Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಸ್ತಿ ತೆರಿಗೆ ಪಾವತಿಸದೇ ಇದ್ದಲ್ಲಿ ದಂಡ,...

ಆಸ್ತಿ ತೆರಿಗೆ ಪಾವತಿಸದೇ ಇದ್ದಲ್ಲಿ ದಂಡ, ಜಫ್ತಿ ಕ್ರಮ: ಕಟ್ಟಡ ಮಾಲಕರಿಗೆ ಬಿಬಿಎಂಪಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ13 Dec 2018 10:27 PM IST
share

ಬೆಂಗಳೂರು, ಡಿ. 13: ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಈವರೆಗೆ ಪಾವತಿಸದೇ ಇರುವ ಕಟ್ಟಡಗಳ ಮಾಲಕರು ಕೂಡಲೇ ಆಸ್ತಿ ತೆರಿಗೆ ಪಾವತಿಸಬೇಕು. ಪಾವತಿಸದೇ ಇದ್ದಲ್ಲಿ ದಂಡ, ಜಫ್ತಿ ಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಬಿಬಿಎಂಪಿ ಮಹದೇವಪುರ ವಲಯದ ಜಂಟಿ ಆಯುಕ್ತ ಎನ್.ಸಿ.ಜಗದೀಶ್ ಹಾಗೂ ಉಪ ಆಯುಕ್ತ ಕೆ. ಶಿವೇಗೌಡ ಅವರು ಕಟ್ಟಡ ಮಾಲಕರಿಗೆ ಎಚ್ಚರಿಸಿದ್ದಾರೆ. 

ಮಹದೇವಪುರ ವಲಯದ ಹೂಡಿ, ವೈಟ್‌ಫೀಲ್ಡ್, ಮಾರತ್‌ಹಳ್ಳಿ, ಕೆ.ಆರ್.ಪುರ, ಹೊರಮಾವು ಮತ್ತು ಎಚ್.ಎ.ಎಲ್ ಸೇರಿದಂತೆ ಒಟ್ಟು ಆರು ಕಂದಾಯ ಉಪ ಭಾಗಗಳಲ್ಲಿ ಪ್ರಸ್ತುತ ಸಾಲಿನ ಆಸ್ತಿ ತೆರಿಗೆ ಬೇಡಿಕೆ 556 ಕೋಟಿ ರೂ. ಹಾಗೂ ಬಾಕಿ ಆಸ್ತಿ ತೆರಿಗೆ ಬೇಡಿಕೆ 244 ಕೋಟಿ ರೂ. ಒಳಗೊಂಡಂತೆ ಒಟ್ಟು ವಸೂಲಿ ಮಾಡಬೇಕಾಗಿರುವ ಆಸ್ತಿ ತೆರಿಗೆಯ ಮೊತ್ತ 800 ಕೋಟಿ ರೂ. ಆಗಿದೆ. ಈವರೆಗೆ ವಸೂಲಿಯಾಗಿರುವ ಆಸ್ತಿ ತೆರಿಗೆ ಮೊತ್ತ 511.59 ಕೋಟಿ ರೂ. ಆಗಿದ್ದು, ವಸೂಲಿ ಮಾಡಬೇಕಾಗಿರುವ ಮೊತ್ತ 288.41 ಕೋಟಿ ರೂ. ಆಗಿದೆ. ಅತೀ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿ ಮಾಲಕರು ಹಾಗೂ ಅನುಭವದಾರರ ವಿವರಗಳನ್ನು ಈಗಾಗಲೇ ವಾರ್ಡ್ ಕಚೇರಿಗಳಲ್ಲಿ, ಉಪ ವಿಭಾಗಗಳ ಕಚೇರಿಗಳಲ್ಲಿ ಮತ್ತು ವಲಯ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಒಟ್ಟು 9891 ಕಟ್ಟಡಗಳ ಮಾಲಕರಿಗೆ ಕಾರಣ ಕೇಳಿ ನೋಟೀಸ್‌ಗಳನ್ನು ಜಾರಿಗೊಳಿಸಲಾಗಿದೆ. ಆರು ಉಪ ವಿಭಾಗಗಳಿಂದ ಟಾಪ್-500 ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ಸುಸ್ಥಿದಾರರ ಪಟ್ಟಿ ಮಾಡಲಾಗಿದೆ. ಅತೀ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ 100 ಕ್ಕೂ ಹೆಚ್ಚು ಸುಸ್ಥಿದಾರರಿಗೆ ಜಪ್ತಿ ವಾರೆಂಟನ್ನು ಜಾರಿಗೊಳಿಸಲಾಗಿದೆ.

ಜಪ್ತಿ ಮಾಡುವುದಕ್ಕೆ ಮೊದಲೆ ಬಹುತೇಕ ಜಪ್ತಿ ವಾರೆಂಟ್ ಜಾರಿಗೊಳಿಸಿದ ಕೂಡಲೇ ಕೆಲವು ಆಸ್ತಿದಾರರು ಆಸ್ತಿ ತೆರಿಗೆಯನ್ನು ಪಾವತಿಸಲು ಮುಂದಾಗಿದ್ದಾರೆ. ಇನ್ನೂ ಉಳಿದ ಸುಸ್ಥಿದಾರರಿಗೂ ಕೂಡ ಜಪ್ತಿ ವಾರೆಂಟ್‌ಗಳನ್ನು ಜಾರಿಗೊಳಿಸುವ ಪ್ರಕ್ರಿಯೆ ಮುಂದುವರೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X