Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಕಲ ಸೇನಾ ಗೌರವಗಳೊಂದಿಗೆ ಲೆಫ್ಟಿನೆಂಟ್...

ಸಕಲ ಸೇನಾ ಗೌರವಗಳೊಂದಿಗೆ ಲೆಫ್ಟಿನೆಂಟ್ ಜನರಲ್ ಬಿ.ಸಿ.ನಂದ ಅಂತ್ಯ ಸಂಸ್ಕಾರ

ವಾರ್ತಾಭಾರತಿವಾರ್ತಾಭಾರತಿ13 Dec 2018 7:15 PM IST
share
ಸಕಲ ಸೇನಾ ಗೌರವಗಳೊಂದಿಗೆ ಲೆಫ್ಟಿನೆಂಟ್ ಜನರಲ್ ಬಿ.ಸಿ.ನಂದ ಅಂತ್ಯ ಸಂಸ್ಕಾರ

ಮಡಿಕೇರಿ, ಡಿ.13: ಭಾರತೀಯ ಸೇನಾ ಪಡೆಯಲ್ಲಿ ತಮ್ಮ ಉನ್ನತ ಸ್ತರದ ಕಾರ್ಯವೈಖರಿಗಳ ಮೂಲಕ ಅಚ್ಚಳಿಯದ ಛಾಪು ಮೂಡಿಸಿದ್ದ ಕೊಡಗಿನ ಹೆಮ್ಮೆಯ ಪುತ್ರ ಲೆಫ್ಟಿನೆಂಟ್ ಜನರಲ್ ಬಿ.ಸಿ.ನಂದ ಅವರ ಅಂತ್ಯ ಸಂಸ್ಕಾರ ಸಕಲ ಸೇನಾ ಗೌರವಗಳೊಂದಿಗೆ ನಗರದಂಚಿನ ಅವರ ಸ್ವಗೃಹದ ಸಮೀಪದ ತೋಟದಲ್ಲಿ ನೆರವೇರಿತು.

ನಗರದ ಅಬ್ಬಿಫಾಲ್ಸ್ ರಸ್ತೆಯ ಬಳಿಯ ಹಸಿರ ಪರಿಸರದ ನಡುವೆ ಕಳೆದ ಮೂರು ದಶಕಗಳಿಂದ ತಮ್ಮ ನಿವೃತ್ತ ನೆಮ್ಮದಿಯ ಬದುಕು ಸಾಗಿಸಿದ್ದ ಲೆ.ಜ.ಬಿದ್ದಂಡ ಚಂಗಪ್ಪ ನಂದಾ(87) ಅವರು ಬುಧವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದರು. ಗುರುವಾರ ಅಪರಾಹ್ನ 3 ಗಂಟೆಯ ಬಳಿಕ ಸಕಲ ಸೇವಾ ಗೌರವಗಳಿಗೂ ಮುನ್ನ ಕುಟುಂಬಸ್ಥರಿಂದ ಅಂತಿಮ ವಿಧಿ ವಿಧಾನಗಳು ನೆರವೇರಿದವು. ಪತ್ನಿ ಲೀಲಾ ನಂದ ಹಾಗೂ ದ್ವಿತೀಯ ಪುತ್ರಿ ದೇವಿಕಾ ಅವರು ಕೊಡವ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

ಮೂಲತಃ ಮಹರ್ ರೆಜಿಮೆಂಟಿನವರಾದ, ಹಾಲಿ ಮೈಸೂರಿನಲ್ಲಿ ಎನ್‍ಸಿಸಿ ಕಮಾಂಡೆಂಟ್ ಆಗಿರುವ ಕರ್ನಲ್ ಎಂ.ಕೆ. ಬೆಳ್ಯಪ್ಪ ಹಾಗೂ ಮೆಡ್ರಾಸ್ ಸ್ಯಾಪರ್ಸ್ ತಂಡದ ನೇತೃತ್ವ ವಹಿಸಿದ್ದ ಲೆ.ಕ. ದಿನೇಶ್ ಕುಮಾರ್ ನೇತೃತ್ವದ 21 ಮಂದಿಯ ತಂಡ ಅಗಲಿದ ಸೇನಾಧಿಕಾರಿ ಬಿ.ಸಿ. ನಂದ ಅವರಿಗೆ ಮೂರು ಸುತ್ತಿನ ಕುಶಾಲತೋಪು ಸಿಡಿಸಿ ಅಂತಿಮ ಗೌರವ ಸಲ್ಲಿಸಿದರು.

