Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಿ ಗ್ರೂಪ್ ಹುದ್ದೆಗೆ ನೇಮಕಾತಿ...

ಡಿ ಗ್ರೂಪ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಬಗ್ಗೆ ವಿವರ ಸಲ್ಲಿಸಲು ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ13 Dec 2018 10:25 PM IST
share

ಬೆಂಗಳೂರು, ಡಿ.13: ಅನುಕಂಪದ ಆಧಾರದಲ್ಲಿ ಡಿ ಗ್ರೂಪ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಸಂಬಂಧದ ಕೇಂದ್ರ ಸರಕಾರದ ನಿಯಮಗಳ ವಿವರಗಳನ್ನು ಸಲ್ಲಿಸುವಂತೆ ಹೈಕೋರ್ಟ್ ಕೇಂದ್ರ ಸರಕಾರದ ಪರ ವಕೀಲರಿಗೆ ನಿರ್ದೇಶನ ನೀಡಿದೆ.

ತನ್ನ ತಂದೆ ಸೇವೆಯಲ್ಲಿರುವಾಗ ಮರಣ ಹೊಂದಿದ ಹಿನ್ನೆಲೆಯಲ್ಲಿ ಅನುಕಂಪದ ಆಧಾರದಲ್ಲಿ ತನಗೆ ನೌಕರಿ ಕೊಡಬೇಕು ಎಂದು ಕೋರಿ ಸಲ್ಲಿಸಿದ ಮನವಿಯನ್ನು ಕೇಂದ್ರ ಆಡಳಿತ ನ್ಯಾಯ ಮಂಡಳಿ ತಿರಸ್ಕರಿಸಿದ ಆದೇಶವನ್ನು ರದ್ದುಪಡಿಸಬೇಕೆಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ನಿವಾಸಿ ರಾಜು ಪಿ. ಕೊರವಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ರವಿ ಮಳಿಮಠ ಹಾಗೂ ನ್ಯಾ. ಕೆ.ನಾಟರಾಜನ್ ಅವರಿದ್ದ ನ್ಯಾಯಪೀಠ, ಈ ನಿರ್ದೇಶನ ನೀಡಿತು.

ವಿಚಾರಣೆ ವೇಳೆ, ಅರ್ಜಿದಾರನ ಮನವಿಯನ್ನು ತಿರಸ್ಕರಿಸಲು ಮೃತ ನೌಕರನ ಕುಟುಂಬ ಹೇಗೊ ಇಷ್ಟು ವರ್ಷ ಜೀವನ ಸಾಗಿಸಿದೆ. ಮೇಲಾಗಿ ಸಣ್ಣ ಕುಟುಂಬ, ಅಷ್ಟೊಂದು ಬಡತನ ಕಾಣುತ್ತಿಲ್ಲ, ಆರ್ಥಿಕ ಸಮಸ್ಯೆಯೂ ಇರಲಿಕ್ಕಿಲ್ಲ, ಅನ್ನುವಂತಹ ಕಾರಣಗಳನ್ನು ನೀಡಿರುವುದಕ್ಕೆ ನಿಮ್ಮ ನಿಲುವು ಅಚ್ಚರಿ ಮತ್ತು ಬೇಸರ ತರಿಸಿದೆ. ಅನುಕಂಪದ ಅರ್ಥ ನಿಮಗೆ ತಿಳಿದಿದೆಯಾ, ಮಾನವೀಯತೆ ಆಧಾರದಲ್ಲಿ ನೋಡಿದರೆ ನಿಮಗೆ ಹೇಗೆ ಅನಿಸುತ್ತದೆ, ಅನುಕಂಪದ ಆಧಾರದಲ್ಲಿ ನೌಕರಿ ಕೇಳಿಕೊಂಡು ಬಂದವರ ಬಗ್ಗೆ ನಿಮ್ಮ ನಿಲುವು ಇದೇನಾ ಎಂದು ಭಾರತೀಯ ಅಂಚೆ ಸೇವಾ ಇಲಾಖೆ ಪರ ವಕೀಲರನ್ನು ತೀಕ್ಷ್ಣವಾಗಿ ನ್ಯಾಯಪೀಠ ಪ್ರಶ್ನಿಸಿತು.

