Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ...

ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಪ್ರಸ್ತಾವನೆ: ಎಸ್ಪಿ ಲಕ್ಷ್ಮಣ್ ನಿಂಬರ್ಗಿ

ಸಂತೆಕಟ್ಟೆ, ಅಂಬಲಪಾಡಿ, ಕಟಪಾಡಿ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್

ವಾರ್ತಾಭಾರತಿವಾರ್ತಾಭಾರತಿ14 Dec 2018 4:44 PM IST
share
ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಪ್ರಸ್ತಾವನೆ: ಎಸ್ಪಿ ಲಕ್ಷ್ಮಣ್ ನಿಂಬರ್ಗಿ

ಉಡುಪಿ, ಡಿ.14: ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆ, ಅಂಬಲಪಾಡಿ ಹಾಗೂ ಕಟಪಾಡಿ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ಬ.ನಿಂಬರ್ಗಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿಂದು ನಡೆದ ಎಸ್ಪಿ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಅವರು ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು. ಈ ಮೂರು ಜಂಕ್ಷನ್‌ಗಳಲ್ಲಿ ವಾಹನ ದಟ್ಟನೆ ಹೆಚ್ಚಿದ್ದು, ಪೊಲೀಸ್ ಸಿಬ್ಬಂದಿ ಗಳನ್ನು ನೇಮಕ ಮಾಡಿದರೂ ಟ್ರಾಫಿಕ್ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಇಲ್ಲಿಗೆ ಟ್ರಾಫಿಕ್ ಸಿಗ್ನಲ್‌ಗಳ ಅಗತ್ಯತೆಯನ್ನು ಮನಗಂಡು ಇಲಾಖೆಗೆ ಪತ್ರ ಬರೆಯಲಾಗಿದೆ ಎಂದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸಲು ಅವಕಾಶ ಇಲ್ಲ ದಿದ್ದರೂ ಇಲ್ಲಿ ಸಿಗ್ನಲ್ ಅಳವಡಿಸದಿದ್ದರೆ ಟ್ರಾಫಿಕ್ ನಿಯಂತ್ರಣ ಸಾಧ್ಯವಿಲ್ಲ. ಆದುದರಿಂದ ವಿಶೇಷ ಆದ್ಯತೆ ಮೇರೆಗೆ ಈ ಮೂರು ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್ ಮಂಜೂರು ಮಾಡುವಂತೆ ಇಲಾಖೆಗೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

ಈ ಹಿಂದೆ 10 ಕಿ.ಮೀ. ದೂರದ ಕುಂದಾಪುರದ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿದ್ದ ಹಟ್ಟಿಯಂಗಡಿ ಗ್ರಾಮವು ಈಗ 15ಕಿ.ಮೀ. ದೂರದ ಕಂಡ್ಲೂರಿನಲ್ಲಿ ಹೊಸದಾಗಿ ಸ್ಥಾಪನೆಗೊಂಡ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುತ್ತಿದ್ದು, ಇದರಿಂದ ಗ್ರಾಮಸ್ಥರಿಗೆ ದೂರು ನೀಡಲು ಸಮಸ್ಯೆ ಯಾಗುತ್ತಿದೆ. ಆದುದರಿಂದ ಮೊದಲಿನಂತೆ ಈ ಗ್ರಾಮವನ್ನು ಕುಂದಾಪುರ ಠಾಣಾ ವ್ಯಾಪ್ತಿಗೆ ಒಳಪಡಿಸುವಂತೆ ಸ್ಥಳೀಯರೊಬ್ಬರು ಕರೆ ಮಾಡಿ ಮನವಿ ಮಾಡಿದರು. ಈ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಎಸ್ಪಿ ಹೇಳಿದರು.

