Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. “ಸದನದಲ್ಲಿ ರೈತರ ಸಮಸ್ಯೆ, ಅಭಿವೃದ್ಧಿಯ...

“ಸದನದಲ್ಲಿ ರೈತರ ಸಮಸ್ಯೆ, ಅಭಿವೃದ್ಧಿಯ ವಿಷಯ ಬಿಟ್ಟು ಟಿಪ್ಪು ಜಯಂತಿ ವಿಷಯ ಎತ್ತಿದ್ದೀರಿ”

ಬಿಜೆಪಿ ನಾಯಕರ ವಿರುದ್ಧ ಸಚಿವ ಕೃಷ್ಣಬೈರೇಗೌಡ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ13 Dec 2018 7:28 PM IST
share
“ಸದನದಲ್ಲಿ ರೈತರ ಸಮಸ್ಯೆ, ಅಭಿವೃದ್ಧಿಯ ವಿಷಯ ಬಿಟ್ಟು ಟಿಪ್ಪು ಜಯಂತಿ ವಿಷಯ ಎತ್ತಿದ್ದೀರಿ”

ಬೆಳಗಾವಿ, ಡಿ.13: ಟಿಪ್ಪು ಜಯಂತಿ ಬಗ್ಗೆ ಸಮ್ಮಿಶ್ರ ಸರಕಾರ ಸ್ಪಷ್ಟ ಉತ್ತರ ಕೊಡದೆ ನುಣುಚಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಮೂರು ಬಾರಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

'ಗುರುವಾರ ವಿಧಾನ ಪರಿಷತ್‍ನಲ್ಲಿ ಟಿಪ್ಪು ಜಯಂತಿ ಸಂಬಂಧ ಸರಕಾರದ ಸ್ಪಷ್ಟ ನಿಲುವನ್ನು ಮುಖ್ಯಮಂತ್ರಿ ಅವರಿಂದ ಕೊಡಿಸುವುದಾಗಿ ಸಭಾ ನಾಯಕಿ ಡಾ. ಜಯಮಾಲಾ ಬುಧವಾರ ತಿಳಿಸಿದ್ದು, ಇಂದು ನಿಯಮ 72ರಡಿ ಗಮನ ಸೆಳೆಯುವ ಸೂಚನೆಯಲ್ಲಿ ಟಿಪ್ಪು ಜಯಂತಿ ವಿಷಯ ಅಜೆಂಡಾದಿಂದ ಕೈಬಿಡಲಾಗಿದೆ. ಸಭಾನಾಯಕಿ ಮಾತನ್ನು ತಪ್ಪಿದ್ದಾರೆ. ಹೀಗಾಗಿ ಸರಕಾರದ ನಿಲುವು ಏನೆಂಬುದನ್ನು ಸ್ಪಷ್ಟಪಡಿಸಿಬೇಕು ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.

ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಟಿಪ್ಪು ಜಯಂತಿಯಿಂದ ಕೋಮುಸೌರ್ಹಾದತೆ ಹಾಳಾಗಿದೆ. ಟಿಪ್ಪು ಜಯಂತಿ ಮುಂದುವರಿಸುತ್ತೀರೋ, ಇಲ್ಲವೋ ? ಎಲ್ಲಾ ಅಜೆಂಡಾಕ್ಕೆ ಉತ್ತರ ನೀಡುತ್ತೀರಿ. ಟಿಪ್ಪು ವಿಚಾರ ಬಂದಾಗ ಫಲಾಯನ ಮಾಡುವುದೇಕೆ? ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಬೈರೇಗೌಡ, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ, ರೈತರ ಸಮಸ್ಯೆಯ ವಿಷಯ ಬಿಟ್ಟು ಟಿಪ್ಪು ಜಯಂತಿ ವಿಷಯ ಎತ್ತಿದ್ದೀರಿ. ಮೂರು ರಾಜ್ಯದ ಫಲಿತಾಂಶ ಬಂದರೂ, ಬಿಜೆಪಿಗೆ ಅರಿವು ಬಂದಿಲ್ಲ ಎಂದು ದೂರಿದರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು, ಸದನದ ಬಾವಿಗಿಳಿದು ಪ್ರತಿಭಟಿಸಿದರು. ಈ ವೇಳೆ ಸಭಾಪತಿ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

