Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿಗಳು ಸಂಶೋಧನಾ ಪ್ರವೃತ್ತಿ...

ವಿದ್ಯಾರ್ಥಿಗಳು ಸಂಶೋಧನಾ ಪ್ರವೃತ್ತಿ ಬೆಳೆಸಿಕೊಳ್ಳಿ: ಅದಮಾರುಶ್ರೀ

ವಾರ್ತಾಭಾರತಿವಾರ್ತಾಭಾರತಿ7 Dec 2018 7:43 PM IST
share
ವಿದ್ಯಾರ್ಥಿಗಳು ಸಂಶೋಧನಾ ಪ್ರವೃತ್ತಿ ಬೆಳೆಸಿಕೊಳ್ಳಿ: ಅದಮಾರುಶ್ರೀ

ಉಡುಪಿ, ಡಿ.7: ನಮ್ಮ ಹಿರಿಯರು, ಋಷಿ ಮುನಿಗಳು ಯಾವುದೇ ಮೂಲಭೂತ ಸೌಕರ್ಯಗಳಿಲ್ಲದಿದ್ದರೂ, ಎಷ್ಟೊಂದು ವಿಷಯಗಳ ಕುರಿತು ಸ್ಪಷ್ಟವಾದ ಮಾಹಿತಿ, ಫಲಿತಾಂಶಗಳನ್ನು ತಿಳಿಸಿಹೇಳಿದ್ದಾರೆ. ಇವುಗಳ ಬಗ್ಗೆ ನಮ್ಮ ವಿದ್ಯಾರ್ಥಿಗಳು ಸಂಶೋಧನೆ ನಡೆಸಿ, ಇನ್ನಷ್ಟು ಮಾಹಿತಿಗಳನ್ನು ಹೊರಚೆಲ್ಲಬೇಕು ಎಂದು ಉಡುಪಿ ಶ್ರೀಅದಮಾರು ಮಠ ಶಿಕ್ಷಣ ಪ್ರತಿಷ್ಠಾನದ ಅದ್ಯಕ್ಷ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹೇಳಿದ್ದಾರೆ.

ಉಡುಪಿ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬೆಂಗಳೂರಿನ ಪೂರ್ಣಪ್ರಜ್ಞ ವೈಜ್ಞಾನಿಕ ಸಂಶೋಧನಾ ಸಂಸ್ಥೆಯ ಸಹಯೋಗ ದೊಂದಿಗೆ ಕಾಲೇಜಿನ ಮಿನಿ ಸಭಾಂಗಣದಲ್ಲಿ ಆಯೋಜಿಸಿರುವ ಎರಡು ದಿನಗಳ ‘ವೈಜ್ಞಾನಿಕ ಸಂಶೋಧನೆಯಲ್ಲಿ ಇತ್ತೀಚಿನ ಬೆಳವಣಿಗೆಗಳು: ಒಂದು ನೋಟ’ ಕುರಿತ ರಾಜ್ಯಮಟ್ಟದ ಕಾರ್ಯಾಗಾರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ವಿಜ್ಞಾನದಲ್ಲಿ ಒಳ್ಳೆಯ ಸಂಶೋಧಕರು ಇಲ್ಲಿಂದ ಬರಬೇಕು ಎಂಬ ಸದುದ್ದೇಶದಿಂದ ನಮ್ಮ ಗುರುಗಳು ಬೆಂಗಳೂರಿನಲ್ಲಿ ಸಂಶೋಧನೆಗೇ ಮೀಸಲಾದ ಪೂರ್ಣಪ್ರಜ್ಞ ವೈಜ್ಞಾನಿಕ ಸಂಶೋಧನಾ ಸಂಸ್ಥೆ (ಪಿಪಿಐಎಸ್‌ಆರ್) ಯನ್ನು ಸ್ಥಾಪಿಸಿದ್ದರು. ನಮ್ಮ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡು ಇದರಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಪಿಪಿಐಎಸ್‌ಆರ್‌ನ ನಿರ್ದೇಶಕ ಡಾ.ಎ.ಪಿ.ಹಲಗೇರಿ, ಕಳೆದ ಏಳೆಂಟು ವರ್ಷಗಳಲ್ಲಿ ನಮ್ಮ ಸಂಸ್ಥೆ ಸಂಶೋಧನೆಗೆ ಒತ್ತು ಕೊಟ್ಟು ಕೆಲಸ ಮಾಡುವುದರ ಜೊತೆಜೊತೆಗೆ ಬೆಂಗಳೂರು ಆಸುಪಾಸಿನ ಶಾಲಾ-ಕಾಲೇಜುಗಳ ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿಯನ್ನು ಹೆಚ್ಚಿಸಲು ಕೆಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತಿದ್ದೇವೆ ಎಂದು ವಿವರಿಸಿದರು.

ವಿದ್ಯಾರ್ಥಿಗಳಲ್ಲಿ ಪ್ರೌಢ ಶಾಲಾ ಮಟ್ಟದಲ್ಲೇ ವಿಜ್ಞಾನದಲ್ಲಿ ಆಸಕ್ತಿಯನ್ನು ಮೂಡಿಸಬೇಕು. ಅವರು ವಿಜ್ಞಾನದಲ್ಲಿ, ವಿವಿಧ ವಿಷಯಗಳಲ್ಲಿ ಕುತೂಹಲ ಬೆಳೆಸಿಕೊಳ್ಳುವಂತೆ ಪ್ರೇರೇಪಿಸಬೇಕು. ಕುತೂಹಲ ಅವರಲ್ಲಿ ಸಂಶೋಧನಾ ಪ್ರವೃತ್ತಿಯನ್ನು ಮೂಡಿಸಬಲ್ಲದು ಎಂದರು.

ಬಹಳಷ್ಟು ವಿಷಯಗಳಲ್ಲಿ ಈಗ ವಿಶೇಷವಾದ ಸಂಶೋಧನೆಗಳು ನಡೆಯುತ್ತಿವೆ. ಮೆಟಲ್, ನೀರನ್ನು ಹೀರಿಕೊಳ್ಳುವ ಗುಣವನ್ನು ಹೊಂದಿದ್ದು, ಅದರ ಬಗ್ಗೆ ಇನ್ನಷ್ಟು ಸಂಶೋಧನೆ ನಡೆಸಿದರೆ, ಅನೇಕ ಸಮಸ್ಯೆಗಳಿಗೆ ಅದು ಪರಿಹಾರ ಸೂಚಿಸಬಹುದು. ಅದೇ ರೀತಿ ಪಾಲಿಮರ್ ಕುರಿತ ಸಂಶೋಧನೆ, ನೀರು, ಇಂಧನ ಹಾಗೂ ಪರಿಸರಕ್ಕೆ ಅವುಗಳ ಅಳವಡಿಕೆ ಕುರಿತು ಇನ್ನಷ್ಟು ಮಾಹಿತಿ ನೀಡಬಹುದು ಎಂದರು.

ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಜಗದೀಶ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪಿಸಿಎಂಸಿಯ ಗೌರವ ಕಾರ್ಯದರ್ಶಿ ಡಾ.ಜಿ.ಎಸ್.ಚಂದ್ರಶೇಖರ್ ಹಾಗೂ ಕಂಪ್ಯೂಟರ್ ಸಾಯನ್ಸ್ ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಎಂ. ಉಪಸ್ಥಿತರಿದ್ದರು. ಕಾಲೇಜಿನ ವಿಜ್ಞಾನ ವಿಭಾಗದ ಡೀನ್ ಡಾ.ಎ.ಪಿ.ಭಟ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X