Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಡಗು ಸಂತ್ರಸ್ತರಿಗೆ ಕೇಂದ್ರ ಸರಕಾರ...

ಕೊಡಗು ಸಂತ್ರಸ್ತರಿಗೆ ಕೇಂದ್ರ ಸರಕಾರ ನಯಾಪೈಸೆ ನೀಡಿಲ್ಲ: ಸಚಿವ ಯು.ಟಿ.ಖಾದರ್

‘ಮಾಹಿತಿ ಕೊರತೆಯಿಂದ ಪ್ರತಾಪ ಸಿಂಹ ಹೇಳಿಕೆ ಸಲ್ಲದು’

ವಾರ್ತಾಭಾರತಿವಾರ್ತಾಭಾರತಿ9 Dec 2018 5:18 PM IST
share
ಕೊಡಗು ಸಂತ್ರಸ್ತರಿಗೆ ಕೇಂದ್ರ ಸರಕಾರ ನಯಾಪೈಸೆ ನೀಡಿಲ್ಲ: ಸಚಿವ ಯು.ಟಿ.ಖಾದರ್

ಮಂಗಳೂರು, ಡಿ.9: ಕೊಡಗು ಸಂತ್ರಸ್ತರಿಗೆ ಕೇಂದ್ರ ಸರಕಾರ ನಯಾಪೈಸೆ ಅನುದಾನವನ್ನು ನೀಡಿಲ್ಲ. ಸಂಸದ ಪ್ರತಾಪ ಸಿಂಹ ಮಾಹಿತಿಯ ಕೊರತೆಯಿಂದ, ಸ್ಪಷ್ಟವಾದ ವಿಚಾರ ತಿಳಿಯದೆ ಕೇವಲ ಪ್ರಚಾರಕ್ಕಾಗಿ ಮತನಾಡಿದ್ದಾರೆ. ಅನುದಾನ ನೀಡಿದ್ದೇ ಆದಲ್ಲಿ ಸ್ಪಷ್ಟ ಅಂಕಿ-ಅಂಶವನ್ನು ನೀಡಲಿ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಸವಾಲೆಸೆದಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ರವಿವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊಡಗಿನಲ್ಲಿ ದುರಂತ ಸಂಭವಿಸಿದಾಗ ಅಲ್ಲಿನ ಸಂತ್ರಸ್ತರಿಗೆ ಸ್ವಾಭಿಮಾನ ಬದುಕು ಕಟ್ಟಿಕೊಡಲು 9.40 ಕೋಟಿ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿದ್ದರೆ ಅದು ಕರ್ನಾಟಕ ಸರಕಾರವಾಗಿದೆ. ಈ ವಿಷಯದಲ್ಲಿ ದೇಶಕ್ಕೆ ರಾಜ್ಯ ಮಾದರಿಯಾಗಿದೆ ಎಂದರು.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್)ಯಿಂದ ಕೊಡಗು ಸಂತ್ರಸ್ತರಿಗೆ 546.21 ಕೋಟಿ ರೂ. ನಿಧಿ ನೀಡುವುದಾಗಿ ಮಾತ್ರ ಆದೇಶ ಬಂದಿದೆ. ಆದರೆ ಇಲ್ಲಿಯವರೆಗೆ ನಯಾಪೈಸೆಯನ್ನು ಕೇಂದ್ರ ಸರಕಾರ ಬಿಡುಗಡೆಗೊಳಿಸಿಲ್ಲ. ಎನ್‌ಡಿಆರ್‌ಎಫ್ ಕೇವಲ ಕೊಡಗು ಮಾತ್ರವಲ್ಲ, ರಾಜ್ಯದ ಎಂಟು ಜಿಲ್ಲೆಗಳಲ್ಲಿ ನಡೆದ ಪ್ರಕೃತಿ ವಿಕೋಪದಂತಹ ದುರಂತಕ್ಕೆ ಸಂಬಂಧಿಸಿದಂತೆ ಸಮಾನವಾಗಿ ಹಂಚಲ್ಪಡುತ್ತದೆ. ಹಾಗೆಯೆ ಇದು ಕೇವಲ ರಾಜ್ಯಕ್ಕೂ ಸೀಮಿತವಲ್ಲ; ಎಲ್ಲ ರಾಜ್ಯಗಳಿಗೆ ಪ್ರತಿವರ್ಷದಂತೆ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.

