Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಿರ್ಭಯಾ ಅನುದಾನದ ಅಡಿ 115 ಮಹಿಳಾ ಚಾಲಕರ...

ನಿರ್ಭಯಾ ಅನುದಾನದ ಅಡಿ 115 ಮಹಿಳಾ ಚಾಲಕರ ತರಬೇತಿ ಕಾರ್ಯಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 Dec 2018 11:21 PM IST
share

ಬೆಂಗಳೂರು, ಡಿ.10: ಕಳೆದ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ನಿರ್ಭಯಾ ಯೋಜನೆ ಅಡಿಯಲ್ಲಿ ಮಹಿಳಾ ಚಾಲಕರ ತರಬೇತಿ ಕಾರ್ಯಕ್ಕೆ ಚಾಲನೆ ಸಿಕ್ಕಿದ್ದು, 115 ಮಹಿಳೆಯರು ತರಬೇತಿ ಪಡೆದುಕೊಂಡಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯಲ್ಲಿ ನಿರ್ಭಯಾ ಅನುದಾನದ ಅಡಿಯಲ್ಲಿ ತರಬೇತಿ ನೀಡಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಯೋಜನೆ ಅಡಿ ಮಹಿಳಾ ಚಾಲಕರನ್ನು ನೇಮಕ ಮಾಡಿಕೊಳ್ಳಬೇಕು ಎಂದಿದೆ. ಆದರೆ, ಇದಕ್ಕೆ ಹಲವು ತಿಂಗಳಿನಿಂದ ಯಾವುದೇ ರೂಪ ನೀಡಿರಲಿಲ್ಲ. ಹೀಗಾಗಿ, ಕಳೆದ ತಿಂಗಳಿನಲ್ಲಿ 115 ಮಹಿಳೆಯರು ಉಚಿತ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಂಡು ಅದರ ಲಾಭ ಪಡೆದುಕೊಂಡಿದ್ದಾರೆ.

ನಿರ್ಭಯಾ ಅನುದಾನದ 7.5 ಕೋಟಿ ರೂ. ಹಣದಲ್ಲಿ ಒಟ್ಟು 1000 ಮಹಿಳೆಯರಿಗೆ ಬಸ್ ಮತ್ತು ಲಘು ವಾಹನಗಳ ಚಾಲನಾ ತರಬೇತಿ ನೀಡಬೇಕು. ಈ ನಿಟ್ಟಿನಲ್ಲಿ 103 ಲಘು ವಾಹನಗಳ ಚಾಲನಾ ತರಬೇತಿ ಹಾಗು 12 ಮಹಿಳೆಯರಿಗೆ ಭಾರೀ ವಾಹನಗಳ ಚಾಲನಾ ತರಬೇತಿಯನ್ನು ಉಚಿತವಾಗಿ ನೀಡಲಾಗಿದೆ. ಲಘುವಾಹನಗಳ ಚಾಲನಾ ಪರವಾನಗಿ ಪಡೆದು ಒಂದು ವರ್ಷ ಪೂರೈಸಿದ ಮಹಿಳೆಯರು ಭಾರೀ ವಾಹನಗಳು ಅಂದರೆ ಬಸ್ ಚಾಲನಾ ಪರವಾನಿಗೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಲಘು ವಾಹನಗಳ ತರಬೇತಿ ಬಯಸಿ ಅರ್ಜಿ ಸಲ್ಲಿಸುವವರಿಗೆ ನಗರದ ರಸ್ತೆಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಭಾರೀ ವಾಹನಗಳ ತರಬೇತಿ ಬಯಸಿ ಅರ್ಜಿಸಲ್ಲಿಸುವವರಿಗೆ ಮಾಗಡಿ ರಸ್ತೆಯ ವಡ್ಡರಹಳ್ಳಿಯಲ್ಲಿ ತರಬೇತಿ ನೀಡಲಾಗುತ್ತಿದೆ. ಈ ತರಬೇತಿ ಪೂರ್ಣಗೊಳಿಸಿದ ನಂತರ ಬಹುತೇಕ ಮಹಿಳೆಯರು ಬಿಎಂಟಿಸಿಗೆ ಸೇರ್ಪಡೆಯಾಗುವ ಆಸಕ್ತಿ ವ್ಯಕ್ತಪಡಿಸಿದ್ದಾರೆ. ತರಬೇತಿ ಪೂರ್ಣಗೊಂಡರೆ ಅವರೆಲ್ಲರಿಗೂ ಪ್ರಮಾಣಪತ್ರ ನೀಡಲಾಗುತ್ತದೆ. ಬಿಎಂಟಿಸಿ ಚಾಲಕರನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಖಾಸಗಿ ವಾಹನ ತರಬೇತಿ ಶಾಲೆಗಿಂತ ಮಳೆಯರಿಗೆ ಉತ್ತಮ ರೀತಿಯಲ್ಲಿ ತರಬೇತಿ ನೀಡಲಾಗುವುದು ಎಂದು ಬಿಎಂಟಿಸಿ ಚಾಲಕ ಮತ್ತು ತರಬೇತುದಾರ ಎಂ.ಬಿ. ಜಯಣ್ಣ ತಿಳಿಸಿದರು. 

ಖಾಸಗಿ ಚಾಲನಾ ಶಾಲೆಗಳಲ್ಲಿ ತರಬೇತಿಗಾಗಿ ಹಣ ನೀಡಬೇಕು. ಆದರೆ, ಬಿಎಂಟಿಸಿಯು ಉಚಿತವಾಗಿ ತರಬೇತಿ ನೀಡುತ್ತಿದೆ. ಲಘು ವಾಹನಗಳ ತರಬೇತಿ ಪಡೆದ ಬಳಿಕ ಭಾರೀ ವಾಹನ ಚಾಲನೆ ತರಬೇತಿ ಪಡೆದು ಬಿಎಂಟಿಸಿಗೆ ಸೇರುತ್ತೇನೆ.

-ನಾಗರತ್ನ ರವಿಕುಮಾರ್, ತರಬೇತಿ ಪಡೆಯುತ್ತಿರುವ ಮಹಿಳೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X