Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಮಕೃಷ್ಣ ಮಿಷನ್‌ನಿಂದ ಸ್ವಚ್ಛತಾ...

ರಾಮಕೃಷ್ಣ ಮಿಷನ್‌ನಿಂದ ಸ್ವಚ್ಛತಾ ಅಭಿಯಾನ: 5ನೇ ಹಂತದ ಶ್ರಮದಾನ

ವಾರ್ತಾಭಾರತಿವಾರ್ತಾಭಾರತಿ9 Dec 2018 11:02 PM IST
share
ರಾಮಕೃಷ್ಣ ಮಿಷನ್‌ನಿಂದ ಸ್ವಚ್ಛತಾ ಅಭಿಯಾನ: 5ನೇ ಹಂತದ ಶ್ರಮದಾನ

ಮಂಗಳೂರು, ಡಿ.9: ರಾಮಕೃಷ್ಣ ಮಿಷನ್‌ನಿಂದ ಸ್ವಚ್ಛತಾ ಅಭಿಯಾನದ ಅಂಗವಾಗಿ 5ನೇ ಹಂತದ ಸ್ವಚ್ಛ ಮಂಗಳೂರು ಪ್ರಥಮ ಶ್ರಮದಾನಕ್ಕೆ ರವಿವಾರ ಬೆಳಗ್ಗೆ ಮಾರ್ನಮಿಕಟ್ಟೆ-ನಂದಿಗುಡ್ಡೆಯಲ್ಲಿ ಚಾಲನೆ ನೀಡಲಾಯಿತು.

ದ.ಕ. ಜಿಪಂ ಸ್ವಚ್ಛ ಭಾರತ ಮಿಷನ್ ಸಂಯೋಜಕಿ ಮಂಜುಳಾ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ ಕಾರ್ಣಿಕ್ ಜಂಟಿಯಾಗಿ ಪ್ರಥಮ ಶ್ರಮದಾನಕ್ಕೆ ಹಸಿರು ನಿಶಾನೆ ತೋರಿ ಶುಭಾರಂಭಗೊಳಿಸಿದರು.

ಅಭಿಯಾನದ ಪ್ರಧಾನ ಸಂಯೋಜಕ ದಿಲ್‌ರಾಜ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಆರು ಗುಂಪುಗಳಾಗಿ ವಿಂಗಡಿಸಿಕೊಂಡು ಸ್ವಚ್ಛತಾ ಕಾರ್ಯ ನಡೆಸಿ ದರು. ನಂದಿಗುಡ್ಡೆ ಹಾಗೂ ಮಾರ್ನಮಿಕಟ್ಟೆಯ ನಡುವಿನ ರಸ್ತೆಯ ಅಕ್ಕಪಕ್ಕಗಳಲ್ಲಿ ಕಲ್ಲು-ಮಣ್ಣುಗಳ ಅನೇಕ ರಾಶಿಗಳು ಬಿದ್ದುಕೊಂಡಿದ್ದವು. ಅವುಗಳನ್ನು ಜೆಸಿಬಿ ಹಾಗೂ ಟಿಪ್ಪರ್‌ಗಳನ್ನು ಬಳಸಿಕೊಂಡು ತೆರವುಗೊಳಿಸಲಾಯಿತು.

ನಿಟ್ಟೆ ಫಿಸಿಯೋಥೆರಫಿ ಕಾಲೇಜಿನ ವಿದ್ಯಾರ್ಥಿಗಳು, ಪ್ರಾಂಶುಪಾಲ ಡಾ.ಧನೇಶ್‌ಕುಮಾರ್, ವಿಠಲದಾಸ ಪ್ರಭು ಹಾಗೂ ಕೋಡಂಗೆ ಬಾಲಕೃಷ್ಣ ನಾಕ್ ಮಾರ್ಗದರ್ಶನದಂತೆ ನಂದಿಗುಡ್ಡೆ ಪರಿಸರದಲ್ಲಿ ಶ್ರಮದಾನ ಮಾಡಲಾಯಿತು. ಮಾರ್ನಮಿಕಟ್ಟೆ ರಸ್ತೆಯ ಬದಿಯಲ್ಲಿ ಕಳೆ ಕೊಚ್ಚುವ ಯಂತ್ರದ ಸಹಾಯ ದಿಂದ ಹುಲ್ಲನ್ನು ತೆಗೆದು ಹಸನುಗೊಳಿಸಲಾಯಿತು.

