Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಮಾರಕಗಳಿವೆ; ಆದರೆ ಗಾಂಧಿ ಜನಮಾನಸದಿಂದ...

ಸ್ಮಾರಕಗಳಿವೆ; ಆದರೆ ಗಾಂಧಿ ಜನಮಾನಸದಿಂದ ದೂರ: ಡಾ.ತಿಂಗಳಾಯ

ವಾರ್ತಾಭಾರತಿವಾರ್ತಾಭಾರತಿ8 Dec 2018 8:14 PM IST
share
ಸ್ಮಾರಕಗಳಿವೆ; ಆದರೆ ಗಾಂಧಿ ಜನಮಾನಸದಿಂದ ದೂರ: ಡಾ.ತಿಂಗಳಾಯ

ಉಡುಪಿ, ಡಿ. 8: ಇಂದು ಗಾಂಧಿ ಪ್ರತಿಮೆ, ಗಾಂಧಿ ರಸ್ತೆ, ಗಾಂಧಿ ಬಜಾರ್ ಸೇರಿದಂತೆ ಗಾಂಧಿಯವರ ಸ್ಮಾರಕಗಳು ಊರಿನ ತುಂಬಾ ಇವೆ. ಆದರೆ ಗಾಂಧೀಜಿಯವರ ನೆನಪು, ಕೊಡುಗೆಗಳು ಮಾತ್ರ ಜನಮಾನಸದಿಂದ ಅಳಿಸಿ ಹೋಗುತ್ತಿದೆ ಎಂದು ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಡಾ.ಎನ್.ಕೆ. ತಿಂಗಳಾಯ ಹೇಳಿದ್ದಾರೆ.

 ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್, ಉಡುಪಿ ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ಶನಿವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಿದ ಬೊಳುವಾರು ಮಹಮ್ಮದ್ ಕುಂಞ ಅವರ ‘ಪಾಪು ಗಾಂಧಿ ಗಾಂಧಿ ಬಾಪು ಆದ ಕತೆ’ ಹಾಗೂ ಡಾ.ಮಹಾಬಲೇಶ್ವರ ರಾವ್ ಅವರ ‘ಬರಿಯ ಬಟ್ಟೆಯಲ್ಲ ಭಾರತದ ಬಾವುಟ’ ಬಗ್ಗೆ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಉತ್ತಮ ನಿರ್ವಹಣೆ ತೋರಿಸಿದವರಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದರು.

ಗಾಂಧೀಜಿಯವರ ಅಹಿಂಸಾತ್ಮಕ ಹೋರಾಟದಿಂದ ಭಾರತವಿಂದು ಸ್ವತಂತ್ರ ವಾಗಿದೆ. ಸ್ವಾತಂತ್ರ ಭಾರತದ ಮಕ್ಕಳು ದೇಶವನ್ನು ಮುನ್ನಡೆಸುವ ನಾಯಕರಾ ಗಬೇಕೇ ಹೊರತು ದುಶ್ಚಟಗಳಿಗೆ ಬಲಿಬೀಳುವಂತಾಗಬಾರದು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಗಾಂಧೀಜಿ ಖಾದಿ ವಸ್ತುಗಳನ್ನು ತೊಡುವ ಹಾಗೂ ತಯಾರಿಸುವ ಮೂಲಕ ವಿದೇಶಿ ವಸ್ತುಗಳ ವಿರುದ್ಧ ಹೋರಾಟವನ್ನು ನಡೆಸಿದ್ದಾರೆ. ಇದು ನಮ್ಮ ಕಣ್ಣನ್ನು ತೆರೆಸಬೇಕು. ನಾವಿಂದು ಗಾಂಧಿಯನ್ನು ಮರೆಯುತಿದ್ದೇವೆ. ಗಾಂಧಿ ಕಂಡ ಕನಸು ದೇಶಕ್ಕೆ ಸ್ವಾತಂತ್ರ ಸಿಕ್ಕಿ 70 ವರ್ಷಗಳಾದರೂ ಇನ್ನೂ ನನಸಾಗಿಲ್ಲ ಎಂದರು.

