Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಗರ ಮಾಲಿನ್ಯ ನಿಯಂತ್ರಣ: ಕಠಿಣ ಕ್ರಮಕ್ಕೆ...

ನಗರ ಮಾಲಿನ್ಯ ನಿಯಂತ್ರಣ: ಕಠಿಣ ಕ್ರಮಕ್ಕೆ ಮುಂದಾದ ಮಾಲಿನ್ಯ ನಿಯಂತ್ರಣ ಮಂಡಳಿ

ವಾರ್ತಾಭಾರತಿವಾರ್ತಾಭಾರತಿ7 Dec 2018 10:33 PM IST
share

ಬೆಂಗಳೂರು, ಡಿ.7: ನಗರದಲ್ಲಿ ಮುಂದಿನ 5-6 ವರ್ಷಗಳಲ್ಲಿ ಅಧಿಕಗೊಂಡಿರುವ ವಾಯುಮಾಲಿನ್ಯ ಪ್ರಮಾಣವನ್ನು ಶೇ.30 ರಷ್ಟು ಕಡಿಮೆ ಮಾಡಬೇಕು ಎಂದು ಕೇಂದ್ರದ ಪರಿಸರ ಸಚಿವಾಲಯ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಈ ನಿಟ್ಟಿನಲ್ಲಿ ಮಾಲಿನ್ಯ ಮಂಡಳಿಯು ಮೆಟ್ರೋ ಹಾಗೂ ಇತರೆ ಕಟ್ಟಡ ಕಾಮಗಾರಿಗಳ ಮೇಲೆ ತೀವ್ರ ನಿಗಾವಹಿಸಲು ಮುಂದಾಗಿದೆ. ಅದರ ಜತೆಗೆ ಹಳೆಯ ವಾಹನಗಳ ಸಂಚಾರವನ್ನೂ ನಿರ್ಬಂಧ ಮಾಡಬೇಕು ಎಂಬ ಪ್ರಸ್ತಾವನೆಯನು ಮರು ಪರಿಶೀಲಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ಮಾಲಿನ್ಯ ನಿಯಂತ್ರಣ ಸಂಬಂಧ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವಿಶೇಷ ಸಮಿತಿ ರಚನೆಯಾಗಿದೆ. ಈ ಸಮಿತಿಯು ಮಾಲಿನ್ಯ ನಿಯಂತ್ರಣ ಸಂಬಂಧ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತದೆ. ನಗರದ ನಿಮ್ಹಾನ್ಸ್, ವಿಕ್ಟೋರಿಯಾ ಆಸ್ಪತ್ರೆ, ಮೆಜೆಸ್ಟಿಕ್ ರೈಲು ನಿಲ್ದಾಣ ಸೇರಿ ವಿವಿಧ ಕಡೆಗಳಲ್ಲಿನ 21 ವಾಯುಗುಣಮಟ್ಟ ತಪಾಸಣಾ ಕೇಂದ್ರಗಳಲ್ಲಿ ಜನರ ಶ್ವಾಸಕೋಶಕ್ಕೆ ಹಾನಿಯಾಗುವ ಮಟ್ಟಿಗೆ ವಾಯುಮಾಲಿನ್ಯ ದಾಖಲಾಗಿದೆ.

ಬೈಯಪ್ಪನಹಳ್ಳಿಯಿಂದ ವೆಟ್‌ಫೀಲ್ಡ್, ನಾಯಂಡಹಳ್ಳಿಯಿಂದ ಕೆಂಗೇರಿ ಹಾಗೂ ಮತ್ತಿತರ ಮಾರ್ಗಗಳಲ್ಲಿ ಮೆಟ್ರೋ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ಮಾರ್ಗದಲ್ಲಿನ ಕಾಮಗಾರಿಯಿಂದ ಅತಿಯಾದ ಧೂಳು ಬರುತ್ತಿದೆ ಎಂದು ಹಲವು ಬಾರಿ ಸಾರ್ವಜನಿಕರು, ಪ್ರಯಾಣಿಕರು ದೂರು ಸಲ್ಲಿಸಿದ್ದರು. ಹೀಗಾಗಿ, ಮಂಡಳಿ ಸೂಚನೆ ನೀಡಿದ್ದರಿಂದ ಪ್ರತಿಮಾರ್ಗದಲ್ಲಿಯೂ ನೀರು ಹಾಕುವುದು, ಬ್ಯಾರಿಕೇಡ್ ಅಳವಡಿಕೆ ಮಾಡಿ ಕ್ರಮ ಕೈಗೊಳ್ಳಲಾಗುತ್ತಿದೆ.