546.21 ಕೋಟಿ ರೂ. ನಿಧಿಯನ್ನು ಎಂಟು ಜಿಲ್ಲೆಗೆ ಸಮಾನವಾಗಿ ಹಂಚಿಕೆ ಮಾಡಿದಾಗ 60 ಕೋಟಿ ರೂ. ಲಭ್ಯವಾಗುತ್ತದೆ. ಅದರಿಂದ ಕೇವಲ ಸಂಪಾಜೆ ರಸ್ತೆಯನ್ನು ದುರಸ್ತಿಗೊಳಿಸಲು ಸಾಕಾಗುವುದಿಲ್ಲ. ಇನ್ನು ಹೆಚ್ಚಿನ ಕೆಲಸಗಳು ಬಾಕಿ ಇರುತ್ತವೆ. ಕೊಡಗು ಜಿಲ್ಲೆ ಪ್ರಕೃತಿ ವಿಕೋಪಕ್ಕೊಳಗಾದ ಜಿಲ್ಲೆಯೆಂದು ಘೋಷಣೆಯಾಯಿತು. ಇಂತಹ ದುರಂತಗಳು ಸಂಭವಿಸುವುದು ವಿರಳ. ಕೊಡಗು ಸಂತ್ರಸ್ತರಿಗೆ ಪ್ರತ್ಯೇಕವಾಗಿ ಪರಿಹಾರ ನಿಧಿಯನ್ನು ಕೇಂದ್ರ ಸರಕಾರ ಕಲ್ಪಿಸಿಲ್ಲ ಎಂದು ಸಚಿವರು ತಿಳಿಸಿದರು.

ಆಡಳಿತ ಮತ್ತು ಮಾನವೀಯತೆಯನ್ನು ಅರ್ಥ ಮಾಡಿಕೊಂಡು ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಪರಮೇಶ್ವರ ಸೇರಿ ಅನುದಾನ ಬಿಡುಗಡೆ ಮಾಡಿದ್ದಾರೆ. ಮನೆ ಬಿದ್ದಾಗ ಒಂದು ಲಕ್ಷ ರೂ., ಹೆಚ್ಚುವರಿಯಾಗಿ 50 ಸಾವಿರ ರೂ.ನ್ನು ಸರಕಾರ ನೀಡಿದೆ. ಇದು ಯಾವ ಕಾನೂನಿನಲ್ಲಿಯೂ ತಿಳಿಸಿಲ್ಲ. ಕೇವಲ ಮಾನವೀಯ ನೆಲೆಯಿಂದ ಪರಿಹಾರ ನೀಡಲಾಗಿದೆ ಎಂದರು.

ಹಿಂದಿನ ಬಿಜೆಪಿ ಸರಕಾರದ ಆಡಳಿತದ ಸಮಯ ಉತ್ತರ ಕರ್ನಾಟಕದಲ್ಲಿ ಸಮಸ್ಯೆ ತಲೆದೋರಿತ್ತು. ಆಗ ಅಲ್ಲಿನ ಸಂತ್ರಸ್ತರು ಆರು-ಏಳು ತಿಂಗಳು ಶೆಡ್‌ಗಳಲ್ಲಿ ಜೀವನವನ್ನು ನಡೆಸಿದ್ದರು. ಅಂತಹ ಕಷ್ಟ ಬಾರದಿರಲಿ ಎಂದು ಮನೆ ನಿರ್ಮಾಣವಾಗುವವರೆಗೆ ಮನೆ ಬಾಡಿಗೆಯನ್ನು ರಾಜ್ಯ ಸರಕಾರ ನೀಡುತ್ತಿದೆ. ಅಲ್ಲಿ ಸಿಂಗಲ್ ಬೆಡ್‌ರೂಮ್ ಸಾಕಾಗುವುದಿಲ್ಲ ಎನ್ನುವ ಸಂತ್ರಸ್ತರ ದೂರಿಗೆ ಸ್ಪಂದಿಸಿ ಡಬಲ್ ಬೆಡ್ ರೂಮ್ ವ್ಯವಸ್ಥೆಯನ್ನು ಸರಕಾರ ಮಾಡಿದೆ ಎಂದರು.

