿದೆ. ಅದೇ ಪ್ರಜಾಸತ್ತಾತ್ಮಕ ಮೌಲ್ಯವಾಗಿದೆ, ಭಿನ್ನ ದ್ವನಿಗಳನ್ನು ಕೇಳುವ ಸಂವಾದ ಮಾಡುವ ಕಾರ್ಯ ನಡೆಯಬೇಕಾಗಿದೆ ಎಂದು ಅವರು ಹೇಳಿದರು.

ಸಾಹಿತ್ಯ ಸಮ್ಮೇಳನದ ಉದ್ಘಾಟನೆಯನ್ನು ಉಧ್ಯಮಿ ವಿಜಯ ಸಂಕೇಶ್ವರ್ ನೆರವೇರಿಸಿ ಮಾತನಾಡುತ್ತಾ ಚಿಕ್ಕ ಕೆಲಸಗಳನ್ನು ಶ್ರದ್ಧೆಯಿಂದ ಮಾಡಿದಾಗ ದೊಡ್ಡ ಕೆಲಸಗಳನ್ನು ಮಾಡಲು ಅವಕಾಶ ದೊರಕುತ್ತದೆ. ಕಾಯಕದ ಮಹತ್ವವನ್ನು ಯುವ ಜನತೆಗೆ ತಿಳಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದರು.  

ಪ್ರಾಸ್ತಾವಿಕವಾಗಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಮನುಷ್ಯ ಸುಶಿಕ್ಷಿತನಾದಂತೆ ಅವನಲ್ಲಿ ಸುಪ್ತವಾಗಿರುವ ವಿವೇಕಪ್ರಜ್ಞೆ ಜಾಗೃತವಾಗಬೇಕು ಪರಿಣಾಮವಾಗಿ ಮೂಢನಂಬಿಕೆ ಅಂಧ ವಿಶ್ವಾಸ, ಕಟ್ಟು ಕಥೆಗಳು ದೂರವಾಗಬೇಕು ಶುದ್ದ ಯಾಥಾರ್ಥದಲ್ಲಿ  ಜ್ಞಾನವು ಬೆಳೆಯಬೇಕು ಸಹಿತ್ಯವೂ ಬೆಳೆಯಬೇಕು, ಆಗ ಜಗತ್ತನ್ನು ಜಗತ್ತಿನ ರಹಸ್ಯಗಳನ್ನು ಮಾನವ ಬದುಕಿನ ಉದ್ದೇಶಗಳನ್ನು ತಿಳಿದುಕೊಂಡು ಮುನ್ನಡೆಯಲು ಸಾಧ್ಯವಾಗುತ್ತದೆ ಎಂದರು. 

ಸಮ್ಮೇಳನದಲ್ಲಿ ಕುವೆಂಪು ದರ್ಶನ ವಿಚಾರದ ಬಗ್ಗೆ ಮಾತನಾಡಿದ ದ. ಕ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ. ಬಿ.ಆರ್.ರವಿಕಾಂತೇಗೌಡ ಕುವೆಂಪು ಅವರು ಕೇವಲ ಕಾವ್ಯಕ್ಕೆ ಮಾತ್ರ ಸೀಮಿತರಾಗಿಲ್ಲ ಅವರು ಮುಂದಿಟ್ಟ ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವನ್ನು ಮುಂದಿಟ್ಟ ಶ್ರೇಷ್ಟ ಚಿಂತಕ. ವೈಚಾರಿಕತೆಯನ್ನು ಮುಂದಿಟ್ಟ ಕುವೆಂಪು ಅವರು ಎಂದಿಗೂ ನಾಸ್ತಿಕವಾದಿಯಾಗಿರಲಿಲ್ಲ. ಅವರು ವೈಚಾರಿಕತೆಯನ್ನು ಮುಂದಿಡುವಾಗಲೇ ಆಧ್ಯಾತ್ಮಿಕತಾವಾದಿಯೂ ಆಗಿದ್ದರು, ಜಗತ್ತಿನ ಸೃಷ್ಟಿಯ ಮೂಲ ನೆಲೆಯನ್ನು ಅರಿಯುವುದು ಆಧ್ಯಾತ್ಮದ ಗುರಿಯೂ ಆಗಿದೆ ವೈಚಾರಿಕತೆ ವಿಜ್ಞಾನದ ಗುರಿಯೂ ಆಗಿದೆ ಎಂದರು.

ಗೋಷ್ಟಿಯಲ್ಲಿ ಕನ್ನಡದಲ್ಲಿ ವೈಜ್ಞಾನಿಕ ಸಾಹಿತ್ಯ ಎಂಬ ವಿಚಾರದ ಬಗ್ಗೆ ಮಾತನಾಡಿದ ಅಬ್ದುಲ್ ರಹಿಮಾನ್ ಪಾಷಾ ಅಕ್ಷರ ಸಾಕ್ಷರತೆಯೊಂದಿಗೆ ವೈಜ್ಞಾನಿಕ ಸಾಕ್ಷರತೆಯನ್ನು ಬೆಳೆಸುವ ಅಗತ್ಯವಿದೆ, ವಿಜ್ಞಾನವನ್ನು ಇನ್ನಷ್ಟು ಜನರ ಹತ್ತಿರ ಕೊಂಡೊಯ್ಯುವ ಕಾರ್ಯವನ್ನು ಮಾಡಬೇಕಾಗಿದೆ ಎಂದರು.

ಕಗ್ಗದಲ್ಲಿ ಜೀವನ ಮೌಲ್ಯಗಳ ಬಗ್ಗೆ ಕವಿತಾ ಅಡೂರ್ ಮಂಡಿಸಿದರು. ವೇದಿಕೆಯಲ್ಲಿ ಡಿ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು. ಶ್ರದ್ದಾ ಅಮಿತ್ ಹಾಗೂ ಶ್ರೇಯಸ್ ಕುಮಾರ್ ಸನ್ಮಾನಿತರ ಪರಿಚಯ ಮಾಡಿದರು. ಸುವರ್ಣ ಸಂಚಿಕೆ ಮಾಲಿಕೆಯ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಪ್ರೊ.ಎಂ ರಾಮಚಂದ್ರ ಕಾರ್ಯಕ್ರಮ ನಿರೂಪಿಸಿದರು. ವಿನಯಕುಮಾರ್ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X