Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫ್ರಾನ್ಸ್ ನಲ್ಲಿ ಬೃಹತ್ ‘ಹಳದಿ ಬನಿಯನ್’...

ಫ್ರಾನ್ಸ್ ನಲ್ಲಿ ಬೃಹತ್ ‘ಹಳದಿ ಬನಿಯನ್’ ಪ್ರತಿಭಟನೆ:ಅಲ್ಲಲ್ಲಿ ಹಿಂಸಾಚಾರ

135 ಮಂದಿಗೆ ಗಾಯ; 1723 ಮಂದಿ ಬಂಧನ

ವಾರ್ತಾಭಾರತಿವಾರ್ತಾಭಾರತಿ9 Dec 2018 10:24 PM IST
share
ಫ್ರಾನ್ಸ್ ನಲ್ಲಿ ಬೃಹತ್ ‘ಹಳದಿ ಬನಿಯನ್’ ಪ್ರತಿಭಟನೆ:ಅಲ್ಲಲ್ಲಿ ಹಿಂಸಾಚಾರ

ಪ್ಯಾರಿಸ್, ಡಿ. 9: ಫ್ರಾನ್ಸ್‌ನಾದ್ಯಂತ ಶನಿವಾರ ಬೃಹತ್ ‘ಹಳದಿ ಬನಿಯನ್’ ಸರಕಾರ ವಿರೋಧಿ ಪ್ರತಿಭಟನೆ ನಡೆಯಿತು.

ಸುಮಾರು 1,36,000 ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಹಾಗೂ 1,723 ಮಂದಿಯನ್ನು ಬಂಧಿಸಲಾಗಿದೆ ಎಂದು ಉಪ ಆಂತರಿಕ ಸಚಿವ ಲಾರಂಟ್ ನನೆಝ್ ತಿಳಿಸಿದರು.

ಡಿಸೆಂಬರ್ 1ರಂದು ನಡೆದ ಪ್ರತಿಭಟನೆಯಲ್ಲೂ ಸುಮಾರು ಇಷ್ಟೇ ಸಂಖ್ಯೆಯ ಜನರು ಪಾಲ್ಗೊಂಡಿದ್ದರು.

‘‘ರಾಷ್ಟ್ರೀಯ ಮಟ್ಟದಲ್ಲಿ ನಾವು 1,700ಕ್ಕೂ ಅಧಿಕ ಪ್ರತಿಭಟನಕಾರರನ್ನು ಬಂಧಿಸಿದ್ದೇವೆ. ಸುಮಾರು 8,000 ಮಂದಿ ರಾಜಧಾನಿ ಪ್ಯಾರಿಸ್‌ನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು’’ ಎಂದು ಅವರು ‘ಫ್ರಾನ್ಸ್ 2’ ಟೆಲಿವಿಶನ್ ಚಾನೆಲ್‌ಗೆ ತಿಳಿಸಿದರು.

ಅಧ್ಯಕ್ಷ ಇಮಾನುಯೆಲ್ ಮ್ಯಾಕ್ರೋನ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ‘ಹಳದಿ ಬನಿಯನ್’ ಪ್ರತಿಭಟನಕಾರರು ಪೊಲೀಸರೊಂದಿಗೆ ಘರ್ಷಣೆಗಿಳಿದರು. ಪೊಲೀಸರು ಇಟ್ಟಿದ್ದ ತಡೆಬೇಲಿಗಳಿಗೆ ಅವರು ಬೆಂಕಿ ಹಚ್ಚಿದರು ಹಾಗೂ ಪೊಲೀಸರತ್ತ ಕಲ್ಲುಗಳನ್ನು ತೂರಿದರು.

ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಸುಮಾರು 135 ಮಂದಿ ಗಾಯಗೊಂಡಿದ್ದಾರೆ.

ಪ್ಯಾರಿಸ್‌ನ ಚಾಂಪ್ಸ್-ಎಲೈಸೀ ಅವೆನ್ಯೂನಲ್ಲಿ ‘ಮ್ಯಾಕ್ರೋನ್ ರಾಜೀನಾಮೆ ನೀಡಿ’ ಎಂಬುದಾಗಿ ಘೋಷಣೆ ಕೂಗುತ್ತಾ ಸಾಗಿದ ಪ್ರತಿಭಟನಕಾರರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು. ಕಳೆದ ವಾರ ನಡೆದ ಪ್ರತಿಭಟನೆಯ ವೇಳೆ ಈ ಸ್ಥಳದಲ್ಲಿ ಭಾರೀ ಹಿಂಸಾಚಾರ ನಡೆದಿತ್ತು.

ಫ್ರಾನ್ಸ್‌ನಲ್ಲಿ ಹೆಚ್ಚುತ್ತಿರುವ ತೈಲ ಬೆಲೆ ವಿರುದ್ಧ ಆರಂಭಗೊಂಡ ಪ್ರತಿಭಟನೆ, ಬಳಿಕ ಅಧ್ಯಕ್ಷ ಮ್ಯಾಕ್ರೋನ್ ವಿರುದ್ಧದ ಬಂಡಾಯವಾಗಿ ಮಾರ್ಪಟ್ಟಿತು.

ಗ್ರಾಂಡ್ಸ್ ಬೋಲ್‌ವರ್ಡ್ಸ್ ಜಿಲ್ಲೆಯಲ್ಲಿ ಮುಸುಕುಧಾರಿ ಪ್ರತಿಭಟನಕಾರರು ಪೊಲೀಸರತ್ತ ಕಲ್ಲುಗಳನ್ನು ತೂರಿದರು ಹಾಗೂ ಅವಸರವಸರವಾಗಿ ನಿರ್ಮಿಸಲ್ಪಟ್ಟ ತಡೆಬೇಲಿಗೆ ಬೆಂಕಿ ಹಚ್ಚಿದರು.

ಅಧ್ಯಕ್ಷರ ರಾಜೀನಾಮೆಗೆ ಹೆಚ್ಚುತ್ತಿರುವ ಆಗ್ರಹ

ಹೆಚ್ಚುತ್ತಿರುವ ಇಂಧನ ಬೆಲೆಯನ್ನು ಪ್ರತಿಭಟಿಸಿ ಜನರು ನವೆಂಬರ್ 17ರಂದು ರಸ್ತೆ ತಡೆ ಆರಂಭಿಸಿದರು.

ಆದರೆ, ನಂತರದ ದಿನಗಳಲ್ಲಿ ಅವರ ಬೇಡಿಕೆಗಳ ಪಟ್ಟಿ ಬೆಳೆದಿದೆ.

ಅಧ್ಯಕ್ಷ ಇಮಾನುಯೆಲ್ ಮ್ಯಾಕ್ರೋನ್ ರಾಜೀನಾಮೆ ನೀಡಬೇಕೆಂದು ಹೆಚ್ಚಿನವರು ಈಗ ಒತ್ತಾಯಿಸುತ್ತಿದ್ದಾರೆ. ಅಧ್ಯಕ್ಷರು ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂಬುದಾಗಿ ಅವರು ಆರೋಪಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X