Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿಕೂಲ ಸಾಕ್ಷಿಯಿಂದ ತನಿಖೆಗೆ ಅಡ್ಡಿ:...

ಪ್ರತಿಕೂಲ ಸಾಕ್ಷಿಯಿಂದ ತನಿಖೆಗೆ ಅಡ್ಡಿ: ಸಿಬಿಐ

ಸೊಹ್ರಾಬುದ್ದೀನ್ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ6 Dec 2018 11:15 PM IST
share
ಪ್ರತಿಕೂಲ ಸಾಕ್ಷಿಯಿಂದ ತನಿಖೆಗೆ ಅಡ್ಡಿ: ಸಿಬಿಐ

ಮುಂಬೈ, ಡಿ.6: ಸೊಹ್ರಾಬುದ್ದೀನ್ ಶೇಖ್ ಮತ್ತು ತುಲಸೀರಾಮ್ ಪ್ರಜಾಪತಿ ನಕಲಿ ಎನ್‌ಕೌಂಟರ್ ಪ್ರಕರಣದ ಅಂತಿಮ ವಿಚಾರಣೆ ಬುಧವಾರ ನಡೆದಿದ್ದು, ಈ ಸಂದರ್ಭ ಹೇಳಿಕೆ ನೀಡಿದ ಸಿಬಿಐ, ಪ್ರತಿಕೂಲ ಸಾಕ್ಷಿಯಿಂದ ತನಿಖೆಗೆ ಅಡ್ಡಿಯಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ. ಪ್ರಕರಣದ ಅಂತಿಮ ವಾದ ಪ್ರತಿವಾದ ಸೋಮವಾರ ಆರಂಭಗೊಂಡಿದ್ದು 22 ಆರೋಪಿಗಳ ವಕೀಲರು ವಿಶೇಷ ಸಿಬಿಐ ನ್ಯಾಯಾಧೀಶ ಎಸ್.ಜೆ ಶರ್ಮರೆದುರು ತಮ್ಮ ವಾದ ಮಂಡಿಸಿದರು. ಬಹುತೇಕ ಆರೋಪಿಗಳು ಗುಜರಾತ್ ಮತ್ತು ರಾಜಸ್ತಾನದ ಪೊಲೀಸ್ ಸಿಬ್ಬಂದಿಗಳಾಗಿದ್ದಾರೆ. 2005ರಲ್ಲಿ ಗುಜರಾತ್ ಪೊಲೀಸರು ನಡೆಸಿದ್ದ ನಕಲಿ ಎನ್‌ಕೌಂಟರ್‌ನಲ್ಲಿ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದರೆಂದು ಶಂಕಿಸಲಾದ ಸೊಹ್ರಾಬುದ್ದೀನ್ ಶೇಖ್ ಮತ್ತು ಆತನ ಪತ್ನಿ ಕೌಸರ್ ಬಿ ಹತರಾಗಿದ್ದರು. ಈ ಅವಳಿ ಹತ್ಯೆಯ ಪ್ರತ್ಯಕ್ಷದರ್ಶಿಯಾಗಿದ್ದ ಶೇಖ್‌ನ ಸಹವರ್ತಿ ಪ್ರಜಾಪತಿಯನ್ನು ಮತ್ತೊಂದು ನಕಲಿ ಎನ್‌ಕೌಂಟರ್‌ನಲ್ಲಿ ಗುಜರಾತ್ ಮತ್ತು ರಾಜಸ್ತಾನದ ಪೊಲೀಸರು ಹತ್ಯೆ ಮಾಡಿದ್ದಾರೆ ಎಂದು ಸಿಬಿಐ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಆರಂಭದಲ್ಲಿ ಈ ಪ್ರಕರಣದ ತನಿಖೆಯನ್ನು ಗುಜರಾತ್ ಸಿಐಡಿಗೆ ವಹಿಸಲಾಗಿತ್ತು. ಬಳಿಕ 2010ರಲ್ಲಿ ಸುಪ್ರೀಂಕೋರ್ಟ್ ಸಿಬಿಐಗೆ ವರ್ಗಾಯಿಸಿತ್ತು. ಬುಧವಾರ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ಸಿಬಿಐ ವಕೀಲ ಬಿಪಿ ರಾಜು, ಐದು ವರ್ಷದ ಬಳಿಕ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಮತ್ತು ಸಾಕ್ಷಿಗಳ ವಿಚಾರಣೆಯನ್ನು 12 ವರ್ಷದ ಬಳಿಕ ನಡೆಸಿರುವುದರಿಂದ ತನಿಖೆಯಲ್ಲಿ ಕೆಲವು ಲೋಪಗಳಾಗಿವೆ ಎಂದು ಹೇಳಿದರು. ವಿಚಾರಣೆ ಸಂದರ್ಭ ಕೆಲವು ಪ್ರಮುಖ ಸಾಕ್ಷಿಗಳು ಪ್ರತಿಕೂಲ ಸಾಕ್ಷಿ ಹೇಳಿರುವುದರಿಂದ ತನಿಖೆಗೆ ತೊಂದರೆಯಾಗಿದೆ ಎಂದು ಅವರು ತಿಳಿಸಿದರು.

  ಇದಕ್ಕೆ ಪ್ರತಿಕ್ರಿಯಿಸಿದ ವಿಶೇಷ ನ್ಯಾಯಾಧೀಶ ಶರ್ಮ, ನಾನು ಸಿಐಡಿ ಅಥವಾ ಸಿಬಿಐಯನ್ನು ದೂಷಿಸುವುದಿಲ್ಲ. ಈ ಪ್ರಕರಣದಲ್ಲಿ ಹೇಳಿಕೆಗಳಿವೆ ಮತ್ತು ಸಾಕ್ಷಿಗಳಿವೆ. ಅವರು ನ್ಯಾಯಾಲಯಕ್ಕೆ ಬಂದು ಬೇರೇನೋ ಹೇಳಿದರೆ ಅದು ನಿಮ್ಮ ತಪ್ಪಲ್ಲ. ನಿಮ್ಮ ಕೆಲಸವನ್ನು ನೀವು ಮಾಡಿದ್ದೀರಿ ಎಂದು ಹೇಳಿದರು. ಈ ಪ್ರಕರಣದಲ್ಲಿ ಆರೋಪಿಗಳೆಂದು ಸಿಬಿಐ ಹೆಸರಿಸಿದ್ದ 38 ಮಂದಿಯಲ್ಲಿ, ಬಿಜೆಪಿ ಅಧ್ಯಕ್ಷ (ಆಗ ಗುಜರಾತ್‌ನ ಗೃಹ ಸಚಿವರಾಗಿದ್ದರು) ಅಮಿತ್ ಶಾ, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ 16 ಮಂದಿಯನ್ನು ಖುಲಾಸೆಗೊಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X