Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರದಲ್ಲಿ ಕೇಂದ್ರ ಸಂಪುಟ ‘ಅತಿ...

ಮೋದಿ ಸರಕಾರದಲ್ಲಿ ಕೇಂದ್ರ ಸಂಪುಟ ‘ಅತಿ ದೊಡ್ಡ ಬಲಿಪಶು’: ಯಶವಂತ್ ಸಿನ್ಹಾ

ವಾರ್ತಾಭಾರತಿವಾರ್ತಾಭಾರತಿ9 Dec 2018 9:57 PM IST
share
ಮೋದಿ ಸರಕಾರದಲ್ಲಿ ಕೇಂದ್ರ ಸಂಪುಟ ‘ಅತಿ ದೊಡ್ಡ ಬಲಿಪಶು’: ಯಶವಂತ್ ಸಿನ್ಹಾ

ಕೋಲ್ಕತ್ತಾ, ಡಿ. 9: ಕೇಂದ್ರ ಸಂಪುಟ ಸಹಿತ ದೇಶದ ವಿವಿಧ ಸಂಸ್ಥೆಗಳನ್ನು ನರೇಂದ್ರ ಮೋದಿ ಸರಕಾರ ಧ್ವಂಸಗೊಳಿಸಿದೆ ಎಂದು ಬಿಜೆಪಿಯ ಮಾಜಿ ನಾಯಕ ಯಶ್ವಂತ್ ಸಿನ್ಹಾ ರವಿವಾರ ಆರೋಪಿಸಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಆಯೋಜಿಸಿದ್ದ ‘ಮಾದರಿ ಬಂಗಾಳ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಮುಖ ಮಸೂದೆಗಳನ್ನು ಅನುಮೋದನೆ ಮಾಡುವ ಸಂದರ್ಭ ಪ್ರಧಾನಿ ಅವರು ರಾಜ್ಯ ಸಭೆಯನ್ನು ಕಡೆಗಣಿಸಿದ್ದಾರೆ ಎಂದರು. ಮೋದಿ ಸರಕಾರ ದೇಶದ ವಿವಿಧ ಸಂಸ್ಥೆಗಳನ್ನು ಧ್ವಂಸಗೊಳಿಸಿದೆ. ಆದರೆ, ಇದರ ಅತಿ ದೊಡ್ಡ ಬಲಿಪಶು ಕೇಂದ್ರ ಸಂಪುಟ ಎಂದು ಅವರು ಹೇಳಿದರು. ರಫೇಲ್ ಯುದ್ಧ ವಿಮಾನ ಒಪ್ಪಂದವಾಗಲಿ ಅಥವಾ ನಗದು ನಿಷೇಧವಾಗಲಿ ಸಂಪುಟಕ್ಕೆ ಮಾಹಿತಿ ನೀಡದೆ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಿನ್ಹಾ ಹೇಳಿದರು. ಹಲವು ಪ್ರಮುಖ ಮಸೂದೆಗಳನ್ನು ಅಂಗೀಕರಿಸುವ ಸಂದರ್ಭ ರಾಜ್ಯ ಸಭೆಯನ್ನು ಕಡೆಗಣಿಸಲು ಯತ್ನಿಸಿರುವುದರಿಂದ ಮೋದಿ ಸರಕಾರದ ಎರಡನೇ ಅತಿ ದೊಡ್ಡ ಬಲಿಪಶು ಸಂಸತ್ತು ಎಂದು ಅವರು ತಿಳಿಸಿದರು. ನಗದು ನಿಷೇಧ ‘ವಿಪತ್ತು’ ಎಂದು ವ್ಯಾಖ್ಯಾನಿಸಿದ ಅವರು, ತನ್ನ ಆರ್ಥಿಕ ನೀತಿಯ ವಿಫಲತೆ ಮುಚ್ಚಿ ಹಾಕಲು ಮೋದಿ ಸರಕಾರ ಆರ್ಥಿಕ ಬೆಳವಣಿಗೆಯ ಅಂಕಿ-ಅಂಶಗಳನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.

ಮೊದಲು ಅವರು ಜಿಡಿಪಿ ಲೆಕ್ಕ ಮಾಡುವ ವಿಧಾನ ಬದಲಾಯಿಸಿದರು. ಪ್ರಸಕ್ತ ಆಡಳಿತಕ್ಕಿಂತ ಯುಪಿಎ ಸರಕಾರದ ಆರ್ಥಿಕ ನಿರ್ವಹಣೆಯೇ ಉತ್ತಮವಾಗಿತ್ತು ಎಂಬ ವರದಿ ಬಂದಾಗ ವೆಬ್‌ಸೈಟ್‌ನಿಂದ ಅಂಕಿ-ಅಂಶಗಳನ್ನೇ ತೆಗೆದು ಹಾಕಿದರು. ಅನಂತರ ಆರ್ಥಿಕತೆಯ ಆರೋಗ್ಯಯುತ ಚಿತ್ರಣ ನೀಡಲು ಅಂಕಿ-ಅಂಶವನ್ನೇ ಬದಲಾಯಿಸಿದರು ಎಂದು ಸಿನ್ಹಾ ಹೇಳಿದರು. ದೇಶದಲ್ಲಿ ನಡೆದ, ನಡೆಯುತ್ತಿರುವ ಎಲ್ಲ ತಪ್ಪುಗಳಿಗೆ ಈ ಹಿಂದಿನ ಸರಕಾರವನ್ನೇ ತೆಗಳುವ ಅಭ್ಯಾಸವನ್ನು ಮೋದಿ ಸರಕಾರ ರೂಢಿಸಿಕೊಂಡಿದೆ ಎಂದು ಯಶವಂತ್ ಸಿನ್ಹಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X