ಇದಕ್ಕೆ, ಮನವಿಯನ್ನು ನಿಯಮಗಳ ಪ್ರಕಾರ ಆಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಭಾರತೀಯ ಅಂಚೆ ಸೇವಾ ಇಲಾಖೆ ಪರ ವಕೀಲರು ನ್ಯಾಯಪೀಠಕ್ಕೆ ಸ್ಪಷ್ಟನೆ ನೀಡಿದರು. ಈ ಹಿಂದೆ ತಾಯಿ ಕೊಟ್ಟ ಮನವಿ ತಿರಸ್ಕೃತಗೊಂಡಿದೆ ಎಂದು ಎರಡನೇ ಬಾರಿ ಮಗ ಸಲ್ಲಿಸಿದ ಮನವಿ ತಿರಸ್ಕರಿಸುವುದು ಯಾವ ನ್ಯಾಯ. ಹೀಗಾಗಿ, ಅನುಕಂಪದ ಆಧಾರದಲ್ಲಿ ಡಿ ಗ್ರೂಪ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಇರುವ ಕೇಂದ್ರ ಸರಕಾರದ ನಿಯಮಗಳ ವಿವರಗಳನ್ನು ಕೋರ್ಟ್‌ಗೆ ಸಲ್ಲಿಸಿ. ಒಂದೊಮ್ಮೆ ನಿಯಮಗಳು ವ್ಯತಿರಿಕ್ತವಾಗಿದ್ದರೆ, ನಿಮ್ಮ ವಿರುದ್ಧ ನ್ಯಾಯಾಲಯ ಕಠಿಣ ನಿಲುವು ತಾಳಬೇಕಾಗುತ್ತದೆ. ಅರ್ಜಿದಾರರ ಮನವಿ ತಿರಸ್ಕರಿದ ದಿನದಿಂದ ನೇಮಕಾತಿ ಹಾಗೂ ವೇತನ, ಭತ್ತೆ, ಭಡ್ತಿ ಹಾಗೂ ಇತರ ಸೇವಾ ಸೌಲಭ್ಯಗಳನ್ನು ಪೂರ್ವಾನ್ವಯವಾಗುವಂತೆ ಆದೇಶ ನೀಡಬೇಕಾಗಬಹುದು ಎಂದು ಹೇಳಿ ನ್ಯಾಯಪೀಠ ವಿಚಾರಣೆಯನ್ನು ಡಿ.18ಕ್ಕೆ ಮುಂದೂಡಿತು.

ಪ್ರಕರಣವೇನು: ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಪರಶುರಾಮ ಕೊರವಿ ಎಂಬುವರು ಭಾರತೀಯ ಅಂಚೆ ಸೇವಾ ಇಲಾಖೆಯಲ್ಲಿ ಟೆಲಿಗ್ರಾಫ್‌ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅನಾರೋಗ್ಯದ ಕಾರಣ 2001 ಮಾರ್ಚ್‌ನಲ್ಲಿ ಅವರು ನಿಧನರಾಗಿದ್ದಾರೆ. ಆಗ ಮಗ ರಾಜು ಕೊರವಿ ವಯಸ್ಸು 3 ವರ್ಷ ಆಗಿರುತ್ತದೆ. ಅನುಕಂಪದ ಆಧಾರದಲ್ಲಿ ನೌಕರಿ ಕೊಡುವಂತೆ ಪರಶುರಾಮ ಅವರ ಪತ್ನಿ ಮನವಿ ಸಲ್ಲಿಸುತ್ತಾರೆ. ಪತ್ನಿಗೆ ಶೈಕ್ಷಣಿಕ ಅರ್ಹತೆ ಇಲ್ಲ, ಮಗ ವಯಸ್ಕನಾಗಿಲ್ಲ ಎಂಬ ಕಾರಣಕ್ಕೆ ಭಾರತೀಯ ಅಂಚೆ ಸೇವೆ 2002ರಲ್ಲಿ ಮನವಿಯನ್ನು ತಿರಸ್ಕರಿಸುತ್ತದೆ. 2016ರಲ್ಲಿ ರಾಜು ವಯಸ್ಕನಾಗುತ್ತಾನೆ. ಆಗ ಆತ ಪುನಃ ಮನವಿ ಸಲ್ಲಿಸುತ್ತಾರೆ. ಅದನ್ನೂ ಸಹ ತಿರಿಸ್ಕರಿಸಲಾಗುತ್ತದೆ. ಆಗ ಆತ ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಮೊರೆ ಹೋಗುತ್ತಾನೆ. ಸಿಎಟಿ ಅಂಚೆ ಇಲಾಖೆಯ ಆದೇಶ ಎತ್ತಿಹಿಡಿಯುತ್ತದೆ. ಹೀಗಾಗಿ, ರಾಜು ಕೊರವಿ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಅರ್ಜಿದಾರರ ಪರ ವಕೀಲ ಓಂ ಪ್ರಶಾಂತ ವಾದ ಮಂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X