Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆಲಂಗಾಣದಲ್ಲಿ ಮತ್ತೆ ಕೆಸಿಆರ್...

ತೆಲಂಗಾಣದಲ್ಲಿ ಮತ್ತೆ ಕೆಸಿಆರ್ ಸಾಮ್ರಾಜ್ಯ

ವಾರ್ತಾಭಾರತಿವಾರ್ತಾಭಾರತಿ11 Dec 2018 10:55 PM IST
share
ತೆಲಂಗಾಣದಲ್ಲಿ ಮತ್ತೆ ಕೆಸಿಆರ್ ಸಾಮ್ರಾಜ್ಯ

ಹೈದರಾಬಾದ್,ಡಿ.11: ತೆಲಂಗಾಣ ವಿಧಾನಸಭೆಯ 119 ಸ್ಥಾನಗಳ ಪೈಕಿ 87 ಸ್ಥಾನಗಳಲ್ಲಿ ಜಯಭೇರಿಯನ್ನು ಮೊಳಗಿಸಿರುವ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್)ಯು ರಾಜ್ಯದಲ್ಲಿ ಸತತ ಎರಡನೇ ಅವಧಿಗೆ ಅಧಿಕಾರದ ಗದ್ದುಗೆಯನ್ನೇರಲು ಸಜ್ಜಾಗುವ ಮೂಲಕ ತನ್ನ ವರಿಷ್ಠ ಕೆ.ಚಂದ್ರಶೇಖರ ರಾವ್ ಅವರ ಜನಪ್ರಿಯತೆಯನ್ನು ಮತ್ತೊಮ್ಮೆ ಸಾಬೀತುಗೊಳಿಸಿದೆ. ಕಾಂಗ್ರೆಸ್ ಕೇವಲ 21 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದ್ದರೆ,ಎಐಎಂಐಎಂ ಏಳು ಮತ್ತು ಇತರರು ಏಳು ಸ್ಥಾನಗಳನ್ನು ಗೆದ್ದಿದ್ದಾರೆ. ಬಿಜೆಪಿಗೆ ಒಂದೇ ಸ್ಥಾನ ದಕ್ಕಿದೆ.

ಸ್ವತಃ ರಾವ್ ಅವರು ಗಜ್ವೆಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ವಿ.ಪ್ರತಾಪ ರೆಡ್ಡಿಯವರನ್ನು 51,000ಕ್ಕೂ ಅಧಿಕ ಮತಗಳಿಂದ ಮಣಿಸಿ ಗೆಲುವಿನ ನಗು ಬೀರಿದ್ದಾರೆ. ಉಸ್ತುವಾರಿ ಸರಕಾರದಲ್ಲಿ ಸಚಿವರಾಗಿರುವ ರಾವ್ ಪುತ್ರ ಕೆ.ಟಿ.ರಾಮರಾವ್ ಮತ್ತು ಸೋದರ ಪುತ್ರ ಟಿ.ಹರೀಶ ರಾವ್ ಅವರೂ ಗೆಲುವು ಸಾಧಿಸಿದ್ದಾರೆ.

ರಾವ್ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ನಿಗದಿತ ಅವಧಿಗೆ ಎಂಟು ತಿಂಗಳ ಮೊದಲೇ ವಿಧಾನಸಭೆಯನ್ನು ವಿಸರ್ಜಿಸುವ ಮೂಲಕ ಆಡಿದ್ದ ರಾಜಕೀಯ ಜೂಜು ಅದ್ಭುತ ಲಾಭಗಳನ್ನು ನೀಡಿದೆ. ಟಿಆರ್‌ಎಸ್ ಹಿಂದಿನ ವಿಧಾನಸಭೆಯಲ್ಲಿ 63 ಶಾಸಕರನ್ನು ಹೊಂದಿತ್ತು. ಆದರೆ ಟಿಡಿಪಿ ಮತ್ತು ಕಾಂಗ್ರೆಸ್ ಶಾಸಕರ ಪಕ್ಷಾಂತರಗಳ ಬಳಿಕ ಈ ಸಂಖ್ಯೆ 82ಕ್ಕೇರಿತ್ತು. ಜನರು ನಮ್ಮ ಮುಖ್ಯಮಂತ್ರಿಗಳಲ್ಲಿ ಮತ್ತೊಮ್ಮೆ ವಿಶ್ವಾಸವನ್ನ್ನು ವ್ಯಕ್ತಪಡಿಸಿದ್ದಾರೆ ಮತ್ತು ಅವರು ಪ್ರತಿಪಕ್ಷದ ಅಪಪ್ರಚಾರಕ್ಕೆ ಮರುಳಾಗಿಲ್ಲ ಎಂದು ಸಿದ್ದಿಪೇಟ್ ವಿಧಾನಸಭಾ ಕ್ಷೇತ್ರದಲ್ಲಿ 1,18,499 ಮತಗಳನ್ನು ಗಳಿಸಿ ಗೆದ್ದಿರುವ ಟಿ.ಹರೀಶ ರಾವ್ ಸಂಭ್ರಮಿಸಿದರು.