ನಂದಿಗುಡ್ಡೆಯಲ್ಲಿರುವ ಮೈದಾನಕ್ಕೆ ಸಾಗುವ ದಾರಿಯಲ್ಲಿದ್ದ ಪ್ಲಾಸ್ಟಿಕ್ ಪೇಪರ್ ಹಾಗೂ ಮಣ್ಣಿನಿಂದ ಆವೃತವಾಗಿದ್ದ ಮೆಟ್ಟಿಲುಗಳನ್ನು ದೀಕ್ಷಿತ್, ದೀಪಿಕಾ ಆಳ್ವ, ಸುಮಾ ಕೋಡಿಕಲ್ ಇನ್ನಿತರರು ಶುಚಿಗೊಳಿಸಿದರು. ನಂದಿಗುಡ್ಡೆ ವೃತ್ತದ ಬಳಿಯ ತೋಡುಗಳಲ್ಲಿದ್ದ ಕಸವನ್ನು ನಿವೇದಿತಾ ಬಳಗದ ಸದಸ್ಯರು ತೆಗೆದು ಸ್ವಚ್ಛ ಮಾಡಿದರು.

ತಂಗುದಾಣಗಳ ಸ್ವಚ್ಛತೆ:  ಮೊದಲಿಗೆ ನಂದಿಗುಡ್ಡೆ ಹಾಗೂ ಜೆಪ್ಪುವಿನಲ್ಲಿರುವ ಎರಡು ತಂಗುದಾಣಗಳ ಸುತ್ತಮುತ್ತ ಕಸಗುಡಿಸಿ ಸ್ವಚ್ಛಗೊಳಿಸಲಾಯಿತು. ತದನಂತರ ಬಲೆ ತೆಗೆದು ಶುಚಿಗೊಳಿಸಿ, ನೀರಿನಿಂದ ತೊಳೆಯಲಾಯಿತು. ಬಳಿಕ ಬಣ್ಣ ಹಚ್ಚಿ ತಂಗುದಾಣಗಳು ಕಂಗೊಳಿಸುವಂತೆ ಮಾಡಲಾಯಿತು. ಸುಧೀರ್ ನರೋಹ್ನಾ, ಅವಿನಾಶ್ ಅಂಚನ್ ಹಾಗೂ ವಿಖ್ಯಾತ್ ಮತ್ತಿತರ ಕಾರ್ಯಕರ್ತರು ತಂಗುದಾಣಗಳ ಸ್ವಚ್ಛತಾ ಕಾರ್ಯ ಕೈಗೊಂಡರು.

ಬ್ಯಾನರ್-ಪೋಸ್ಟರ್ ತೆರವು: ಮಂಗಳೂರಿನ ಸೌಂದರ್ಯಕ್ಕೆ ಧಕ್ಕೆ ತರುತ್ತಿರುವ ಪೋಸ್ಟರ್-ಬ್ಯಾನರ್‌ಗಳನ್ನು ತೆರವುಗೊಳಿಸಲಾಯಿತು. ಉದಯ್ ಕೆ.ಪಿ., ಯೋಗಿಶ್ ಕಾಯರ್ತಡ್ಕ ಹಾಗೂ ಕಾರ್ಯಕರ್ತರು ನಗರದ ಅಲ್ಲಲ್ಲಿ ಹಾಕಲಾಗಿದ್ದ ಸುಮಾರು 200ಕ್ಕೂ ಅಧಿಕ ಅನಧಿಕೃತ ಬ್ಯಾನರ್‌ಗಳನ್ನು ತೆಗೆದು ಹಾಕಿದರು. ಅನಧಿಕೃತ ಬ್ಯಾನರ್ ಅಳವಡಿಸುವವರಿಗೆ ಕರೆ ಮಾಡಿ ಎಲ್ಲೆಂದರಲ್ಲಿ ಹಾಕದಂತೆ ವಿನಂತಿಸಲಾಯಿತು.

ಸ್ವಾಮಿ ಏಕಗಮ್ಯಾನಂದ, ಡಾ.ರಾಜೇಂದ್ರಪ್ರಸಾದ್, ಕಾರ್ಪೊರೇಶನ್ ಬ್ಯಾಂಕ್ ಡಿಜಿಎಂ ರವಿಶಂಕರ್, ಕಮಲಾಕ್ಷ ಪೈ, ಸತ್ಯನಾರಾಯಣ ಕೆ.ವಿ., ಸುಜಿತ್ ಭಂಡಾರಿ, ಮೋಹನ್ ಕೊಟ್ಟಾರಿ, ಮುಹಮ್ಮದ್ ಶಮೀಮ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X