Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಂತಾರಾಷ್ಟ್ರೀಯ ಕಾನೂನಿನಡಿ ಖಶೋಗಿಗೆ...

ಅಂತಾರಾಷ್ಟ್ರೀಯ ಕಾನೂನಿನಡಿ ಖಶೋಗಿಗೆ ನ್ಯಾಯ: ಟರ್ಕಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ11 Dec 2018 10:44 PM IST
share
ಅಂತಾರಾಷ್ಟ್ರೀಯ ಕಾನೂನಿನಡಿ ಖಶೋಗಿಗೆ ನ್ಯಾಯ: ಟರ್ಕಿ ಒತ್ತಾಯ

ಅಂಕಾರ, ಡಿ. 11: ಸೌದಿ ಅರೇಬಿಯದ ಭಿನ್ನಮತೀಯ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆಗೆ ಅಂತಾರಾಷ್ಟ್ರೀಯ ಕಾನೂನಿನಡಿ ಜಗತ್ತು ನ್ಯಾಯ ಕೇಳಬೇಕು ಎಂದು ಟರ್ಕಿ ಸೋಮವಾರ ಹೇಳಿದೆ.

ಇಸ್ತಾಂಬುಲ್‌ನಲ್ಲಿರುವ ಸೌದಿ ಅರೇಬಿಯದ ಕೌನ್ಸುಲೇಟ್ ಕಚೇರಿಯಲ್ಲಿ ಖಶೋಗಿಯನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿದೆ ಎಂಬುದಾಗಿ ಆರೋಪಿಸಿರುವ ಸೌದಿ ಅರೇಬಿಯದ ಇಬ್ಬರು ಅಧಿಕಾರಿಗಳನ್ನು ಟರ್ಕಿಗೆ ಹಸ್ತಾಂತರಿಸಲು ಸೌದಿ ಅರೇಬಿಯ ನಿರಾಕರಿಸಿದ ಬಳಿಕ ಅದು ಈ ಬೇಡಿಕೆ ಇಟ್ಟಿದೆ.

ಶಂಕಿತರನ್ನು ಹಸ್ತಾಂತರಿಸಲು ನಿರಾಕರಿಸುವ ಸೌದಿ ಅರೇಬಿಯದ ನಿರ್ಧಾರ ಅತ್ಯಂತ ದುರದೃಷ್ಟಕರ ಹಾಗೂ ‘ಹತ್ಯೆಯನ್ನು ಮುಚ್ಚಿಹಾಕಲು ಸೌದಿ ಅರೇಬಿಯ ಪ್ರಯತ್ನಿಸುತ್ತಿದೆ’ ಎಂಬ ಟೀಕಾಕಾರರ ಮಾತುಗಳಿಗೆ ಪೂರಕವಾಗಿದೆ ಎಂದು ಟರ್ಕಿ ಅಧ್ಯಕ್ಷರ ಕಚೇರಿಯಲ್ಲಿ ಸಂಪರ್ಕ ವಿಭಾಗದ ನಿರ್ದೇಶಕ ಫಹ್ರೆಟ್ಟಿನ್ ಅಲ್ತೂನ್ ಹೇಳಿದರು.

ಸೌದಿ ಅರೇಬಿಯದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್‌ರ ಟೀಕಾಕಾರರಾಗಿದ್ದ ಖಶೋಗಿ ಅಮೆರಿಕಕ್ಕೆ ಪಲಾಯನ ಮಾಡಿದ್ದರು. ತನ್ನ ಟರ್ಕಿಯ ಗೆಳತಿಯೊಂದಿಗೆ ಮದುವೆಯಾಗುವ ಉದ್ದೇಶದಿಂದ, ತನ್ನ ಹಿಂದಿನ ಮದುವೆಯ ದಾಖಲೆಪತ್ರಗಳನ್ನು ತರಲು ಅವರು ಅಕ್ಟೋಬರ್ 2ರಂದು ಇಸ್ತಾಂಬುಲ್‌ನಲ್ಲಿರುವ ಸೌದಿ ಕೌನ್ಸುಲೇಟ್ ಕಚೇರಿಗೆ ಹೋಗಿದ್ದರು. ಅಲ್ಲಿಂದ ಅವರು ವಾಪಸ್ ಬಂದಿಲ್ಲ.

ಕೌನ್ಸುಲೇಟ್ ಕಚೇರಿಯಲ್ಲಿ ಖಶೋಗಿಯನ್ನು ಕೊಲೆ ಮಾಡಲಾಯಿತು ಎಂಬುದಾಗಿ ಎರಡು ವಾರಗಳ ಬಳಿಕ ಸೌದಿ ಅರೇಬಿಯ ಒಪ್ಪಿಕೊಂಡಿತು.

ಖಶೋಗಿ ಹತ್ಯಾ ತನಿಖೆಯಲ್ಲಿ ಸೌದಿ ಅರೇಬಿಯದ ಅಧಿಕಾರಿಗಳು ಸಹಕಾರ ನೀಡುತ್ತಿಲ್ಲ ಹಾಗೂ ಖಶೋಗಿಗೆ ಏನಾಯಿತು ಎಂಬುದರ ಮೇಲೆ ಬೆಳಕು ಚೆಲ್ಲಲು ಸೌದಿ ಪ್ರಾಸಿಕ್ಯೂಟರ್‌ಗಳು ಮುಂದಾಗಿಲ್ಲ ಎಂದು ಫಹ್ರೆಟ್ಟಿನ್ ಅಲ್ತೂನ್ ಹೇಳಿದರು.

‘‘ಹಾಗಾಗಿ, ದಿವಂಗತ ಸೌದಿ ಪತ್ರಕರ್ತನಿಗೆ ಅಂತರ್‌ರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ನ್ಯಾಯ ಕೇಳಲು ಪ್ರಯತ್ನಿಸುವುದು ಅಂತಾರಾಷ್ಟ್ರೀಯ ಸಮುದಾಯದ ಹಿತಾಸಕ್ತಿಯಿಂದ ಒಳ್ಳೆಯದು’’ ಎಂದು ಅವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X