ತೆಲಂಗಾಣ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ ಕೇವಲ 60 ಸ್ಥಾನಗಳ ಅಗತ್ಯವಿದ್ದರೂ ಅದಕ್ಕಿಂತ ಹೆಚ್ಚೇ ಸ್ಥಾನಗಳು ಟಿಆರ್‌ಎಸ್‌ಗೆ ಒಲಿದಿವೆ.

 ಟಿಆರ್‌ಎಸ್‌ನ ಮಿತ್ರಪಕ್ಷ ಎಐಎಂಐಎಂ ಅಭ್ಯರ್ಥಿ ಮುಹಮ್ಮದ್ ವೌಝಮ್ ಖಾನ ಅವರು ಬಹಾದುರಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ,ಪಕ್ಷದ ಮುಖ್ಯಸ್ಥ ಅಸದುದ್ದೀನ ಉವೈಸಿಯವರ ಕಿರಿಯ ಸೋದರ ಅಕ್ಬರುದ್ದೀನ್ ಉವೈಸಿ ಅವರು ಚಂದ್ರಾಯನಗುಟ್ಟಾ ಕ್ಷೇತ್ರದಿಂದ ಸತತ ಐದನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.

ಟಿಆರ್‌ಎಸ್‌ನ ಭಾರೀ ವಿಜಯ ತೆಲಂಗಾಣದಲ್ಲಿ ನೆಲೆಯನ್ನು ಕಂಡುಕೊಳ್ಳುವ ಬಿಜೆಪಿಯ ಕನಸನ್ನು ನುಚ್ಚುನೂರಾಗಿಸಿದೆ.

ಪ್ರತಿಪಕ್ಷದಲ್ಲಿ ರಾವ್ ಅವರಂತಹ ವರ್ಚಸ್ಸನ್ನು ಹೊಂದಿರುವ ನಾಯಕರಿಲ್ಲದಿರುವುದು ಅವರು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಕಾರಣಗಳಲ್ಲೊಂದಾಗಿದೆ ಎನ್ನಬಹುದು. 2014ರಲ್ಲಿ ಪ್ರತ್ಯೇಕ ರಾಜ್ಯ ಚಳವಳಿಯ ಅಲೆ ಮತ್ತು ತನ್ನ ಸ್ವಂತ ಚರಿಷ್ಮಾದಿಂದಾಗಿ ಅವರು ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿದ್ದರು. ಆದರೆ ಈ ಬಾರಿ ಪ್ರತ್ಯೇಕ ತೆಲಂಗಾಣ ಭಾವನೆ ಇರದಿದ್ದರೂ ಅವರ ಚರಿಷ್ಮಾ ಒಂದಿನಿತೂ ಮುಕ್ಕಾಗಿಲ್ಲ ಎನ್ನುವುದನ್ನು ಚುನಾವಣಾ ಫಲಿತಾಂಶವು ಸಾಬೀತುಗೊಳಿಸಿದೆ.

ಉದ್ಯೋಗಗಳು ಮತ್ತು ಎರಡು ಬೆಡ್‌ರೂಮ್ ಮನೆಗಳನ್ನು ನೀಡುವ ತನ್ನ ಭರವಸೆಗಳನ್ನು ರಾವ್ ಈಡೇರಿಸಿಲ್ಲ ಎಂದು ಜನರು ದೂರಿದ್ದರೂ ಆಡಳಿತ ವಿರೋಧಿ ಅಲೆಯು ರಾವ್ ವಿರುದ್ಧ ಕೆಲಸ ಮಾಡಲಿಲ್ಲ ಎನ್ನುವುದೂ ಟಿಆರ್‌ಎಸ್‌ನ ಬೃಹತ್ ಗೆಲುವಿಗೆ ಕಾರಣವಾಗಿದೆ.

ಕಾಂಗ್ರೆಸ್,ಟಿಡಿಪಿ,ಸಿಪಿಐ ಮತ್ತು ಟಿಎಸ್‌ಜೆಗಳ ಮಹಾಮೈತ್ರಿಕೂಟಕ್ಕಿಂತ ಟಿಆರ್‌ಎಸ್‌ಗೇ ಮುಸ್ಲಿಂ ಮತದಾರರು ಹೆಚ್ಚಿನ ಒಲವು ವ್ಯಕ್ತಪಡಿಸಿರುವಂತೆ ಕಂಡು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X