Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯಡಿಯೂರು ಕೆರೆಗೆ 59 ದೇಶಗಳ ಪಕ್ಷಿ...

ಯಡಿಯೂರು ಕೆರೆಗೆ 59 ದೇಶಗಳ ಪಕ್ಷಿ ಪ್ರಭೇದ ವಲಸೆ: ಬಿಬಿಎಂಪಿ ಮೇಯರ್ ಗಂಗಾಂಬಿಕೆ

ದೋಣಿ ವಿಹಾರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ8 Dec 2018 9:50 PM IST
share
ಯಡಿಯೂರು ಕೆರೆಗೆ 59 ದೇಶಗಳ ಪಕ್ಷಿ ಪ್ರಭೇದ ವಲಸೆ: ಬಿಬಿಎಂಪಿ ಮೇಯರ್ ಗಂಗಾಂಬಿಕೆ

ಬೆಂಗಳೂರು, ಡಿ.8: ಯಡಿಯೂರು ಕೆರೆ ಪಕ್ಷಿಧಾಮವಾಗಿದ್ದು, 59 ದೇಶಗಳ 141ಕ್ಕೂ ಅಧಿಕ ವಿವಿಧ ಪ್ರಭೇದಗಳ ಪಕ್ಷಿಗಳು ಬರುತ್ತವೆ ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಶನಿವಾರ ನಗರದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಯಡಿಯೂರು ವಾರ್ಡ್‌ನ ಯಡಿಯೂರು ಕೆರೆಯಲ್ಲಿ ಶಾಂತಲಾ ದೋಣಿ ವಿಹಾರ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗುಬ್ಬಚ್ಚಿಗಳು ಸೇರಿದಂತೆ ಹಲವಾರು ಪಕ್ಷಿ ಪ್ರಭೇದಗಳು ಕಣ್ಮರೆಯಾಗುತ್ತಿರುವ ಈ ಕೆರೆಯಲ್ಲಿ ಇಷ್ಟೊಂದು ಪ್ರಭೇದದ ಪಕ್ಷಿಗಳಿರುವುದು ಸಂತಸದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.

ಯಡಿಯೂರು ಕೆರೆ ಸುಂದರವಾದ ಪ್ರವಾಸಿ ತಾಣವಾಗಿದ್ದು, ಬಾನಾಡಿ ಮರಳಿ ಬಾ ಗೂಡಿಗೆ ಹೆಸರಿನ ಯೋಜನೆಯನ್ನು ಯಡಿಯೂರಿನಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಅತ್ಯುತ್ತಮ ಪಾರ್ಕ್ ಹಾಗೂ ದೋಣಿ ವಿಹಾರ ಕೇಂದ್ರದಿಂದಾಗಿ ಪ್ರವಾಸಿಗರ ತಾಣವಾದಂತಾಗಿದೆ. ಹೀಗಾಗಿ, ನಗರಕ್ಕೆ ಬರುವವರನ್ನು ಇಲ್ಲಿನ ಉದ್ಯಾನವನ ಆಕರ್ಷಿಸುತ್ತದೆ ಎಂದು ಹೇಳಿದರು.

ವಾರ್ಡ್ ಸದಸ್ಯೆ ಪೂರ್ಣಿಮಾ ರಮೇಶ್‌ರವರು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಮಾದರಿ ವಾರ್ಡ್ ಮಾಡಿದ್ದಾರೆ. ಸಾರ್ವಜನಿಕರು ದೋಣಿ ವಿಹಾರ ಕೇಂದ್ರವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಉಪಮೇಯರ್ ಭದ್ರೇಗೌಡ ಮಾತನಾಡಿ, ಪಕ್ಷಿಗಳಿಗೆ ತೊಂದರೆ ಆಗಬಾರದೆಂಬ ದೃಷ್ಟಿಯಿಂದ ಶಾಂತಲಾ ದೋಣಿ ವಿಹಾರ ಕೇಂದ್ರದಲ್ಲಿ ಪೆಡಲ್ ಬೋರ್ಟ್ ಅಳವಡಿಸಲಾಗಿದೆ. ಬೆಂಗಳೂರಿನ ಎಲ್ಲಾ ಕೆರೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಸಾರ್ವಜನಿಕರು ಕೆರೆಗಳನ್ನು ಉಳಿಸಿ, ಬೆಳೆಸಬೇಕು ಎಂದರು.

ಕೆರೆಗೆ 910 ವರ್ಷ: ನಗರದ ಹಳೆಯ ಕೆರೆಗಳಲ್ಲಿ ಯಡಿಯೂರು ಕೆರೆಯೂ ಒಂದಾಗಿದ್ದು, 910 ವರ್ಷಗಳ ಇತಿಹಾಸ ಹೊಂದಿದೆ. ಕೆರೆ 1.5 ಕಿ.ಮೀ ವ್ಯಾಪ್ತಿ ಹೊಂದಿದ್ದು, ಕೆರೆ ಸುತ್ತಲು ಉದ್ಯಾನ, ವ್ಯಾಯಾಮ ಶಾಲೆ ನಿರ್ಮಿಸಲಾಗಿದೆ. 8 ಪೆಡಲ್ ಬೋಟ್‌ಗಳಿಗೆ ಹೊಯ್ಸಳ ರಾಜವಂಶದ ಬಿಟ್ಟಿದೇವ, ಶಾಂತಲಾ, ಒಂದನೇ ಬಲ್ಲಾಳ, ಒಂದನೇ ನರಸಿಂಹ, ಸೋಮೇಶ್ವರ, ಎರಡನೇ ಬಲ್ಲಾಳ, ಎರಡನೇ ನರಸಿಂಹ ಮುಂತಾದ ಹೆಸರುಗಳನ್ನಿಡಲಾಗಿದೆ ಎಂದು ಆಡಳಿತ ಪಕ್ಷದ ಮಾಜಿ ಅಧ್ಯಕ್ಷ ಎನ್.ಆರ್.ರಮೇಶ್ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಯಡಿಯೂರು ವಾರ್ಡ್‌ನ ನಾಗರಿಕರು ಸೇರಿ ಅಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X