Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಸಿವು, ನೋವುಗಳಿಗೆ ಸ್ಪಂದಿಸುವುದೇ...

ಹಸಿವು, ನೋವುಗಳಿಗೆ ಸ್ಪಂದಿಸುವುದೇ ನಿಜವಾದ ಧಾರ್ಮಿಕತೆ: ಕೇಮಾರುಶ್ರೀ

ಪ್ರವಾದಿ ಮುಹಮ್ಮದ್(ಸ) ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ14 Dec 2018 10:10 PM IST
share
ಹಸಿವು, ನೋವುಗಳಿಗೆ ಸ್ಪಂದಿಸುವುದೇ ನಿಜವಾದ ಧಾರ್ಮಿಕತೆ: ಕೇಮಾರುಶ್ರೀ

ಉಡುಪಿ, ಡಿ.14: ಇಂದು ನಾವು ಮಾನವೀಯತೆ ಇಲ್ಲದ ಯಾಂತ್ರೀಕೃತ ಪ್ರಪಂಚದಲ್ಲಿ ಬದುಕುತ್ತಿದ್ದೇವೆ. ಈ ಮಧ್ಯೆ ನಾವು ಇನ್ನೊಬ್ಬರ ಹಸಿವು ಹಾಗೂ ನೋವುಗಳಿಗೆ ಸ್ಪಂದಿಸಬೇಕಾಗಿದೆ. ಇದುವೇ ನಿಜವಾದ ಧಾರ್ಮಿಕತೆ ಎಂದು ಕೇಮಾರು ಸಾಂದೀಪನಿ ಮಠದ ಶ್ರೀಈಶ ವಿಠಲದಾಸ ಸ್ವಾಮೀಜಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಉಡುಪಿಯ ಪುರಭವನದಲ್ಲಿ ಶುಕ್ರವಾರ ನಡೆದ ಪ್ರವಾದಿ ಮುಹಮ್ಮದ್(ಸ) ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ಕೇವಲ ದೇವಸ್ಥಾನ, ಮಸೀದಿ, ಚರ್ಚ್‌ಗೆ ಹೋದರೆ ವ್ಯಕ್ತಿ ಧಾರ್ಮಿಕ ಆಗು ವುದಿಲ್ಲ. ಬದಲು ಧಾರ್ಮಿಕ ಗ್ರಂಥಗಳನ್ನು ಸರಿಯಾಗಿ ಅಧ್ಯಯನ ಮಾಡಿ ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಧಾರ್ಮಿಕ ಗ್ರಂಥಗಳಿಗೆ ನಮ್ಮಲ್ಲಿರುವ ಕೆಟ್ಟ ಆಲೋಚನೆಗಳನ್ನು ಸೇರಿಸುವುದರಿಂದ ಇಂದು ಸಮಾಜದಲ್ಲಿ ಸಂಘರ್ಷದ ವಾತಾವರಣ ಸೃಷ್ಠಿಯಾಗುತ್ತಿದೆ ಎಂದರು.

ಮಂಗಳೂರು ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮಹಮ್ಮದ್ ಕುಂಞಿ ಮಾತನಾಡಿ, ಪ್ರವಾದಿ ಮುಹಮ್ಮದ್(ಸ) ಬೋದಿಸಿದ ಶಿಕ್ಷಣ ಹಾಗೂ ಸಂದೇಶಗಳು ಇಂದಿಗೂ ಪ್ರಸ್ತುತ. ಇವರು ಜನರಿಂದ ಜನರಿಗಾಗಿ ಬದುಕಿ ಅವರನ್ನು ಸಂಸ್ಕರಿಸುವ ಕೆಲಸ ಮಾಡಿದರು. ಮನುಷ್ಯರನ್ನು ಗೌರವಿಸುವ ಮಾನವೀಯ ಚಿಂತನೆಗಳನ್ನು ಪ್ರವಾದಿ ಕಲಿಸಿಕೊಟ್ಟರು ಎಂದು ಹೇಳಿದರು.

ಧರ್ಮದ ರಕ್ಷಣೆಯಲ್ಲ, ಧರ್ಮವನ್ನು ಪ್ರಾಮಾಣಿಕವಾಗಿ ಅನುಸರಿಸುವ ಪಾಠವನ್ನು ಪ್ರವಾದಿ ಜನರಿಗೆ ಹೇಳಿಕೊಟ್ಟರು. ಮನುಷ್ಯರು ಪರಸ್ಪರ ಪ್ರೀತಿಸುವ ವರೆಗೆ ದೇವರ ಸಂಪ್ರೀತಿ ದೊರೆಯಲು ಸಾಧ್ಯವಿಲ್ಲ. ಪ್ರವಾದಿಯವರ ಈ ಚಿಂತನೆಗಳ ಮೂಲಕ ಆಧುನಿಕ ಸಮಾಜವನ್ನು ಸುಧಾರಿಸಲು ಸಾಧ್ಯ ಎಂದು ಅವರು ಅಭಿಪ್ರಾಯ ಪಟ್ಟರು.

ಕವಯತ್ರಿ ಜ್ಯೋತಿ ಗುರುಪ್ರಸಾದ್, ಎಸ್‌ಐಓ ರಾಜ್ಯಾಧ್ಯಕ್ಷ ಕಿದಿಯೂರು ನಿಹಾಲ್, ದಸಂಸ ಮುಖಂಡ ಸುಂದರ್ ಮಾಸ್ತರ್, ಜಿಲ್ಲಾ ಮುಸ್ಲಿಮ್ ಒಕ್ಕೂಟದ ಉಪಾಧ್ಯಕ್ಷ ಹಾಜಿ ಅಬ್ದುಲ್ಲಾ ಪರ್ಕಳ, ಜಮೀಯ್ಯತುಲ್ ಫಲಾಹ್ ಕಾಪು ಘಟಕದ ಅಧ್ಯಕ್ಷ ಶಭೀ ಅಹ್ಮದ್ ಕಾಝಿ, ಸಮಾಜ ಸೇವಕ ಅಬ್ದುಲ್ ಜಲೀಲ್ ಸಾಹೇಬ್ ಮುಖ್ಯ ಅತಿಥಿಗಳಾಗಿದ್ದರು.

ಅಧ್ಯಕ್ಷತೆಯನ್ನು ಸದ್ಭಾವನಾ ಮಂಚ್‌ನ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ವಹಿಸಿದ್ದರು. ಜಮಾಅತೆ ಇಸ್ಲಾಮೀ ಹಿಂದ್ ವಲಯ ಸಂಚಾಲಕ ಅಬ್ದುಸ್ಸಲಾಂ ಉಪ್ಪಿನಂಗಡಿ, ಜಿಲ್ಲಾ ಸಂಚಾಲಕ ಶಬ್ಬೀರ್ ಮಲ್ಪೆ, ಮಹಿಳಾ ವಿಭಾಗದ ಜಿಲ್ಲಾ ಸಂಚಾಲಕಿ ಜಮೀಲಾ, ಜಿಐಓ ಸಂಘಟನೆಯ ಸುಹಾ, ಎಸ್‌ಐಓ ಜಿಲ್ಲಾಧ್ಯಕ್ಷ ಯಾಸೀನ್ ಕೋಡಿಬೆಂಗ್ರೆ ಉಪಸ್ಥಿತರಿದ್ದರು.

ಇದ್ರೀಸ್ ಹೂಡೆ ಸ್ವಾಗತಿಸಿದರು. ಶುಹೈಬ್ ಮಲ್ಪೆ ವಂದಿಸಿದರು. ಜಿ.ಎಂ. ಶರೀಫ್ ಹೂಡೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X