ಸಂಸದರಿಗೆ ಕೊಡಗುವಿನ ಬಗ್ಗೆ ಕಾಳಜಿ, ಜವಾಬ್ದಾರಿ ಎನ್ನುವುದು ಇದ್ದರೆ ಪಾರ್ಲಿಮೆಂಟ್‌ನಲ್ಲಿ ಮಾತನಾಡಿ, ಕೊಡಗಿಗಾಗಿ ಪ್ರತ್ಯೇಕ ನಿಧಿಯನ್ನು ಕೇಳಬೇಕಾಗಿತ್ತು. ಅಂತಹ ಅಭಿವೃದ್ಧಿ ವಿಚಾರಗಳಿಗೆ ಮಾತನಾಡದೇ ವಿನಾಕಾರಣ ಪ್ರಚಾರಕ್ಕಾಗಿ ಮುಖ್ಯಮಂತ್ರಿ ವಿರುದ್ಧ ಮಾತನಾಡಿದ್ದಾರೆ. ಎಲ್ಲ ಅನುದಾನ, ನಿಧಿಯನ್ನು ಬಿಡುಗಡೆ ಮಾಡಿದ್ದರೂ ಮುಖ್ಯಮಂತ್ರಿಯ ಮನಸನ್ನು ನೋಯಿಸಿದ್ದಾರೆ ಎಂದು ಹೇಳಿದರು.

ಮಧ್ಯವರ್ತಿ ಹಾವಳಿ ತಪ್ಪಿಸಲು ಏಕಗವಾಕ್ಷಿ ಯೋಜನೆ

ಏಕಗವಾಕ್ಷಿ ಯೋಜನೆಯನ್ನು ಜಾರಿಗೆ ತರುವುದರಿಂದ ಜನಸಾಮಾನ್ಯರಿಗೆ ಕಿರುಕುಳ ತಪ್ಪಲಿದೆ. ಇದೇ ಡಿಸೆಂಬರ್ 15ರಂದು ಏಕಗವಾಕ್ಷಿ ಯೋಜನೆಗೆ ಚಾಲನೆ ನೀಡಲಾಗುವುದು. ಈ ಹಿಂದೆ ಮನೆ ನಿರ್ಮಿಸಲು, ಲೇಔಟ್ ಪ್ಲಾನಿಂಗ್ ಮತ್ತಿತರ ಕಾರ್ಯಕ್ರಮಕ್ಕಾಗಿ ಅಪ್ರೂವಲ್ ಪಡೆಯಲು ಹಲವು ತಿಂಗಳುಗಳ ಕಾಲ ತೆಗೆದುಕೊಳ್ಳುತ್ತಿತ್ತು. ಮುಂದಿನ ದಿನಗಳಲ್ಲಿ ಕೇವಲ ಒಂದೇ ತಿಂಗಳಲ್ಲಿ ಅಪ್ರೂವಲ್ ದೊರೆಯಲಿದೆ. ದೇಶಕ್ಕೆ ರಾಜ್ಯದ ಯೋಜನೆ ಮಾದರಿಯಾಗಿದೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ತಿಳಿಸಿದರು.

ಜನ ಸಾಮಾನ್ಯರು ಎಲ್ಲ ದಾಖಲಾತಿಗಳನ್ನು ಲಗತ್ತಿಸಿದ್ದರೂ ತಿರಸ್ಕೃತಗೊಳ್ಳುತ್ತಿದ್ದವು. ಇನ್ನು ಕೆಲವು ದಾಖಲೆಗಳಿಲ್ಲದಿದ್ದರೂ ಸ್ವಕೃತಗೊಳ್ಳುತ್ತಿದ್ದವು. ಇನ್ನು ಮುಂದೆ ಇಂತಹ ಸಮಸ್ಯೆ ತಲೆದೋರುವುದಿಲ್ಲ. ಸ್ಥಳ ಪರಿಶೀಲನೆಗೆ ನಿಗದಿತ ಸ್ಥಳಕ್ಕೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಜರಿರಬೇಕು. ಅದೇ ಜಾಗದಲ್ಲಿಯೇ ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ ಎಂದರು ಹೇಳಿದರು.

ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸ್ಥಳ ಪರಿಶೀಲನೆಯ ದಿನಾಂಕ, ಸಮಯ, ಸ್ಥಳದ ಬಗ್ಗೆ ಮಾಹಿತಿಯನ್ನು ಮೊದಲೇ ಅವರ ಮೊಬೈಲ್ ಸಂಖ್ಯೆಗೆ ಸಂದೇಶ ಹೋಗುತ್ತದೆ. ಇದರಿಂದ ಪಾರದರ್ಶಕ ಆಡಳಿತವನ್ನು ನೀಡಬಹುದಾಗಿದೆ. ಇನ್ನು ಎಲ್ಲ ವಿಧಾನವೂ ಕಂಪ್ಯೂಟರೀಕರಣಗೊಳ್ಳಲಿದೆ ಎಂದರು.

ಮರಳು ವಿತರಣೆಗೆ ಟಾಲ್‌ಫ್ರೀ ನಂಬರ್

ಜಿಲ್ಲೆಯಲ್ಲಿ ಕಳೆದ 15 ದಿನಗಳಿಂದ ಮರಳು ವಿತರಣೆ ಕಾರ್ಯ ಆರಂಭವಾಗಿದೆ. ಜನಸಾಮಾನ್ಯರಿಗೆ ಮರಳಿನ ಅಗತ್ಯವಿದ್ದಲ್ಲಿ ತಾತ್ಕಾಲಿಕ ನಂಬರ್‌ಗೆ ಕರೆ ಮಾಡುವ ಮೂಲಕ ಮಾಹಿತಿ ನೀಡಿದರೆ, ಮರಳನ್ನು ಸರಬರಾಜು ಮಾಡಲಾಗುವುದು. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಟಾಲ್ ಫ್ರೀ ನಂಬರ್‌ನ್ನು ಆರಂಭಿಸಲಾಗುವುದು. ಇದರಿಂದ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಬಹುದಾಗಿದೆ. ಈ ನೂತನ ವಿಧಾನದ ಬಗ್ಗೆ ಮರಳು ಗಣಿಗಾರಿಕೆ ಸಮಿತಿ ದರ ನಿಗದಿಪಡಿಸಲಿದೆ. ತುಂಬೆ ಅಣೆಕಟ್ಟಿನಲ್ಲಿಯೂ ಮಹಾನಗರ ಪಾಲಿಕೆಯಿಂದ ಮರಳನ್ನು ಸಂಗ್ರಹಿಸಿ, ವಿತರಿಸಲಾಗುವುದು ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.

ಸ್ವಯಂ ಪರವಾನಿಗೆಗೆ ಅವಕಾಶ

30x 40 ಅಳತೆಯ ಮನೆ ಕಟ್ಟಲು ಎನ್‌ಒಸಿ ಅಗತ್ಯವಿದ್ದಲ್ಲಿ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇದಕ್ಕಾಗಿಯೇ ಮುಂದಿನ ದಿನಗಳಲ್ಲಿ ಅಗತ್ಯ ದಾಖಲೆಗಳನ್ನು ನಿಗದಿತ ವೆಬ್‌ಸೈಟ್‌ನಲ್ಲಿ ಅಪ್ ಲೋಡ್ ಮಾಡುವ ಮೂಲಕ ಸ್ವಯಂ ಪರವಾನಿಗೆಯನ್ನು ಪಡೆದುಕೊಳ್ಳಬಹುದಾಗಿದೆ. ದ.ಕ. ಜಿಲ್ಲೆಯಲ್ಲಿ ಈ ಯೋಜನೆ ಯಶಸ್ವಿಯಾದಲ್ಲಿ ಒಂದು ತಿಂಗಳ ನಂತರ ರಾಜ್ಯಕ್ಕೂ ವಿಸ್ತರಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X