ಮಂಗಳೂರಿನಲ್ಲಿ ಕಾಂಗ್ರೆಸ್ ವಿಜಯೋತ್ಸವ

ಮಂಗಳೂರು, ಡಿ. 11: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳವಾರ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂದೆ ಪಕ್ಷದ ಕಾರ್ಯಕರ್ತರು, ನಾಯಕರು ವಿಜಯೋತ್ಸವ ಆಚರಿಸಿದರು.
ಈ ಸಂದರ್ಭ ಮಾಜಿ ಶಾಸಕ ಜೆ.ಆರ್. ಲೋಬೊ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಪಕ್ಷದ ಮುಖಂಡರಾದ ಕೊಡಿಜಾಲ್ ಇಬ್ರಾಹಿಂ,
ಶಾಹುಲ್ ಹಮೀದ್, ಶಶಿದರ್ ಹೆಗ್ಡೆ, ಶಾಲೆಟ್ ಪಿಂಟೊ, ಎ.ಸಿ. ವಿನಯರಾಜ್ ಮತ್ತಿತರರು ಪಾಲ್ಗೊಂಡಿದ್ದರು.
Next Story