ಗಂಗೊಳ್ಳಿ ಸ್ಮಶಾನದಲ್ಲಿ ಜಾತಿಬೇಧ

ಗಂಗೊಳ್ಳಿಯ ಸ್ಮಶಾನದಲ್ಲಿ ಕೇವಲ ಒಂದು ಜಾತಿಯವರು ಬಿಟ್ಟರೆ ಇತರ ಜಾತಿಯವರ ಹೆಣಗಳನ್ನು ಸುಡಲು ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಗ್ರಾಪಂಗೆ ದೂರು ನೀಡಿದರೂ ಸ್ಪಂದನೆ ಇಲ್ಲ. ಅಲ್ಲಿದ್ದ ಸಾರ್ವಜನಿಕ ಸ್ಮಶಾನ ಎಂಬ ಬೋರ್ಡ್‌ನ್ನು ಕೂಡ ಗ್ರಾಪಂ ತೆರವುಗೊಳಿಸಿದೆ. ತಹಶೀಲ್ದಾರರು ಇಲ್ಲಿ ಎಲ್ಲ ಜಾತಿಯವರಿಗೆ ಅವಕಾಶ ನೀಡುವಂತೆ ಸೂಚಿಸಿದರೂ ಗ್ರಾಪಂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಗ್ರಾಮಸ್ಥರೊಬ್ಬರು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ, ಈ ಸಂಬಂಧ ಕುಂದಾಪುರ ತಹಶೀಲ್ದಾರ್ ಹಾಗೂ ಡಿವೈಎಸ್ಪಿ ಅವರಿಗೆ ಸ್ಥಳ ಪರಿಶೀಲಿಸಿ ಸಮಸ್ಯೆ ಬಗೆಹರಿಸುವಂತೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.

ಉಡುಪಿ ನಗರಸಭೆ ಕಚೇರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ಪಾರ್ಕಿಂಗ್ ಸಮಸ್ಯೆ ಕುರಿತ ದೂರಿಗೆ ಪ್ರತ್ರಿಯಿಸಿದ ಎಸ್ಪಿ, ನಗರಸಭೆ ಈ ಸಂಬಂಧ ನಗರ ಹಾಗೂ ಮಣಿಪಾಲದಲ್ಲಿ ಸ್ಥಳಗಳನ್ನು ಗುರುತಿಸಿ ಬಹುಮಹಡಿ ಪಾರ್ಕಿಂಗ್ ಕಟ್ಟಡಗಳನ್ನು ನಿರ್ಮಿಸಬೇಕಾಗಿದೆ. ಇದ ರಿಂದ ನಗರದ ಪಾರ್ಕಿಂಗ್ ಸಮಸ್ಯೆ ಬಗೆಹರಿಸಬಹುದು ಎಂದು ಅಭಿಪ್ರಾಯ ಪಟ್ಟರು.

ಮಲ್ಪೆಪಡುಕೆರೆ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರಿಂದ ಅತೀವೇಗದ ಸಂಚಾರ, ಮಣಿಪಾಲ ಲಕ್ಷ್ಮೀಂದ್ರ ನಗರ 7ನೇ ಕ್ರಾಸ್ ಬಳಿ ಬ್ಯಾರಿಕೇಡ್ ಅಳ ವಡಿಕೆ, ಗಂಗೊಳ್ಳಿ ಪರ್ಮಿಟ್ ಇಲ್ಲದೆ ಬಸ್ ಓಡಾಟ, ಇಸ್ಪೀಟ್ ಜುಗಾರಿ, ಕಾರ್ಕಳ ಹಾಳೆಕಟ್ಟೆ ಜಿಪಂ ರಸ್ತೆಯಲ್ಲಿ ಅಧಿಕ ಭಾರದ ವಾಹನಗಳು ಸಂಚಾರ, ಉಡುಪಿ ಕಲ್ಪನಾ ಥಿಯೇಟರ್ ಬಳಿ ಪುಟ್‌ಪಾತ್‌ನಲ್ಲಿ ಬೀದಿ ವ್ಯಾಪಾರ, ಉಡುಪಿ ಬಿಗ್ ಬಜಾರ್‌ನಲ್ಲಿ ಪಾರ್ಕಿಂಗ್ ಸಮಸ್ಯೆ, ಕರ್ಕಶ ಹಾರ್ನ್ ಕುರಿತ ದೂರುಗಳು ಬಂದವು.

ಠಾಣೆಯ ಕರೆಗಳು ಮನೆಗೆ !

