Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೊದಲ ದಿನದ ಚಳಗಾಲದ ಅಧಿವೇಶನ: ಅಗಲಿದ...

ಮೊದಲ ದಿನದ ಚಳಗಾಲದ ಅಧಿವೇಶನ: ಅಗಲಿದ ಗಣ್ಯರಿಗೆ ಸಂತಾಪ-ಕಲಾಪ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ10 Dec 2018 10:34 PM IST
share
ಮೊದಲ ದಿನದ ಚಳಗಾಲದ ಅಧಿವೇಶನ: ಅಗಲಿದ ಗಣ್ಯರಿಗೆ ಸಂತಾಪ-ಕಲಾಪ ಮುಂದೂಡಿಕೆ

ಬೆಳಗಾವಿ,ಡಿ.10: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಕೇಂದ್ರ ಸಚಿವ ಅನಂತ್‍ ಕುಮಾರ್, ಮಾಜಿ ಸಚಿವರಾದ ಸಿ.ಕೆ.ಜಾಫರ್ ಷರೀಫ್, ಎಂ.ಎಚ್. ಅಂಬರೀಷ್, ರಾಜ್ಯದ ಮಾಜಿ ಸಚಿವರಾದ ಈ.ಟಿ.ಶಂಭುನಾಥ್, ಓಂಪ್ರಕಾಶ್ ಕಣಗಲಿ, ವಿಮಲಾಬಾಯಿ ದೇಶಮುಖ್, ಮಾಜಿ ಶಾಸಕರಾದ ಮಲ್ಲಪ್ಪ ವೀರಪ್ಪ ಶೆಟ್ಟಿ, ವಿಶ್ವನಾಥ್ ಕರಬಸಪ್ಪ, ಮಹಾಮನಿ, ಎಂ.ಪಿ.ರವೀಂದ್ರ, ಬಾಬುರೆಡ್ಡಿ, ವೆಂಕಪ್ಪ ತುಂಗಳ, ಎಚ್.ಎಸ್.ಪ್ರಕಾಶ್, ಎಂ. ಭಕ್ತವತ್ಸಲ ಅವರ ನಿಧನಕ್ಕೆ ಉಭಯ ಸದನಗಳಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. 

ಸೋಮವಾರ ಮೊದಲ ದಿನದ ಚಳಗಾಲದ ಅಧಿವೇಶನವನ್ನು ಮಾಜಿ ಪ್ರಧಾನಿ ವಾಜಪೇಯಿ ಅವರ ಗೌರವಾರ್ಥ ಮುಂದೂಡುವಂತೆ ಬಿಜೆಪಿ ಮುಖಂಡರು ಆಗ್ರಹಪಡಿಸಿದರು. ಇದನ್ನು ಪರಿಗಣಿಸಿದ ಸಭಾಧ್ಯಕ್ಷ ರಮೇಶ್ ಕುಮಾರ್ ಅವರು, ಸಾಮಾನ್ಯವಾಗಿ ಹಾಲಿ ಸದಸ್ಯರು ಮೃತಪಟ್ಟಾಗ ಸದನದ ಕಲಾಪ ಮುಂದೂಡುತ್ತೇವೆ. ವಾಜಪೇಯಿಯಂತಹ ಮೇರು ವ್ಯಕ್ತಿ, ಅಜಾತ ಶತ್ರು ಬಗ್ಗೆ ನಮಗೂ ಗೌರವವಿದೆ. ನಿಮ್ಮ ಮನವಿಯನ್ನು ನಾನು ಪರಿಗಣಿಸುತ್ತೇನೆ. ಶ್ರದ್ಧಾಂಜಲಿ ನಂತರ ಕಲಾಪ ಮುಂದೂಡುವುದಾಗಿ ಹೇಳಿದರು.

ವಿಧಾನಸಭೆ ಕಲಾಪ ಆರಂಭದಲ್ಲಿ ಸಂತಾಪ ಸೂಚಕ ನಿರ್ಣಯ ಮಂಡಿಸಿದ ಸಭಾಧ್ಯಕ್ಷ ರಮೇಶ್ ಕುಮಾರ್, ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು. ಕ್ವಿಟ್ ಇಂಡಿಯಾ ಚಳವಳಿ ಮೂಲಕ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ಜನಸಂಘದಿಂದ ರಾಜಕೀಯ ಪ್ರಾರಂಭಿಸಿ, ಬಿಜೆಪಿಗೆ ಪಾದಾರ್ಪಣೆ ಮಾಡಿ ನಿವೃತ್ತಿಯವರೆಗೂ ಅದೇ ಪಕ್ಷದಲ್ಲಿ ಉಳಿದರು. 5800 ಕಿ.ಮೀ ಉದ್ದದ ಸುವರ್ಣ ಚತುಷ್ಪಥ ರಸ್ತೆ ನಿರ್ಮಿಸಿದ ಹೆಗ್ಗಳಿಕೆ ಇವರದಾಗಿತ್ತು. ಪ್ರೋಖ್ರಾನ್ ಅಣ್ವಸ್ತ್ರ ಪರೀಕ್ಷೆ ನಡೆಸಿ ವಿಜ್ಞಾನಿಗಳ ಆತ್ಮಸ್ಥೈರ್ಯ ಹೆಚ್ಚಿಸುವುದರ ಮೂಲಕ ಭಾರತದ ಸಾಮರ್ಥ್ಯವನ್ನು ವಿಶ್ವಕ್ಕೆ ಸಾಭೀತುಪಡಿಸಿದರು ಎಂದು ಗುಣಗಾನ ಮಾಡಿದರು. 