ಅಲ್ಲದೆ, ಈ ಹಿಂದೆ ಬಿಎಂಆರ್‌ಸಿಎಲ್‌ಗೆ ಕಾಮಗಾರಿ ನಡೆಸುವ ಸ್ಥಳದಲ್ಲಿ ವಾಯುಗುಣಮಟ್ಟ ತಪಾಸಣಾ ಯಂತ್ರವನ್ನು ಅಳವಡಿಸಬೇಕು ಎಂದು ಸೂಚನೆಯನ್ನೂ ನೀಡಲಾಗಿತ್ತು. ಅದರಿಂದಾಗಿ ಎಲ್ಲ ಮಾರ್ಗಗಳಲ್ಲಿ ಒಂದು ಯಂತ್ರವನ್ನು ಅಳವಡಿಸಿದ್ದು, ಇದೇ ಮಾರ್ಗದಲ್ಲಿ ಅಪಾರ್ಟ್‌ಮೆಂಟ್ ಕಟ್ಟಡಗಳ ಕಾಮಗಾರಿಯಲ್ಲಿ ಧೂಳು ಉಂಟಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಹಳೆಯ ವಾಹನಗಳ ನಿಷೇಧ: ನಗರದಲ್ಲಿ 74 ಲಕ್ಷ ವಾಹನಗಳು ನೋಂದಣಿಯಾಗಿವೆ. ಹೊರಭಾಗಗಳಿಂದ ನಗರಕ್ಕೆ ಸಾವಿರಾರು ವಾಹನಗಳು ನಿತ್ಯ ಬರುತ್ತಿವೆ. ಈ ವಾಹನಗಳು ಬಿಡುವ ಹೊಗೆ ನಿಯಂತ್ರಿಸಲು ಮಂಡಳಿಯು ಸಾರಿಗೆ ಇಲಾಖೆಯೊಂದಿಗೆ ಕಾರ್ಯನಿರ್ವಹಿಸಬೇಕಿದೆ. ಒಟ್ಟು ವಾಹನಗಳಲ್ಲಿ ಶೇ.22 ರಷ್ಟು ವಾಹನಗಳು 15 ವರ್ಷ ಹಳೆಯದಾಗಿವೆ. 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನ ಮತ್ತು 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನ ನಿಷೇಧಿಸಬೇಕೆಂಬ ಪ್ರಸ್ತಾವವನ್ನು ಮಂಡಳಿಯು ಕೇಂದ್ರ ಸರಕಾರಕ್ಕೆ ಸಲ್ಲಿಸಿತ್ತು. ಆದರೆ, ಅದನ್ನು ಸರಕಾರ ಇನ್ನೂ ಪರಿಗಣಿಸಿಲ್ಲ. ಹೀಗಾಗಿ, ಮರು ಪರಿಶೀಲಿಸುವಂತೆ ಕೋರಲು ಮಂಡಳಿ ನಿರ್ಧರಿಸಿದೆ. ಜತೆಗೆ ಸಾರಿಗೆ ಇಲಾಖೆ ಸಹಭಾಗಿತ್ವದಲ್ಲಿ ವಾಹನಗಳ ಮಾಲಿನ್ಯ ಪ್ರಮಾಣ ತಪಾಸಣೆಗೆ ಹೆಚ್ಚು ಒತ್ತು ನೀಡಲು ಗಮನಹರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X