Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದ ಆಂತರಿಕ ಭದ್ರತೆಯಲ್ಲಿ ಗೃಹರಕ್ಷಕರ...

ದೇಶದ ಆಂತರಿಕ ಭದ್ರತೆಯಲ್ಲಿ ಗೃಹರಕ್ಷಕರ ಸೇವೆ ಅಪಾರ : ಪೊಲೀಸ್ ಆಯುಕ್ತ ಟಿ. ಆರ್. ಸುರೇಶ್

ವಾರ್ತಾಭಾರತಿವಾರ್ತಾಭಾರತಿ11 Dec 2018 8:36 PM IST
share
ದೇಶದ ಆಂತರಿಕ ಭದ್ರತೆಯಲ್ಲಿ ಗೃಹರಕ್ಷಕರ ಸೇವೆ ಅಪಾರ : ಪೊಲೀಸ್ ಆಯುಕ್ತ ಟಿ. ಆರ್. ಸುರೇಶ್

ಮಂಗಳೂರು, ಡಿ.11: ದೇಶದ ಆಂತರಿಕ ಭದ್ರತೆಯಲ್ಲಿ ಪೊಲೀಸರಿಗೆ ಸಮಾನಾಂತರವಾಗಿ ಗೃಹರಕ್ಷಕರು ನಿಸ್ವಾರ್ಥ ಸೇವೆ ಮಾಡುತ್ತಿದ್ದು, ಅವರಿಗೆ ಸರಕಾರ ಹೆಚ್ಚಿನ ಸವಲತ್ತು ಒದಗಿಸುವ ಅಗತ್ಯವಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅಭಿಪ್ರಾಯಪಟ್ಟರು.

ದ.ಕ.ಜಿಲ್ಲಾ ಗೃಹರಕ್ಷಕ ದಳವು ನಗರದ ಮೇರಿಹಿಲ್‌ನಲ್ಲಿರುವ ಜಿಲ್ಲಾ ಕಚೇರಿಯಲ್ಲಿ ರವಿವಾರ ಆಯೋಜಿಸಿದ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಗೃಹರಕ್ಷಕ ದಳದ ಮಾಜಿ ಘಟಕಾಧಿಕಾರಿ ಸುಳ್ಯದ ಗಿರೀಶ್ ಭಾರದ್ವಾಜ್ ಮಾತನಾಡಿ ಗೃಹರಕ್ಷಕರು ಉತ್ಸಾಹ, ಪ್ರಾಮಾಣಿಕತೆಯಿಂದ ಪಾರದರ್ಶಕವಾಗಿ ಕೆಲಸ ಮಾಡಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವೈ. ಶಿವರಾಮಯ್ಯ ಅತಿಥಿಯಾಗಿದ್ದರು. ಪಣಂಬೂರು ಘಟಕಾಧಿಕಾರಿ ಹರೀಶ್ ಆಚಾರ್ಯ, ಬೆಳ್ತಂಗಡಿ ಘಟಕಾಧಿಕಾರಿ ಜಯಾನಂದ, ಬಂಟ್ವಾಳ ಪ್ರಭಾರ ಘಟಕಾಧಿಕಾರಿ ಶ್ರೀನಿವಾಸ್ ಆಚಾರ್ಯ, ಬೆಳ್ತಂಗಡಿ ಘಟಕದ ಎಎಸ್‌ಎಲ್ ಅಪ್ಪುಅವರನ್ನು ಸನ್ಮಾನಿಸಲಾಯಿತು. 

ಉಪ್ಪಿನಂಗಡಿ ಸಹಸ್ತಲಿಂಗೇಶ್ವರ ದೇವಳದ ನೇತ್ರಾವತಿ ನದಿಯಲ್ಲಿ ಸಂಗಮವಾದ ಸಂದರ್ಭ ಜಿಲ್ಲಾಡಳಿತದ ಸೂಚನೆ ಮೇರೆಗೆ ಕರ್ತವ್ಯ ನಿರ್ವಹಿಸಿದ ಗೃಹರಕ್ಷಕರಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು. ಜೋಡುಪಾಲದಲ್ಲಿ ನಡೆದ ಪ್ರಕೃತಿ ದುರಂತದ ಸಂದರ್ಭ ಮಣ್ಣುಪಾಲಾದ ನಾಲ್ವರಲ್ಲಿ ಮೂರು ಮೃತದೇಹಗಳನ್ನು ಪತ್ತೆ ಮಾಡಿ ಹೊರತೆಗೆದ ಸುಳ್ಯ ಘಟಕದ ಗೃಹರಕ್ಷಕರಾದ ಅಬ್ದುಲ್ ಗಫೂರ್, ದೇವರಾಜ್, ಕಿರಣ್, ಸಚಿನ್ ಪ್ರಶಾಂತ್, ಗಿರಿಧರ ಹಾಗೂ ಉಪ್ಪಿನಂಗಡಿ ಘಟಕದ ದಿನೇಶ್ ಬಿ., ಅಣ್ಣು ಬಿ., ಜನಾರ್ದನ ಆಚಾರ್ಯ, ಅಶೋಕ್, ವಸಂತ ಕೆ., ಅವರಿಗೆ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಲಾಯಿತು. 

ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ಅಧೀಕ್ಷಕ ರತ್ನಾಕರ ಎಂ, ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್, ಹಿರಿಯ ಗೃಹರಕ್ಷಕ ರಮೇಶ್ ಭಂಡಾರಿ, ಸುರೇಶ್ ಶೇಟ್, ಲೀಲಾ ಕುಕ್ಯಾನ್, ರಾಜಶ್ರೀ, ಕೇಶವ, ದಿವಾಕರ್ ಮತ್ತಿತರರು ಉಪಸ್ಥಿತರಿದ್ದರು. 

ಡೆಪ್ಯುಟಿ ಕಮಾಂಡೆಂಟ್ ರಮೇಶ್ ಸ್ವಾಗತಿಸಿದರು. ಕಮಾಡೆಂಟ್ ಡಾ.ಮುರಲೀ ಮೋಹನ್ ಚೂಂತಾರು ವಾರ್ಷಿಕ ವರದಿ ವಾಚಿಸಿದರು. ಮಂಗಳೂರು ಘಟಕದ ಹಿರಿಯ ಗೃಹರಕ್ಷಕ ರಮೇಶ್ ಭಂಡಾರಿ ವಂದಿಸಿದರು. ಬೆಳ್ತಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ಜಯಾನಂದ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X