ಈ ಸಂದರ್ಭ ನಂದಾ ಅವರ ಪಾರ್ಥಿವ ಶರೀರಕ್ಕೆ ಭಾರತೀಯ ಭೂ ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಉತ್ತರ ವಲಯದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್, ದಕ್ಷಿಣ ವಲಯದ ಸೇನಾ ಮುಖ್ಯಸ್ಥ ಲೆ.ಜ. ಎ.ಕೆ. ಸೈನಿ, ತರಬೇತಿ ವಿಭಾಗದ ಮುಖ್ಯಸ್ಥ ಲೆ. ಜ. ಪಟ್ಟಚೆರುವಂಡ ತಿಮ್ಮಯ್ಯ ಹಾಗೂ ಮಹರ್ ರೆಜಿಮೆಂಟಿನ ಸಮಸ್ತ ಸೈನಿಕರು ಮತ್ತು ಅಧಿಕಾರಿಗಳ ಪರವಾಗಿ ಪುಷ್ಪಗುಚ್ಛವನ್ನು ಇರಿಸಿ ನಮನ ಸಲ್ಲಿಸಿದರು. ಬಳಿಕ ಪಾರ್ಥಿವ ಶರೀರಕ್ಕೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಬಿ.ಸಿ. ನಂದ ಅವರ ಪತ್ನಿ ಲೀಲಾ ನಂದ ಅವರಿಗೆ ಸೇನಾಧಿಕಾರಿ ಲೆ.ಕ. ದಿನೇಶ್ ಕುಮಾರ್ ಹಸ್ತಾಂತರಿಸಿದರು. ನಂತರ ಬಿ.ಸಿ.ನಂದ ಅವರ ಪಾರ್ಥಿವ ಶರೀರದ ಮೇಲಿದ್ದ ಅವರ ಮಹರ್ ರೆಜಿಮೆಂಟಿನ ‘ಕ್ಯಾಪ್’, ಪದಕಾವಳಿಗಳು ಹಾಗೂ ಕೊಡವ ಸಾಂಪ್ರದಾಯಿಕ ಪೀಚೆಕತ್ತಿಯನ್ನು ಅವರ ಸಮೀಪದ ಬಂಧುಗಳು ತೆಗೆದು ಕುಟುಂಬಸ್ಥರಿಗೆ ನೀಡಿದರು.

ಅಂತಿಮ ಸಂಸ್ಕಾರದ ವಿಧಿ ವಿಧಾನಗಳ ಸಂದರ್ಭ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜ.ತಿಮ್ಮಯ್ಯ ಫೋರಂನ ಅಧ್ಯಕ್ಷ ನಿವೃತ್ತ ಕರ್ನಲ್ ಕಂಡ್ರತಂಡ ಸಿ.ಸುಬ್ಬಯ್ಯ, ಸಂಚಾಲಕರಾದ ಮೇಜರ್ ಬಿ.ಎ.ನಂಜಪ್ಪ ಸೇರಿದಂತೆ ಕುಟುಂಬಸ್ಥರು ಹಾಗೂ ಬಂಧು ಬಳಗದವರು ಸಹಕರಿಸಿದರು.ಲೆ.ಜ. ಬಿ.ಸಿ.ನಂದ ಅವರ ಆಶಯದಂತೆ ಅವರ ಪಾರ್ಥಿವ ಶರೀರವನ್ನು ಮನೆಯ ಆವರಣದ ತೋಟದಲ್ಲಿ ಭೂ ತಾಯಿಯ ಮಡಿಲಿಗೆ ಅರ್ಪಿಸಲಾಯಿತು.

ಗೌರವ ಸಲ್ಲಿಕೆ
ಏರ್ ಮಾರ್ಷಲ್ ಕೆ.ಸಿ. ಕಾರ್ಯಪ್ಪ, ಮೀನಾ ಕಾರ್ಯಪ್ಪ, ಕಾರ್ಯಪ್ಪ ಅವರ ಸಹೋದರಿ ಸಹೋದರಿ ನಳಿನಿ ಕಾರ್ಯಪ್ಪ, ನಿವೃತ್ತ ಮೇ.ಜ. ಎಸ್.ಕೆ. ಕಾರ್ಯಪ್ಪ, ಮೇ.ಜ.ಕೆ.ಪಿ. ನಂಜಪ್ಪ, ಲೆ.ಕ. ಕೆ.ಜಿ. ಉತ್ತಯ್ಯ, ಬೆಟ್ಟಗೇರಿ ಸಮೂಹ ತೋಟಗಳ ಮಾಲಕರಾದ ಡಿ.ವಿನೋದ್ ಶಿವಪ್ಪ, ಮಾಜಿ ಸಚಿವ ಎಂ.ಸಿ.ನಾಣಯ್ಯ, ಎಂ.ಬಿ.ದೇವಯ್ಯ, ಐ.ಕೆ.ಅನಿಲ್, ಕೊಂಗಂಡ ಸುರೇಶ್, ಗ್ರಾಮ ವ್ಯಾಪ್ತಿಯ ನಿವಾಸಿಗಳು, ಸಾರ್ವಜನಿಕರು, ನಿವೃತ್ತ ಸೈನಿಕರು ಹಾಗೂ ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X