Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತರೀಕೆರೆ: ಮಂಗಳಮುಖಿಯಿಂದ ಕಾಲನಿ...

ತರೀಕೆರೆ: ಮಂಗಳಮುಖಿಯಿಂದ ಕಾಲನಿ ನಿವಾಸಿಗಳಿಗೆ ಕಿರುಕುಳ; ಗಡಿಪಾರಿಗೆ ಒತ್ತಾಯಿಸಿ ಎಸ್ಪಿಗೆ ದಸಂಸ ದೂರು

ವಾರ್ತಾಭಾರತಿವಾರ್ತಾಭಾರತಿ13 Dec 2018 11:59 PM IST
share
ತರೀಕೆರೆ: ಮಂಗಳಮುಖಿಯಿಂದ ಕಾಲನಿ ನಿವಾಸಿಗಳಿಗೆ ಕಿರುಕುಳ; ಗಡಿಪಾರಿಗೆ ಒತ್ತಾಯಿಸಿ ಎಸ್ಪಿಗೆ ದಸಂಸ ದೂರು

ಚಿಕ್ಕಮಗಳೂರು, ಡಿ.13: ಸದಾ ಕಲಹಗಳನ್ನು ಸೃಷ್ಟಿಸುತ್ತಾ ತನ್ನ ದುರ್ವರ್ತನೆಯಿಂದ ಊರಿನ ಶಾಂತಿ ಮತ್ತು ನೆಮ್ಮದಿಯನ್ನು ಹಾಳು ಮಾಡುತ್ತಿರುವ ವ್ಯಕ್ತಿಯನ್ನು ತರೀಕೆರೆಯಿಂದ ಗಡಿಪಾರು ಮಾಡುವಂತೆ ತರೀಕೆರೆ ಬಾಪೂಜಿ ಕಾಲನಿಯ ನಿವಾಸಿಗಳು ಜಿಲ್ಲಾ ಪೋಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರ ನೇತೃತ್ವದಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಅವರನ್ನು ಭೇಟಿ ಮಾಡಿದ ಕಾಲನಿಯ ನಿವಾಸಿಗಳು ಎಸ್ಪಿಗೆ ಈ ಸಂಬಂಧ ಮನವಿ ಸಲ್ಲಿಸಿದರು.

ತಮ್ಮ ಕಾಲನಿಯಲ್ಲಿ ತಿಪ್ಪೇಶ ಆಲಿಯಾಸ್ ಅರುಂಧತಿ ಎಂಬ ಮಂಗಳಮುಖಿಯೋರ್ವರು ಕಳೆದ 2 ವರ್ಷಗಳಿಂದ ಸದಾ ಒಂದಿಲ್ಲೊಂದು ಕಲಹಗಳನ್ನು ಸೃಷ್ಟಿಸುತ್ತಾ ಗ್ರಾಮದ ಶಾಂತಿ ಮತ್ತು ನೆಮ್ಮದಿಯನ್ನು ಹಾಳು ಮಾಡುತ್ತಿದ್ದಾರೆ. ಜನಪ್ರತಿನಿಧಿಗಳು ಮತ್ತು ಸಮಾಜದ ಮುಖಂಡರ ಮೇಲೆ ಇಲ್ಲಸಲ್ಲದ ಮೊಕದ್ದಮೆಗಳನ್ನು ದಾಖಲಿಸುತ್ತಿದ್ದಾರೆ. ನಾನು ಮಂಗಳಮುಖಿಯಾಗಿರುವುದರಿಂದ ನಾನು ಏನು ಮಾಡಿದರೂ ಯಾರೂ ನನ್ನನ್ನು ಕೇಳುವುದಿಲ್ಲ, ಕಾನೂನು ನನ್ನ ಪರವಾಗಿದೆ, ನಿಮ್ಮನ್ನು ಸುಟ್ಟುಬಿಡುತ್ತೇನೆ ಎಂದು ಹೆದರಿಸುವ ಆತ ರಾತ್ರಿ ವೇಳೆ ಚೌಡಿ, ದುರ್ಗಿ ಮತ್ತು ಮೋಹಿನಿ ವೇಷಗಳನ್ನು ಧರಿಸಿಕೊಂಡು ಕೇರಿ ಕೇರಿಗಳಲ್ಲಿ ಸುತ್ತುತ್ತಾ ಮನೆಗಳ ಮೇಲೆ ವಿಭೂತಿ ಎಸೆಯುತ್ತಿದ್ದಾನೆ. ತ್ರಿಶೂಲ ಹಿಡಿದು ಪ್ರಾಣಭಯ ಮೂಡಿಸುತ್ತಿದ್ದಾನೆ ಎಂದು ಈ ವೇಳೆ ದಸಂಸ ಮುಖಂಡರೊಂದಿಗಿದ್ದ ಕಾಲನಿ ನಿವಾಸಿಗಳು ಆರೋಪಿಸಿದರು.

