Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹಾಕಿ ವಿಶ್ವಕಪ್: ಭಾರತದ ಐತಿಹಾಸಿಕ...

ಹಾಕಿ ವಿಶ್ವಕಪ್: ಭಾರತದ ಐತಿಹಾಸಿಕ ಗೆಲುವಿನ ಕನಸು ಭಗ್ನ

ಹಾಲೆಂಡ್, ಬೆಲ್ಜಿಯಂ ಸೆಮಿ ಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ13 Dec 2018 8:41 PM IST
share
ಹಾಕಿ ವಿಶ್ವಕಪ್: ಭಾರತದ ಐತಿಹಾಸಿಕ ಗೆಲುವಿನ ಕನಸು ಭಗ್ನ

ಭುವನೇಶ್ವರ, ಡಿ.13: ಪುರುಷರ ವಿಶ್ವಕಪ್‌ನ ನಾಲ್ಕನೇ ಕ್ವಾರ್ಟರ್‌ಫೈನಲ್‌ನಲ್ಲಿ ಆತಿಥೇಯ ಭಾರತ ಬಲಿಷ್ಠ ಹಾಲೆಂಡ್ ವಿರುದ್ಧ 2-1 ಗೋಲುಗಳ ಅಂತರದಿಂದ ಸೋಲನುಭವಿಸಿದೆ. ಈ ಸೋಲಿನೊಂದಿಗೆ 43 ವರ್ಷಗಳ ಬಳಿಕ ವಿಶ್ವಕಪ್‌ನ ಸೆಮಿ ಫೈನಲ್‌ಗೆ ತಲುಪುವ ಆತಿಥೇಯರ ಕನಸು ಭಗ್ನವಾಗಿದೆ.

ಗುರುವಾರ ನಡೆದ ಪಂದ್ಯದಲ್ಲಿ ಭಾರತದ ಪರ ಆಕಾಶ್‌ದೀಪ್ ಸಿಂಗ್(12ನೇ ನಿಮಿಷ) ಏಕೈಕ ಗೋಲು ಬಾರಿಸಿದರು. ಹಾಲೆಂಡ್‌ನ ಪರ ಥಿಯರಿ ಬ್ರಿಂಕ್‌ಮನ್(15ನೇ ನಿ.)ಹಾಗೂ ಮಿಂಕ್ ವ್ಯಾನ್‌ಡರ್ ವೀರ್ಡನ್(50ನೇ ನಿ.) ತಲಾ ಒಂದು ಗೋಲು ಗಳಿಸಿ ತಂಡದ ಗೆಲುವಿಗೆ ನೆರವಾದರು.

 ಹಾಲೆಂಡ್ ಡಿ.15 ರಂದು ನಡೆಯುವ 2ನೇ ಸೆಮಿ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯ ತಂಡವನ್ನು ಎದುರಿಸಲಿದೆ.

 ಹಾಲೆಂಡ್ ತಂಡ ಮೂರನೇ ಕ್ವಾರ್ಟರ್‌ನಲ್ಲಿ ಒಂದು ಹಂತದಲ್ಲಿ ಸತತ 3 ಪೆನಾಲ್ಟಿ ಕಾರ್ನರ್ ಅವಕಾಶ ಪಡೆದಿತ್ತು. ಭಾರತ ಮೂರು ಅವಕಾಶದಲ್ಲಿ ಎದುರಾಳಿಗೆ ಗೋಲು ನಿರಾಕರಿಸಿತು. ವ್ಯಾಂಡರ್ ವೀರ್ಡನ್ 50ನೇ ನಿಮಿಷದಲ್ಲಿ ಪೆನಾಲ್ಟಿಕಾರ್ನರನ್ನು ಗೋಲಾಗಿ ಪರಿವರ್ತಿಸಿ ತಂಡಕ್ಕೆ ಮಹತ್ವದ ಮುನ್ನಡೆ ಒದಗಿಸಿಕೊಟ್ಟರು. ಇದಕ್ಕೂ ಮೊದಲು ಪಂದ್ಯದ ಮೊದಲಾರ್ಧದಲ್ಲಿ ಉಭಯ ತಂಡಗಳು 1-1 ರಿಂದ ಸಮಬಲ ಸಾಧಿಸಿದ್ದವು.

12ನೇ ನಿಮಿಷದಲ್ಲಿ ರಿವರ್ಸ್ ಫ್ಲಿಕ್ ಮೂಲಕ ಗೋಲು ಬಾರಿಸಿದ ಆಕಾಶ್ ದೀಪ್ ಸಿಂಗ್ ಭಾರತಕ್ಕೆ 1-0 ಮುನ್ನಡೆ ಒದಗಿಸಿಕೊಟ್ಟರು.

 ಆತಿಥೇಯರ ಮುನ್ನಡೆಯ ಸಂಭ್ರಮ ಹೆಚ್ಚುಹೊತ್ತು ಉಳಿಯಲಿಲ್ಲ. 15ನೇ ನಿಮಿಷದಲ್ಲಿ ಗೋಲ್‌ಕೀಪರ್ ಶ್ರೀಜೇಶ್‌ರನ್ನು ವಂಚಿಸಿದ ಥಿಯರಿ ಬ್ರಿಂಕ್‌ಮನ್ ಸ್ಕೋರನ್ನು 1-1 ರಿಂದ ಸಮಬಲಗೊಳಿಸಿದರು.

ಭಾರತಕ್ಕೆ 11ನೇ ನಿಮಿಷದಲ್ಲಿ ಮೊದಲ ಬಾರಿ ಪೆನಾಲ್ಟಿ ಕಾರ್ನರ್ ಅವಕಾಶ ಲಭಿಸಿತ್ತು. ಆದರೆ ಇದನ್ನು ಬಳಸಿಕೊಳ್ಳಲು ವಿಫಲವಾಯಿತು.

ಉಭಯ ತಂಡಗಳು 2018ರಲ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊನೆಯ ಬಾರಿ ಮುಖಾಮುಖಿಯಾಗಿದ್ದು, ಆ ಪಂದ್ಯ 1-1ರಿಂದ ಡ್ರಾನಲ್ಲಿ ಕೊನೆಗೊಂಡಿತ್ತು. ಹಾಲೆಂಡ್ ವಿಶ್ವಕಪ್‌ನಲ್ಲಿ ಭಾರತ ವಿರುದ್ಧ ಆಡಿರುವ 6 ಪಂದ್ಯಗಳಲ್ಲಿ ಅಜೇಯ ದಾಖಲೆ ಕಾಯ್ದುಕೊಂಡಿದ್ದು, 5ರಲ್ಲಿ ಗೆಲುವು ಹಾಗೂ ಒಂದರಲ್ಲಿ ಡ್ರಾ ಸಾಧಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X