ಉಡುಪಿ ವೃತ್ತ ನಿರೀಕ್ಷಕರ ಕಚೇರಿಯ ಸ್ಥಿರ ದೂರವಾಣಿಗೆ ಬರುವ ಕರೆಗಳು ತಮ್ಮ ಮನೆಯ ದೂರವಾಣಿಗೆ ಬರುವ ಕುರಿತು ನಗರದ ನಿವಾಸಿಯೊಬ್ಬರು ಎಸ್ಪಿಯವರಲ್ಲಿ ದೂರಿಕೊಂಡರು. ಈ ಕುರಿತು ಬಿಎಸ್ಸೆನ್ನೆಸ್ ಕಚೇರಿಯನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಎಸ್ಪಿ ನಿಂಬರ್ಗಿ ಭರವಸೆ ನೀಡಿದರು.

ಕುಂದಾಪುರದಿಂದ ಉಡುಪಿಗೆ ಬರುವ ಖಾಸಗಿ ಬಸ್‌ಗಳು ಸಂತೆಕಟ್ಟೆಯ ಸರ್ವಿಸ್ ರಸ್ತೆಯಲ್ಲಿರುವ ನಿಲ್ದಾಣದಲ್ಲಿ ನಿಲುಗಡೆ ಮಾಡದೆ ರಾ.ಹೆ.ಯಲ್ಲಿ ನಿಲ್ಲಿಸಿ ಸಂಚಾರಕ್ಕೆ ತೊಂದರೆ ಮಾಡುತ್ತಿರುವ ಕುರಿತ ದೂರಿಗೆ ಪ್ರತಿಕ್ರಿಯಿಸಿದ ಎಸ್ಪಿ ಲಕ್ಷ್ಮಣ್ ನಿಂಬರ್ಗಿ, ಅಂತಹ ಬಸ್‌ಗಳನ್ನು ಮುಟ್ಟುಗೋಲು ಹಾಕುವಂತೆ ಸಂಚಾರ ಪೊಲೀಸರಿಗೆ ಸೂಚನೆ ನೀಡಿದರು.

ಇತರ ಇಲಾಖೆಯ ದೂರುಗಳು!

ಮಲ್ಪೆ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ, ಮಲ್ಪೆಬಂದರಿನಲ್ಲಿ ಬಾಲ ಕಾರ್ಮಿಕರು, ಅಕ್ರಮ ಕಲ್ಲು ಗಣಿಗಾರಿಕೆ, ಮರಳುಗಾರಿಕೆ, ಕುಂದಾಪುರ ನೆರೆಮನೆಯ ತೆಂಗಿನ ಮರದಿಂದ ತೊಂದರೆ, ನಿಟ್ಟೂರಿನಲ್ಲಿ ಸಾಕು ನಾಯಿಗಳ ಹಾವಳಿ ಸೇರಿದಂತೆ ಪೊಲೀಸ್ ಇಲಾಖೆಗೆ ಸಂಬಂಧಿಸದ ಹಲವು ದೂರುಗಳು ಬಂದವು. ಇದಕ್ಕೆ ಸ್ಪಂದಿಸಿದ ಎಸ್ಪಿ ನಿಂಬರ್ಗಿ, ಈ ಕುರಿತು ಆಯಾ ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸಲಾಗುವುದು ಎಂದು ತಿಳಿಸಿದರು.

ಮೂರು ವಾರಗಳ ಒಟ್ಟು ಪ್ರಕರಣಗಳು

ಉಡುಪಿ ಜಿಲ್ಲೆಯಲ್ಲಿ ನ.23ರಿಂದ ಈವರೆಗೆ 7 ಮಟ್ಕಾ ಪ್ರಕರಣದಲ್ಲಿ 8, 4 ಜುಗಾರಿ ಪ್ರಕರಣದಲ್ಲಿ 25, ಒಂದು ಗಾಂಜಾ ಸೇವನೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಉಳಿದಂತೆ ಕೋಟ್ಪಾ 38, ಕುಡಿದು ವಾಹನ ಚಾಲನೆ 79, ಕರ್ಕಶ ಹಾರ್ನ್ 174, ಮೊಬೈಲ್ ಬಳಸಿ ವಾಹನ ಚಾಲನೆ 27, ಹೆಲ್ಮೆಟ್ ಧರಿಸದೆ ವಾಹನ ಚಾಲನೆ 1571, ಅತಿವೇಗ 52, ಇತರ ಮೋಟಾರ್ ಕಾಯಿದೆ ಉಲ್ಲಂಘನೆ 2601 ಪ್ರಕರಣಗಳು ದಾಖಲಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X