Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ನಿಷೇಧ ನಿರ್ಧಾರದ ಆರ್ಥಿಕ ಪರಿಣಾಮದ...

ನೋಟು ನಿಷೇಧ ನಿರ್ಧಾರದ ಆರ್ಥಿಕ ಪರಿಣಾಮದ ಅಧ್ಯಯನ ಮಾಡಿಲ್ಲ ಎಂದ ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ14 Dec 2018 8:55 PM IST
share
ನೋಟು ನಿಷೇಧ ನಿರ್ಧಾರದ ಆರ್ಥಿಕ ಪರಿಣಾಮದ ಅಧ್ಯಯನ ಮಾಡಿಲ್ಲ ಎಂದ ಕೇಂದ್ರ ಸರಕಾರ

ಹೊಸದಿಲ್ಲಿ,ಡಿ.14: ನೋಟು ನಿಷೇಧದಿಂದ ಆರ್ಥಿಕತೆಯ ಮೇಲೆ ಉಂಟಾಗಿರುವ ಪರಿಣಾಮದ ಅಧ್ಯಯನ ಅಥವಾ ಮೌಲ್ಯಮಾಪನವನ್ನು ತಾನು ಮಾಡಿಲ್ಲ ಎಂದು ಕೇಂದ್ರ ಸರಕಾರವು ಶುಕ್ರವಾರ ಲೋಕಸಭೆಯಲ್ಲಿ ತಿಳಿಸಿತು.

ನೋಟು ನಿಷೇಧದ ನಂತರದ ಪರಿಣಾಮಗಳ ಕುರಿತು ಪ್ರಶ್ನೆಯೊಂದಕ್ಕೆ ಸದನದಲ್ಲಿ ಉತ್ತರಿಸಿದ ಸಹಾಯಕ ವಿತ್ತ ಸಚಿವ ಪಿ.ರಾಧಾಕೃಷ್ಣನ್ ಅವರು ಈ ವಿಷಯವನ್ನು ತಿಳಿಸಿದರು.

2016,ನ.8ರಂದು ರಾತ್ರಿ ದೇಶವನ್ನುದ್ದೇಶಿಸಿ ಮಾಡಿದ್ದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು,ಅಂದು ಮಧ್ಯರಾತ್ರಿಯಿಂದ 1,000 ಮತ್ತು 5,00 ರೂ.ನೋಟುಗಳ ನಿಷೇಧವನ್ನು ಪ್ರಕಟಿಸಿದ್ದರು. ಈ ಕ್ರಮವು ಕಪ್ಪುಹಣ ಮತ್ತು ನಕಲಿ ನೋಟುಗಳ ಹಾವಳಿಯನ್ನು ಅಂತ್ಯಗೊಳಿಸಲಿದೆ ಎಂದು ಅವರು ಹೇಳಿದ್ದರು.

 ಆದರೆ,ನೋಟುಗಳ ನಿಷೇಧಕ್ಕೆ ಮುನ್ನ ಚಲಾವಣೆಯಲ್ಲಿದ್ದ ನೋಟುಗಳ ಪೈಕಿ ಶೇ.99.3ರಷ್ಟು ಬ್ಯಾಂಕಿಂಗ್ ವ್ಯವಸ್ಥೆಗೆ ವಾಪಸ್ ಆಗಿವೆ ಎಂದು ಕಳೆದ ವರ್ಷದ ಆಗಸ್ಟ್‌ನಲ್ಲಿ ತನ್ನ ವರದಿಯಲ್ಲಿ ತಿಳಿಸಿದ್ದ ಆರ್‌ಬಿಐ, ಕಪ್ಪುಹಣವೆಂದು ಭಾವಿಸಲಾಗಿದ್ದ ಬೃಹತ್ ಮೊತ್ತವೂ ಮುಖ್ಯವಾಹಿನಿಯ ಆರ್ಥಿಕತೆಯಲ್ಲಿ ಮರಳಿ ಸೇರಿಕೊಂಡಿರಬಹುದು ಎಂಬ ಸುಳಿವನ್ನು ನೀಡಿತ್ತು. ಅಲ್ಲದೆ ನೋಟು ನಿಷೇಧ ನಿರ್ಧಾರದಿಂದಾಗಿ 2017ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ದರ ಶೇ.5.7ಕ್ಕೆ ಕುಸಿದಿದೆ ಎಂದೂ ದೂರಲಾಗಿತ್ತು.

ನೋಟು ನಿಷೇಧ ನಿರ್ಧಾರಕ್ಕೆ ತನ್ನ ಅನುಮತಿಯನ್ನು ನೀಡುವಾಗ ಆರ್‌ಬಿಐ ಕಪ್ಪುಹಣ ಮತ್ತು ನಕಲಿ ನೋಟುಗಳ ಹಾವಳಿ ಅಂತ್ಯಗೊಳ್ಳುತ್ತದೆ ಎಂಬ ಈ ಕ್ರಮದ ಎರಡು ಮುಖ್ಯ ಸಮರ್ಥನೆಗಳನ್ನು ತಿರಸ್ಕರಿಸಿತ್ತು ಎಂಬ ವರದಿ ಯೊಂದನ್ನು ವಿತ್ತಸಚಿವ ಅರುಣ್ ಜೇಟ್ಲಿ ಅವರು ಶುಕ್ರವಾರ ಲೋಕಸಭೆಯಲ್ಲಿ ನಿರಾಕರಿಸಿದರು. ಕಪ್ಪುಹಣ ಮತ್ತು ನಕಲಿ ನೋಟುಗಳ ಮೇಲೆ ಪರಿಣಾಮ ಮಹತ್ವದ್ದಾಗಿರುವುದಿಲ್ಲ ಎಂದು ಆರ್‌ಬಿಐ ಸರಕಾರಕ್ಕೆ ತಿಳಿಸಿತ್ತು ಎಂದು ನವೆಂಬರ್‌ನಲ್ಲಿ ಆಂಗ್ಲ ದೈನಿಕವೊಂದು ತನ್ನ ವರದಿಯಲ್ಲಿ ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X