Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೌರಾಷ್ಟ್ರಕ್ಕೆ ಮಣಿದ ಕರ್ನಾಟಕ

ಸೌರಾಷ್ಟ್ರಕ್ಕೆ ಮಣಿದ ಕರ್ನಾಟಕ

ಒಂದೇ ದಿನದಲ್ಲಿ 20 ವಿಕೆಟ್ ಪತನ

ವಾರ್ತಾಭಾರತಿವಾರ್ತಾಭಾರತಿ9 Dec 2018 10:13 AM IST
share
ಸೌರಾಷ್ಟ್ರಕ್ಕೆ ಮಣಿದ ಕರ್ನಾಟಕ

ರಾಜ್‌ಕೋಟ್, ಡಿ.8: ಸೌರಾಷ್ಟ್ರದ ಸ್ಪಿನ್‌ದ್ವಯರಾದ ಧರ್ಮೇಂದ್ರಸಿನ್ಹಾ ಜಡೇಜ ಹಾಗೂ ಕಮಲೇಶ್ ಮಕ್ವಾನಾ ದಾಳಿಗೆ ತತ್ತರಿಸಿದ ಕರ್ನಾಟಕ ರಣಜಿ ಪಂದ್ಯದಲ್ಲಿ 87 ರನ್‌ಗಳಿಂದ ಸೋಲನ್ನಪ್ಪಿದೆ.

ಇಲ್ಲಿಯ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಶನಿವಾರ ಕೊನೆಗೊಂಡ ಪಂದ್ಯದಲ್ಲಿ ಕರ್ನಾಟಕ ತೀವ್ರ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಗೆಲುವಿಗೆ 179 ರನ್‌ಗಳ ಗುರಿ ಪಡೆದಿದ್ದ ಕರ್ನಾಟಕ, ಕಮಲೇಶ್ ಮಕ್ವಾನಾ(28ಕ್ಕೆ 5) ಹಾಗೂ ಧರ್ಮೇಂದ್ರ ಅವರ ಬಿಗು ಬೌಲಿಂಗ್ ದಾಳಿಗೆ 91 ರನ್‌ಗಳಿಗೆ ಗಂಟುಮೂಟೆ ಕಟ್ಟುವ ಮೂಲಕ ಮುಖಭಂಗ ಅನುಭವಿಸಿತು.

ಮೂರನೇ ದಿನ ತನ್ನ ಎರಡನೇ ಇನಿಂಗ್ಸ್ ಆರಂಭಿಸಿದ ಸೌರಾಷ್ಟ್ರ ತಂಡವು ಕರ್ನಾಟಕದ ತ್ರಿವಳಿ ಸ್ಪಿನ್ನರ್‌ಗಳಾದ ಜಗದೀಶ್ ಸುಚಿತ್(29ಕ್ಕೆ 3), ಶ್ರೇಯಸ್ ಗೋಪಾಲ್(10ಕ್ಕೆ 3) ಹಾಗೂ ಪವನ್ ದೇಶಪಾಂಡೆ(5ಕ್ಕೆ 3)ದಾಳಿಗೆ 79 ರನ್‌ಗಳಿಗೆ ಮಂಡಿಯೂರಿತು. ವಿಕೆಟ್ ಕೀಪರ್ ಸ್ನೆಲ್ ಪಟೇಲ್ 22ರನ್ ಗಳಿಸಿದ್ದೇ ಸೌರಾಷ್ಟ್ರದ ಪರ ಗರಿಷ್ಠ ಮೊತ್ತವಾಯಿತು. ಸೌರಾಷ್ಟ್ರವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಿದ ಖುಷಿಯಲ್ಲಿ ತನ್ನ ಎರಡನೇ ಇನಿಂಗ್ಸ್ ಆರಂಭಿಸಿದ ಕರ್ನಾಟಕ 91 ರನ್‌ಗಳಿಗೆ ತನ್ನ ಆಟ ಮುಗಿಸಿತು. ಕರ್ನಾಟಕದ ಪರ ಕರುಣ್ ನಾಯರ್(30, 55 ಎಸೆತ) ಹಾಗೂ ಶ್ರೇಯಸ್ ಗೋಪಾಲ್( 27, 72 ಎಸೆತ) ಅಲ್ಪ ಪ್ರತಿರೋಧ ಒಡ್ಡಿದರೂ ಗೆಲ್ಲಿಸಲು ಸಾಕಾಗುವಷ್ಟು ಬಲ ತೋರಲಿಲ್ಲ. ಮಕ್ವಾನಾ ಮತ್ತು ಧರ್ಮೇಂದ್ರ ಒಟ್ಟು ಒಂಬತ್ತು ವಿಕೆಟ್‌ಗಳನ್ನು ಹಂಚಿಕೊಂಡರು.

ಮೂರನೇ ದಿನದಾಟದಲ್ಲಿ ಒಂದೇ ದಿನದಲ್ಲಿ 20 ವಿಕೆಟ್‌ಗಳು ಉರುಳಿದ್ದು ಬೌಲರ್‌ಗಳ ಮೆರೆದಾಟಕ್ಕೆ ಸಾಕ್ಷಿಯಂತಿತ್ತು. ಅಂದಾಜು 60 ಓವರ್‌ಗಳಲ್ಲಿ ಎರಡೂ ಇನಿಂಗ್ಸ್‌ಗಳಿಗೆ ತೆರೆಬಿದ್ದಿತ್ತು.

ಸಂಕ್ಷಿಪ್ತ ಸ್ಕೋರ್

ಸೌರಾಷ್ಟ್ರ ಪ್ರಥಮ ಇನಿಂಗ್ಸ್: 316ಕ್ಕೆ ಆಲೌಟ್

ಕರ್ನಾಟಕ ಪ್ರಥಮ ಇನಿಂಗ್ಸ್: 217ಕ್ಕೆ ಆಲೌಟ್

ಸೌರಾಷ್ಟ್ರ 2ನೇ ಇನಿಂಗ್ಸ್: 79ಕ್ಕೆ ಆಲೌಟ್

(ಸ್ನೆಲ್ ಪಟೇಲ್ 22, ಪವನ್ ದೇಶಪಾಂಡೆ 5ಕ್ಕೆ 3, ಶ್ರೇಯಸ್ ಗೋಪಾಲ್ 10ಕ್ಕೆ 3) ಕರ್ನಾಟಕ ಎರಡನೇ ಇನಿಂಗ್ಸ್: 91ಕ್ಕೆ ಆಲೌಟ್

(ಕರುಣ್ 30, ಕಮಲೇಶ್ ಮಕ್ವಾನಾ 28ಕ್ಕೆ 5, ಜಡೇಜ 44ಕ್ಕೆ 4)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X