Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಜಯಾ ದಬ್ಬೆ ಸ್ತ್ರೀವಾದಿ ಚಳವಳಿಗೆ...

ವಿಜಯಾ ದಬ್ಬೆ ಸ್ತ್ರೀವಾದಿ ಚಳವಳಿಗೆ ವೇದಿಕೆ ಕಲ್ಪಿಸಿದ ಪ್ರಥಮ ಮಹಿಳೆ: ಪತ್ರಕರ್ತೆ ಭಾರತಿ ಹೆಗಡೆ

ವಿಜಯಾ ದಬ್ಬೆ ಬದುಕು-ಬರಹ ಸಂವಾದ

ವಾರ್ತಾಭಾರತಿವಾರ್ತಾಭಾರತಿ8 Dec 2018 10:31 PM IST
share

ಬೆಂಗಳೂರು, ಡಿ.8: ಲೇಖಕಿ ವಿಜಯಾ ದಬ್ಬೆ ಅವರು ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಮಹಿಳಾ ಚಿಂತನೆ, ಸ್ತ್ರೀವಾದಿ ಚಳವಳಿಗೆ ವೇದಿಕೆ ಕಲ್ಪಿಸಿದವರಾಗಿದ್ದಾರೆ ಎಂದು ಪತ್ರಕರ್ತೆ ಭಾರತಿ ಹೆಗಡೆ ಹೇಳಿದರು.

ಶನಿವಾರ ನಗರದ ಕೆಪಿಟಿಸಿಎಲ್‌ನ ಲೆಕ್ಕಾಧಿಕಾರಿಗಳ ಸಂಘದ ಭವನದಲ್ಲಿ ಆಯೋಜಿಸಿದ್ದ ವಿಜಯಾ ದಬ್ಬೆ ಬದುಕು ಮತ್ತು ಬರಹ ಕುರಿತ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 70-80 ರ ದಶಕದಲ್ಲಿ ಕರ್ನಾಟಕದಲ್ಲಿ ದಲಿತ, ರೈತರ ಚಳವಳಿ ತೀವ್ರಗತಿಯನ್ನು ಪಡೆದುಕೊಂಡಿತ್ತು. ಆ ಸಂದರ್ಭದಲ್ಲಿ ಮಹಿಳೆಯರ ಪರವಾಗಿ ಧ್ವನಿ ಎತ್ತಿದಂತಹ ದಿಟ್ಟ ಮಹಿಳೆ ವಿಜಯಾ ದಬ್ಬೆಯಾಗಿದ್ದಾರೆ ಎಂದರು.

ವಿಜಯಾ ದಬ್ಬೆ ಅಂದಿನ ಕಾಲದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಶೋಷಣೆ ಎಲ್ಲವನ್ನೂ ಎದುರಿಸಿದ್ದರು. ಆದುದರಿಂದಲೇ ಮಹಿಳೆಯರ ನಡುವೆ ಜಾಗೃತಿ ಮೂಡಿಸುವ ಉದ್ದೇಶದಿಂದ 1971 ರಲ್ಲಿ ಸಮತಾ ಮಹಿಳಾ ಅಧ್ಯಯನ ಕೇಂದ್ರವನ್ನು ಸ್ಥಾಪಿಸಿದ್ದರು. ಅನಂತರದ ದಿನಗಳಲ್ಲಿ ಸಂತ್ರಸ್ಥರಿಗೆ ಬೆಂಬಲ ನೀಡಲು, ಸಾಂತ್ವನ ಹೇಳುವ ಉದ್ದೇಶದಿಂದ ಸಮತಾ ವೇದಿಕೆಯನ್ನು ಸ್ಥಾಪಿಸಿದರು. ಇದರ ಮೂಲಕ ಮಹಿಳೆಯರ ಪರವಾಗಿ ಹೋರಾಟವನ್ನು ಮುನ್ನಡೆಸಿದರು ಎಂದು ಅವರು ಹೇಳಿದರು.

ಮಹಿಳೆಯರು ಅಡುಗೆ ಮನೆಗೆ ಸೀಮಿತವಾದವರು ಎಂಬ ಮನಸ್ಥಿತಿಯಿದ್ದ ಕಾಲದಲ್ಲಿಯೂ ಎಲ್ಲವನ್ನೂ ಎದುರಿಸಿ ಉನ್ನತ ಶಿಕ್ಷಣ ಪಡೆದರು. ಅಲ್ಲದೆ, ಉಪನ್ಯಾಸಕಿಯಾಗಿಯೂ ಸೇವೆ ಸಲ್ಲಿಸಿದರು. ಅದರ ಜತೆಗೆ ಹಲವು ಪುಸ್ತಕಗಳನ್ನು, ಕವಿತೆಗಳನ್ನೂ ರಚಿಸಿದ್ದಾರೆ. ನಿರ್ಲಕ್ಷಕ್ಕೆ ಒಳಗಾಗಿದ್ದ ಲೇಖಕಿಯರನ್ನು ದಾಖಲಿಸುವ, ಸಮಾಜಕ್ಕೆ ಪರಿಚಯಿಸುವ ಕೆಲಸ ಮಾಡಿದ್ದಾರೆ. ಆದರೆ, ವಿಜಯಾ ದಬ್ಬೆ ಅವರನ್ನು ಯಾರೂ ಗುರುತಿಸದಿರುವುದು ನೋವಿನ ಸಂಗತಿ ಎಂದು ನುಡಿದರು.