ರಾತ್ರಿ ವೇಳೆ ಅಮಾಯಕರನ್ನು ಕರೆದು ಕಾಲಿಗೆ ಬೀಳಿಸಿಕೊಳ್ಳುವುದು, ಅವರ ಮೇಲೆ ದೌರ್ಜನ್ಯವೆಸಗುವುದು ಮಾಡುತ್ತಿರುವ ಆತ ಗ್ರಾಮ ದೇವತೆ ಅಂತರ ಘಟ್ಟಮ್ಮನವರ ದೇವಸ್ಥಾನಕ್ಕೆ ಬೀಗಹಾಕಿ ಕೀಯನ್ನು ಇಟ್ಟುಕೊಂಡಿದ್ದಾರೆ. ಇದರಿಂದಾಗಿ ದೇವಾಲಯದಲ್ಲಿ ಕಳೆದ 5 ದಿನಗಳಿಂದ ದಿನನಿತ್ಯದ ಪೂಜೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ಎಸ್ಪಿ ಬಳಿ ಅಳಲು ತೋಡಿಕೊಂಡರು.

ಮೊಬೈಲ್‍ನಲ್ಲಿ ದಾಖಲಿಸಿದ್ದ ಮಂಗಳಮುಖಿಯದ್ದು ಎನ್ನಲಾದ ನಡವಳಿಕೆಗಳ ವಿಡಿಯೊ ದೃಶ್ಯಾವಳಿಗಳನ್ನು ಪೊಲೀಸ್ ವರಿಷ್ಠಾಧಿಕಾರಿಮುಖ್ಯಾಧಿಕಾರಿ ಹರೀಶ್ ಪಾಂಡೆಗೆ ತೋರಿಸಿದ ನಿವಾಸಿಗಳು ತಕ್ಷಣ ಆತನನ್ನು ತರೀಕೆರೆಯಿಂದ ಗಡಿಪಾರು ಮಾಡುವ ಮೂಲಕ ಕಾಲನಿಯ ಜನರು ನೆಮ್ಮದಿಯಿಂದ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಮನವಿಗೆ ಪ್ರತಿಕ್ರಿಯಿಸಿದ ಎಸ್ಪಿ ಹರೀಶ್ ಪಾಂಡೆ ಈಗಾಗಲೇ ಅತನ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ. ಆತನ ಗಡಿಪಾರಿಗೆ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮರ್ಲೆ ಅಣ್ಣಯ್ಯ, ಸಂಘಟನಾ ಸಂಚಾಲಕ ಮಹೇಂದ್ರ ಸ್ವಾಮಿ, ಖಂಡಪ್ಪ, ಖಜಾಂಚಿ ಅರ್.ಶೇಖರ್, ತರೀಕೆರೆ ತಾಲೂಕು ಸಂಚಾಲಕ ಅಣ್ಣಪ್ಪ, ಕಡೂರು ಸಂಚಾಲಕ ಲಕ್ಷ್ಮಣ್, ನಿವಾಸಿಗಳಾದ ಟಿ.ಎಚ್.ಶ್ರೀನಿವಾಸ್, ವೇಣು, ಸಚಿನ್, ಗೌರಮ್ಮ, ಕುಮಾರ್, ಟಿ.ಲೋಕೇಶ್, ಶೋಭಾ, ಪದ್ಮಾ, ರತ್ನಮ್ಮ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X