ಉತ್ತರಕ್ಕೆ ಸಮಯ ಕೊಡಿ: ಬಿಜೆಪಿ ಆತಂಕ ಪಡುವ ಅಗತ್ಯವಿಲ್ಲ. ನಿಮ್ಮ ಎಲ್ಲಾ ಬೇಡಿಕೆಗೆ ಸಕಾರಾತ್ಮಕವಾಗಿ ಸರಕಾರ ಸ್ಪಂದಿಸಿದೆ. ಮುಖ್ಯಮಂತ್ರಿಗಳು ಕೆಲಸದ ಒತ್ತಡದಲ್ಲಿದ್ದಾರೆ. ಉತ್ತರಿಸಲು ವಿಳಂಬವಾಗಿದೆ. ಉತ್ತರ ಕೊಡಿಸುವುದು ನನ್ನ ಜವಾಬ್ದಾರಿ. ರೈತರ ಮತ್ತು ಉ.ಕ. ಅಭಿವೃದ್ಧಿ ವಿಷಯಕ್ಕಿಂತ ಟಿಪ್ಪು ವಿಚಾರ ಮುಖ್ಯವೇ ? ಉತ್ತರ ನೀಡುತ್ತೇವೆ. ಸಮಯ ನೀಡಿ ಎಂದು ಸಚಿವ ಕೃಷ್ಣಬೈರೇಗೌಡ ಮನವಿ ಮಾಡಿದರು.

ಮಾತು ತಪ್ಪಿದ ಕಾಂಗ್ರೆಸ್: ಟಿಪ್ಪು ಜಯಂತಿ ಮುಂದುವರಿಸುತ್ತೀರಾ ಎಂಬ ಪ್ರಶ್ನೆಗೆ ಗುರುವಾರ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ತಿಳಿಸಿ ಕಾಂಗ್ರೆಸ್ ಮಾತು ತಪ್ಪಿದೆ. ರೈತರ ಹೆಸರು ಹೇಳಿ ಈ ವಿಷಯದಲ್ಲಿ ಜಾರಿಕೊಳ್ಳಲು ಕಾಂಗ್ರೆಸ್ ನೊಡುತ್ತಿದೆ. ಆಡಳಿತ ಪಕ್ಷ ಹಠಮಾರಿ ಧೋರಣೆ ಅನುಸರಿಸುತ್ತಿದೆ. ಕ್ರೈಸ್ತ, ಕೊಡವರನ್ನು ಕೊಂದ ಟಿಪ್ಪು ಜಯಂತಿ ಅಗತ್ಯವೇ ? ಸರಕಾರದ ನಿರ್ಧಾರವೇನು ಎಂದು ಬಿಜೆಪಿ ಸದಸ್ಯರು ಪ್ರಶ್ನಿಸಿದರು.

ಬಿಜೆಪಿ ಸದಸ್ಯರಿಗೆ ಅಪಹಾಸ್ಯ: ಟಿಪ್ಪು ಜಯಂತಿ ಆಚರಣೆ ಬಗ್ಗೆ ಸರಕಾರದ ನಿರ್ಧಾರ ತಿಳಿಸಬೇಕು ಎಂದು ಬಿಜೆಪಿ 4 ಬಾರಿ ಸದನದ ಬಾವಿಗಿಳಿದು ಪ್ರತಿಭಟಿಸಿತು. ಅಂತಿಮವಾಗಿ ಸಭಾಪತಿ ಆಡಳಿತ ಪಕ್ಷ ಉತ್ತರಿಸಲು ಸಮಯ ನೀಡಿ ಎಂದಿದಕ್ಕೆ ಪೀಠಕ್ಕೆ ಗೌರವ ಕೊಟ್ಟು ಬಿಜೆಪಿ ಸದಸ್ಯರು ತಮ್ಮ ಸ್ಥಾನದಲ್ಲಿ ಕುಳಿತುಕೊಂಡರು. ಈ ಸಮಯದಲ್ಲಿ ಕೆಲ ಕಾಂಗ್ರೆಸ್ ಸದಸ್ಯರು ಶೇಮ್.. ಶೇಮ್.. ಎಂದು ಬಿಜೆಪಿ ಸದಸ್ಯರಿಗೆ ಅಪಹಾಸ್ಯ ಮಾಡಿದ ಪ್ರಸಂಗ ನಡೆಯಿತು. ಇದರಿಂದ ಆಕ್ರೋಶಗೊಂಡ ಸದಸ್ಯರು ಸದನದ ಬಾವಿಗಿಳಿದು ಸರಕಾದ ವಿರುದ್ಧ ಘೋಷಣೆ ಕೂಗಿದರು. ಡಾ.ಜಯಮಾಲಾ ಕ್ಷಮೆಯಾಚಿಸಿ, ಡಿ.21ರವರೆಗೆ ಅವೇಶನ ನಡೆಯಲಿದೆ. ಆದ್ದರಿಂದ ಅಷ್ಟರೊಳಗೆ ಉತ್ತರ ನೀಡುತ್ತೇವೆ ಎಂದು ತಿಳಿಸಿ, ಬಿಜೆಪಿ ಸದಸ್ಯರನ್ನು ಸಮಾಧಾನಪಡಿಸುವಲ್ಲಿ ಯಶಸ್ವಿಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X