ಸ್ತ್ರೀವಾದ ಎಂಬುದು ಪಾಶ್ಚಿಮಾತ್ಯರಿಂದ ಪಡೆದಿರುವುದು ಅಲ್ಲ. ಹಾಗೆಯೇ ಅದು ಪುರುಷ ವಿರೋಧಿಯೂ ಅಲ್ಲ. ತಲೆ ತಲಾಂತರಗಳಿಂದ ಭಾರತದಲ್ಲಿಯೇ ಪುರುಷ ಪ್ರಧಾನ ವ್ಯವಸ್ಥೆಯ ವಿರುದ್ಧ ಅನೇಕ ಮಹಿಳೆಯರು ಧ್ವನಿ ಎತ್ತಿದ್ದಾರೆ. ಆದರೆ, ದೇಶದೊಳಗಿನ ಮಹಿಳೆಯರ ಬಂಡಾಯವನ್ನು ಯಾರೂ ದಾಖಲಿಸಿಲ್ಲ. ಅದರಿಂದಾಗಿ ಸ್ತ್ರೀವಾದ ಎಂಬುದು ವಿದೇಶಗಳ ಚಿಂತನೆ ಎಂಬಂತೆ ಬಿಂಬಿತವಾಗುತ್ತಿದೆ ಎಂದು ಹೇಳಿದರು.

ಭಾರತೀಯ ಮಹಿಳೆಯರಲ್ಲಿ ಅಪಾರವಾದ ಜ್ಞಾನದ ಸಂಪತ್ತು ಇತ್ತು. ಅದನ್ನು ದಾಖಲಿಸಿದ್ದರೆ ಇಂದು ರೈತರ ಆತ್ಮಹತ್ಯೆಗಳು ಆಗುತ್ತಿರಲಿಲ್ಲ ಹಾಗೂ ಕೃಷಿ ಪದ್ಧತಿ ನಾಶವಾಗುತ್ತಿರಲಿಲ್ಲ. ಹಿಂದಿನ ದಿನಗಳಲ್ಲಿ ರೈತ ಮಹಿಳೆಯರು ಬೀಜಗಳ ಸಂರಕ್ಷಣೆ, ಸಂಸ್ಕರಣೆ ಹಾಗೂ ವಿನಿಮಯ ಮಾಡಿಕೊಳ್ಳುವ ಪದ್ಧತಿ ರೂಢಿಸಿಕೊಂಡಿದ್ದರು. ಇದೀಗ ಎಲ್ಲವೂ ಕಣ್ಮರೆಯಾಗಿದೆ. ಆದರೆ, ವಿದೇಶಿಯರು ಎಲ್ಲವನ್ನೂ ದಾಖಲಿಸಿರುವುದರಿಂದ ಅವರಿಂದ ನಾವು ಎರವಲು ಪಡೆಯುತ್ತಿದ್ದೇವೆ ಎಂದು ತಿಳಿಸಿದರು.

ದೇಶದಲ್ಲಿ 70-80 ರ ದಶಕದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎಂದು ಎಲ್ಲ ಕಡೆಯೂ ಚರ್ಚೆಗಳು, ಚಳವಳಿಗಳು ನಡೆಯುತ್ತಿದ್ದವು. ಅಲ್ಲದೆ, ಮಹಿಳೆಯು ಎಲ್ಲಿ ಬೇಕಾದರೂ ಸ್ವತಂತ್ರವಾಗಿ, ನಿರ್ಭಯವಾಗಿ ಸಂಚರಿಸಬಹುದಿತ್ತು. ಆದರೆ, ಇಂದು ಮಹಿಳೆಯರಿಗೆ ಸಮಾನತೆ ಎಂಬುದು ಮರೀಚಿಕೆಯಾಗಿದೆ. ಜತೆಗೆ, ಇಂದು ಎಲ್ಲಿ ನೋಡಿದರೂ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ನೋಡಿದರೆ ಭಯವಾಗುತ್ತದೆ ಎಂದ ಅವರು, ಈ ದೇಶದಲ್ಲಿ ಮಹಿಳಾ ಪರವಾದ ಕಾನೂನು ರೂಪಗೊಂಡಿದ್ದರೆ, ಅದು ಮಹಿಳಾ ಚಳವಳಿಯಿಂದ ಅಷ್ಟೇ ಸಾಧ್ಯ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X