1999ರಲ್ಲಿ ಲಾಹೋರ್ ಗೆ ಬಸ್ ಸಂಪರ್ಕ ಕಲ್ಪಿಸುವುದರ ಮೂಲಕ ಪಾಕಿಸ್ತಾನದೊಂದಿಗೆ ಸ್ನೇಹ ಬಾಂಧವ್ಯ ಬೆಸೆದ ಇವರು, ಬಳಿಕ ಪಾಕಿಸ್ತಾನ ತನ್ನ ಮಿತ್ರ ದ್ರೋಹ ಮುಂದುವರೆಸಿದಾಗ ಕಾರ್ಗಿಲ್ ಯುದ್ಧದ ಮೂಲಕ ಪಾಠ ಕಲಿಸಿದ ಬಲಿಷ್ಠ ಪ್ರಧಾನಿ ಎಂದು ಅವರು ಬಣ್ಣಿಸಿದರು.

ಕಾಂಗ್ರೆಸ್‍ನ ಹಿರಿಯ ಮುಖಂಡ ಸಿ.ಕೆ.ಜಾಫರ್ ಶರೀಫ್ 8 ಬಾರಿ ಲೋಕಸಭೆ ಪ್ರವೇಶಿಸಿ ಇತಿಹಾಸ ನಿರ್ಮಿಸಿದ ನಾಯಕ. ರೈಲ್ವೇ ಸಚಿವರಾಗಿ ಕರ್ನಾಟಕಕ್ಕೆ ಹೆಚ್ಚು ಕೊಡುಗೆಗಳನ್ನು ನೀಡಿದ ಹೆಗ್ಗಳಿಕೆ ಇವರದು. ನಿಷ್ಠುರವಾದಿ, ನಿಷ್ಕಳಂಕ ವ್ಯಕ್ತಿ ಎಂದು ಬಣ್ಣಿಸಿದರು.

ವಿದ್ಯಾರ್ಥಿ ದೆಸೆಯಿಂದ ಹೋರಾಟ ಮಾಡಿಕೊಂಡು ಬಂದ ಅನಂತ್‍ ಕುಮಾರ್ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ 6 ಬಾರಿ ಆಯ್ಕೆಯಾಗಿ ಸೋಲಿಲ್ಲದ ಸರದಾರ ಎನಿಸಿಕೊಂಡರು. ಕೇಂದ್ರದ ವಿಮಾನ ಯಾನ ಸಚಿವರಾಗಿ ಹಲವು ಉತ್ತಮ ಕಾರ್ಯ ಮಾಡಿದ್ದರು. ಜನೌಷಧಿ ಮಳಿಗೆಗಳನ್ನು ತೆರೆದ ಧೀಮಂತ ನಾಯಕ. ಇವರ ನಿಧನದಿಂದ ರಾಷ್ಟ್ರಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಕಂಬನಿ ಮಿಡಿದರು. ಹಾಗೆಯೆ ಡಾ.ಎಂ.ಎಚ್.ಅಂಬರೀಶ್ ರಾಜಕೀಯ, ಚಲನಚಿತ್ರ ಕ್ಷೇತ್ರದಲ್ಲೂ ಉತ್ತಮ ಸೇವೆ ಸಲ್ಲಿಸಿದರು. ಕೇಂದ್ರ ಸಚಿವರಾಗಿ, ರಾಜ್ಯ ಸಚಿವರಾಗಿಯೂ ಉತ್ತಮ ಸೇವೆ ಸಲ್ಲಿಸಿದರು ಎಂದು ಬಣ್ಣಿಸಿದರು. ಅಗಲಿದ ಗಣ್ಯರಿಗೆ ಸದನದಲ್ಲಿ ಶ್ರದ್ಧಾಂಜಲಿ ಅರ್ಪಿಸಿ, ಮೃತರ ಗೌರವಾರ್ಥ ಮೌನ ಆಚರಿಸಿ ಕಲಾಪವನ್ನು ಮುಂದೂಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X