Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಬಿಎಂಪಿಗೂ ಬಂತು ಪ್ರೌಢ ಶಿಕ್ಷಣ...

ಬಿಬಿಎಂಪಿಗೂ ಬಂತು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ !

ವಾರ್ತಾಭಾರತಿವಾರ್ತಾಭಾರತಿ13 Dec 2018 10:06 PM IST
share
ಬಿಬಿಎಂಪಿಗೂ ಬಂತು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ !

ಬೆಂಗಳೂರು, ಡಿ.13: ಇದೇ ಮೊದಲ ಬಾರಿಗೆ ಬಿಬಿಎಂಪಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ರಚಿಸಲಾಗಿದೆ. ರಾಜ್ಯ ಸರಕಾರ ಮಂಡಳಿ ನಡೆಸುವಂತೆಯೇ ಪಾಲಿಕೆಯ ಮಂಡಳಿಯೂ ಕಾರ್ಯನಿರ್ವಹಿಸಲಿದೆ. ರಾಜ್ಯ ಸರಕಾರದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮಾದರಿಯಲ್ಲಿಯೇ, ಪಾಲಿಕೆಯಲ್ಲೂ ಮಂಡಳಿ ರಚನೆಯಾಗಿದ್ದು, ಪಾಲಿಕೆಯ ಪ್ರೌಢಶಾಲೆಗಳ ಎಲ್ಲ ಪ್ರಾಂಶುಪಾಲರು, ಶಿಕ್ಷಣಾಧಿಕಾರಿಗಳು, ಶಿಕ್ಷಣ ವಿಭಾಗದ ಅಧಿಕಾರಿಗಳು ಇರಲಿದ್ದಾರೆ.

ರಾಜ್ಯ ಪರೀಕ್ಷಾ ಮಂಡಳಿಯಿಂದ ಒಮ್ಮೆ ಮಾತ್ರ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತದೆ. ಆದರೆ, ಪಾಲಿಕೆಯಿಂದ ಮುಖ್ಯ ಪರೀಕ್ಷೆಯೊಳಗೆ ಎರಡು ಬಾರಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ಯೋಜನೆ ರೂಪಿಸಲಾಗಿದೆ. ಪರೀಕ್ಷೆಯನ್ನೂ ಸಹ ಸರಕಾರದ ಪರೀಕ್ಷಾ ಮಂಡಳಿ ನಡೆಸುವಂತಹ ರೀತಿಯಲ್ಲಿಯೇ ನಡೆಸಲು ತೀರ್ಮಾನಿಸಿದ್ದು, ಇದರಿಂದಾಗಿ ಮಕ್ಕಳಿಗೆ ಪರೀಕ್ಷೆಯ ಭಯ ಹೋಗಲಿದೆ.

ಬಿಬಿಎಂಪಿಯ 32 ಪ್ರೌಢ ಶಾಲೆಗಳಲ್ಲಿ ಸೋಮವಾರದಿಂದ ಮೊದಲ ಪೂರ್ವ ಸಿದ್ಧತಾ ಪರೀಕ್ಷ್ಷೆ ಆರಂಭವಾಗಲಿದೆ. ಅದರಂತೆ ಈಗಾಗಲೇ ಪ್ರತಿಯೊಂದು ವಿಷಯ ನಾಲ್ಕು ಪ್ರಶ್ನೆ ಪತ್ರಿಕೆಗಳು ಮಂಡಳಿಗೆ ಸಲ್ಲಿಕೆಯಾಗಿದ್ದು, ಆ ಪೈಕಿ ಒಂದು ಪ್ರಶ್ನೆ ಪತ್ರಿಕೆಯನ್ನು ಹಿರಿಯ ಅಧಿಕಾರಿಗಳು ಆಯ್ಕೆ ಮಾಡಿದ್ದಾರೆ. ಬಿಬಿಎಂಪಿ ಶಾಲೆಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಈಗಾಗಲೇ ಬಿಬಿಎಂಪಿ ರೋಶಿನಿ ಯೋಜನೆ ಜಾರಿ ಮಾಡಿದ್ದು, ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಿ, ಉತ್ತಮ ಫಲಿತಾಂಶ ತರುವ ಶಾಲೆಗಳ ಶಿಕ್ಷಕರಿಗೆ ಪ್ರೋತ್ಸಾಹ ಧನ ನೀಡಲು ಬಿಬಿಎಂಪಿ ಚಿಂತಿಸಿದ್ದು, ಪರೀಕ್ಷಾ ಮಂಡಳಿ ರಚಿಸಿದೆ.

ಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಶಾಲಾ-ಕಾಲೇಜುಗಳಿಗೆ ಸೇರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಆದರೆ, ಫಲಿತಾಂಶ ಪ್ರಮಾಣ ಮಾತ್ರ ಶೇ.70ರಷ್ಟು ದಾಟುತ್ತಿಲ್ಲ. ಉತ್ತಮ ಫಲಿತಾಂಶ ತರುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು, ಪ್ರತ್ಯೇಕ ಮಂಡಳಿಯ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಉತ್ತಮ ಫಲಿತಾಂಶ ನೀಡುವ ಸಲುವಾಗಿ ಪರೀಕ್ಷಾ ಮಂಡಳಿಯನ್ನು ರಚಿಸಲಾಗಿದೆ.

ಶಿಕ್ಷಕರಿಗೆ ಪ್ರೋತ್ಸಾಹ ಧನ: ಜತೆಗೆ ತಂತ್ರಜ್ಞಾನ ಆಧಾರಿತ ಶಿಕ್ಷಣ ಮಕ್ಕಳಿಗೆ ದೊರೆಯಬೇಕೆಂಬ ಉದ್ದೇಶದಿಂದ ಮೈಕ್ರೋಸಾಫ್ಟ್ ಹಾಗೂ ಟೆಕ್ ಅವಾಂತ್ ಗಾರ್ಡ್ ಸಂಸ್ಥೆಗಳ ಸಹಯೋಗದಲ್ಲಿ ಬಿಬಿಎಂಪಿ ರೋಶಿನಿ ಯೋಜನೆ ಜಾರಿಗೆ ತಂದಿದ್ದು, ಇದೀಗ ಉತ್ತಮ ಫಲಿತಾಂಶ ನೀಡುವ ಶಿಕ್ಷಕರಿಗೆ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಿದೆ.

ಶಾಲೆಗಳು ಪಡೆಯುವ ಫಲಿತಾಂಶದ ಆಧಾರದ ಮೇಲೆ ಶಿಕ್ಷಕರಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅದರಂತೆ ಶೇ.60ರಿಂದ 70, 70 ರಿಂದ 80, 80 ರಿಂದ 90 ಹಾಗೂ 90 ರಂದ 100ರಷ್ಟು ಫಲಿತಾಂಶ ಪಡೆಯುವ ಶಾಲೆಗಳಿಗೆ ಒಂದೊಂದು ರೀತಿಯ ಪ್ರೋತ್ಸಾಹ ಧನ ಹಂಚಿಕೆ ಮಾಡಲಾಗುತ್ತದೆ. ಇದರಿಂದಾಗಿ ಶಾಲಾ-ಕಾಲೇಜುಗಳ ನಡುವೆ ಗುಣಾತ್ಮಕ ಪೈಪೋಟಿ ಏರ್ಪಡಲಿದ್ದು, ಶಿಕ್ಷಕರಲ್ಲಿಯೂ ಉತ್ಸಾಹ ಹೆಚ್ಚಾಗಲಿದೆ ಎನ್ನುತ್ತಾರೆ ಪಾಲಿಕೆಯ ಅಧಿಕಾರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X