ಇಂದಿನ ಯುವಜನತೆಗೆ ದೇಶದ ಇತಿಹಾಸ, ರಾಜಕೀಯದಲ್ಲಿ ಎಷ್ಟೊಂದು ಅಜ್ಞಾನವಿದೆ ಎಂದರೆ, ಮುಂದೊಂದು ದಿನ ‘ಗಾಂಧೀಜಿ ಈ ದೇಶದಲ್ಲಿ ಹುಟ್ಟಿಯೇ ಇರಲಿಲ್ಲ’ ಎಂದು ಪ್ರಚಾರವಾದರೂ ಆಶ್ಚರ್ಯವಿಲ್ಲ ಎಂದು ಡಾ. ತಿಂಗಳಾಯ ಲಘು ದಾಟಿಯಲ್ಲಿ ನುಡಿದರು.

ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಅಧಿಕಾರಿ ಪ್ರೇಮ್‌ಕುಮಾರ್ ತಿಂಗಳಾಯ ಅವರು ತನ್ನ ತಾತ ಮೋನಪ್ಪ ತಿಂಗಳಾಯ ಹಾಗೂ ತಂದೆ ಕೃಷ್ಣಪ್ಪ ತಿಂಗಳಾಯ ಅವರು 1934ರ ಫೆ.24ರಂದು ಗಾಂಧೀಜಿ ಮಂಗಳೂರಿಗೆ ಬಂದಾಗ ಹೊಗೆ ಬಜಾರ್‌ನ ಜ್ಞಾನೋದಯ ಸಮಾಜ ಮಂದಿರದಲ್ಲಿ ಅವರ ಸಭೆ ಸಂಘಟಿಸಿದ್ದನ್ನು, ಅವರಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಮಾನಪತ್ರ ಅರ್ಪಿಸಿದ್ದನ್ನು ಗಾಂಧೀಜಿಯವರ ಹರಿಜನ ಫಂಡ್‌ಗೆ ಹಣ ಸಂಗ್ರಹಿಸಿ ನೀಡಿದ್ದನ್ನು ನೆನಪಿಸಿಕೊಂಡರು.

ಮುಂದೆ 1948ರಲ್ಲಿ ಗಾಂಧೀಜಿ ತೀರಿಕೊಂಡಾಗ, ಅವರ ಚಿತಾಭಸ್ಮವನ್ನು ಮಂಗಳೂರಿಗೆ ತರಿಸಿ ಇಲ್ಲಿನ ನೇತ್ರಾವತಿ, ಫಲ್ಗುಣಿ ಸಮುದ್ರ ಸಂಗಮದಲ್ಲಿ ವಿಸರ್ಜಿಸುವ ಮುನ್ನ ನಡೆಸಿದ ವಿಶೇಷ ಕಾರ್ಯಕ್ರಮಗಳನ್ನು ಸಹ ಮೆಲುಕು ಹಾಕಿದರು. ಅಲ್ಲದೇ ಜ್ಞಾನೋದಯ ಸಮಾಜ ಮಂದಿರದಲ್ಲಿ ಗಾಂಧಿ ಭಾಷಣ ಮಾಡಿದ ಜಾಗದಲ್ಲಿ ಅವರ ಪ್ರತಿಮೆ ಸ್ಥಾಪಿಸಿ ಈಗಲೂ ಅವರ ಜನ್ಮ ದಿನಾಚರಣೆ ಆಚರಿಸುತ್ತಿರುವುದನ್ನು ತಿಳಿಸಿದರು.

ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರದ ಸಹ ಸಂಘಟಕ ವಿನೀತಿ ರಾವ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಜಿ.ವಿಜಯ, ಸಿಂಡಿಕೇಟ್ ಬ್ಯಾಂಕಿನ ಜಿಎಂ ಭಾಸ್ಕರ ಹಂದೆ ಮಾತನಾಡಿದರು. ಬಿವಿಟಿಯ ಮುಖ್ಯ ಕಾರ್ಯನಿರ್ವಹಣಾದಿಕಾರಿ ಮನೋಹರ ಕಟ್ಗೇರಿ ಅತಿಥಿಗಳನ್ನು ಸ್ವಾಗತಿಸಿದರೆ, ಆಡಳಿತಾಧಿಕಾರಿ ಐ.ಜಿ.ಕಿಣಿ ವಂದಿಸಿದರು. ಬಿವಿಟಿಯ ಮುಖ್ಯ ಕಾರ್ಯಕ್ರಮ ಸಂಯೋಜಕಿ ಎ.ಲಕ್ಷ್ಮೀಬಾಯಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X