Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವರ್ಣ ನೀತಿ ಮಾನವ ಹಕ್ಕುಗಳ ಉಲ್ಲಂಘನೆ:...

ವರ್ಣ ನೀತಿ ಮಾನವ ಹಕ್ಕುಗಳ ಉಲ್ಲಂಘನೆ: ವೆಂಕಟೇಶ್ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ10 Dec 2018 8:05 PM IST
share
ವರ್ಣ ನೀತಿ ಮಾನವ ಹಕ್ಕುಗಳ ಉಲ್ಲಂಘನೆ: ವೆಂಕಟೇಶ್ ನಾಯ್ಕ

ಉಡುಪಿ, ಡಿ.10: ದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯಿದೆ ಜಾರಿಗೆ ಬಂದು ಹಲವು ವರ್ಷಗಳಾದರೂ ಇನ್ನು ವರ್ಣ ನೀತಿ ಹೋಗಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಈಗಲೂ ಕಣ್ಣುಂದೆ ನಡೆಯುತ್ತಿದ್ದರೂ ವೌನವಾಗಿದ್ದೇವೆ. ಈ ರೀತಿಯ ಮಾನವ ಹಕ್ಕುಗಳ ಉಲ್ಲಂಘನೆ ಬಗ್ಗೆ ಸಮಾಜಕ್ಕೆ ತಿಳಿಹೇಳುವ ಕಾರ್ಯ ಆಗಬೇಕಾಗಿದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ್ ನಾಯ್ಕಾ ಟಿ. ಹೇಳಿದ್ದಾರೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅಭಿಯೋಗ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ಉಡುಪಿ ವಕೀಲರ ಸಂಘದ ಕಚೇರಿಯಲ್ಲಿ ಆಯೋಜಿಸಲಾದ ಮಾನವ ಹಕ್ಕುಗಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಗೌರವಾನ್ವಿತನಾಗಿ ಆತ್ಮ ಗೌರವದಿಂದ ಜೀವನ ನಡೆಸುವ ಹಕ್ಕು ಹೊಂದಿದ್ದು, ಇದಕ್ಕೆ ಚ್ಯುತಿ ಬಂದಲ್ಲಿ ಮಾನವ ಹಕ್ಕಿನ ಉಲ್ಲಂಘನೆ ಆಗುತ್ತದೆ. ವೃದ್ದ ಪೋಷಕರನ್ನು ಮಕ್ಕಳು ನಿರ್ಲಕ್ಷ ಮಾಡುವುದು, ವಿಕಲಚೇತನ ಮಕ್ಕಳನ್ನು ಪೋಷಕರು ತಿರಸ್ಕಾರದಿಂದ ಕಾಣುವುದು ಕೂಡ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಸಮಾಜದಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ತಡೆಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲ ಪ್ರೊ.ಪ್ರಕಾಶ್ ಕಣಿವೆ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಹುಟ್ಟಿನಿಂದಲೇ ಹಕ್ಕುಗಳು ದೊರೆಯುತ್ತವೆ. ಇವುಗಳ ರಕ್ಷಣೆ ಸರಕಾರಗಳ ಕರ್ತವ್ಯವಾಗಿದೆ. ಮಹಾಯುದ್ದಗಳ ಸಂದರ್ಭದಲ್ಲಿ ವ್ಯಾಪಕ ಮಾನವ ಹಕ್ಕುಗಳ ಉಲ್ಲಂಘನೆ ನಡೆದಿದ್ದು, 1948ರ ಡಿ.10ರಂದು ವಿಶ್ವ ಸಂಸ್ಥೆ ಮಾನವ ಹಕ್ಕುಗಳ ರಕ್ಷಣೆಗೆ ಕರೆ ನೀಡಿತ್ತು ಎಂದು ತಿಳಿಸಿದರು.

ಭಾರತ ಸಂವಿಧಾನದಲ್ಲೂ ಕೂಡ ಮಾನವ ಹಕ್ಕುಗಳನ್ನು ಅಳವಡಿಸಲಾಗಿದ್ದು, ಆದರೆ ತುರ್ತು ಪರಿಸ್ಥಿತಿಯ ವೇಳೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗಿದೆ. ಪ್ರಾಕೃತಿಕ ಸಂಪನ್ಮೂಲಗಳನ್ನು ನಾಶಪಡಿಸುವಿಕೆ, ವಾತಾ ವರಣವನ್ನು ಕಲುಷಿತಗೊಳಿಸುವುದು, ಭೂಸಂತ್ರಸ್ಥರಿಗೆ ಸೂಕ್ತ ಪುರ್ನವಸತಿ ಸೌಲ್ಯ ಒದಗಿದೆ ಇರುವುದೂ ಕೂಡ ಮಾನವ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಅವರು ಹೇಳಿದರು.

ಹಿರಿಯ ಸಿವಿಲ್ ನ್ಯಾಯಧೀಶೆ ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಾ ಬಾಯಿ ಉಪಸ್ಥಿತರಿದ್ದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಶ್ರೀಪತಿ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಉಪಾಧ್ಯಕ್ಷ ಪೃಥ್ವಿರಾಜ ಹೆಗ್ಡೆ ಸ್ವಾಗತಿಸಿದರು. ವಕೀಲ ಶ್ರೀಶ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X