Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷರ...

ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಯಲ್ಲಿ ಗೊಂದಲ: ಆಯ್ಕೆ ಪ್ರಕ್ರಿಯೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ14 Dec 2018 10:38 PM IST
share
ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಯಲ್ಲಿ ಗೊಂದಲ: ಆಯ್ಕೆ ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು, ಡಿ.14: ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡೆಸಿದ ತಂತ್ರ-ಪ್ರತಿತಂತ್ರದಿಂದಾಗಿ ಶುಕ್ರವಾರ ನಡೆಯಬೇಕಿದ್ದ ಸ್ಥಾಯಿ ಸಮಿತಿ ಅಧ್ಯಕ್ಷ ಆಯ್ಕೆ ಚುನಾವಣೆಯನ್ನು ಮೇಯರ್ ಗಂಗಾಂಬಿಕೆ ಮುಂದೂಡಿದ್ದಾರೆ.

ಅಧ್ಯಕ್ಷರನ್ನು ಆಯ್ಕೆ ಮಾಡಲು ಕಾಂಗ್ರೆಸ್‌ನ ಶಾಸಕ ರಾಮಲಿಂಗಾರೆಡ್ಡಿ, ಜೆಡಿಎಸ್‌ನ ಶಾಸಕ ಗೋಪಾಲಯ್ಯ, ರಾಜ್ಯಸಭಾ ಸದಸ್ಯ ಉಪೇಂದ್ರರೆಡ್ಡಿ ಹರಸಾಹಸ ನಡೆಸಿದ್ದು, ಸದಸ್ಯರ ಮನವೊಲಿಕೆಯ ಕಸರತ್ತು ವಿಫಲವಾಯಿತು. ಹೀಗಾಗಿ, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಇಡೀ ಪ್ರಕ್ರಿಯೆಯನ್ನು ಮುಂದೂಡಿದರು.

ನಿರೀಕ್ಷೆಯಂತೆ 12 ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸುಗಮವಾಗಿ ನಡೆಯಬೇಕಿತ್ತು. ಆದರೆ, ನಗರ ಯೋಜನೆ ಸ್ಥಾಯಿ ಸಮಿತಿಗೆ ಬಿಜೆಪಿ ಉಚ್ಛಾಟಿತ ಸದಸ್ಯ ಭೈರಸಂದ್ರ ವಾರ್ಡ್‌ನ ಸದಸ್ಯ ನಾಗರಾಜ್‌ರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಮುಂದಾಗಿತ್ತು. ಇದನ್ನು ವಿರೋಧಿಸಿದ ಬಿಜೆಪಿ ಗದ್ದಲ ಉಂಟು ಮಾಡಿತು. ಇದರಿಂದಾಗಿ ಸಭೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಅಲ್ಲದೆ, ಜೆಡಿಎಸ್ ಸದಸ್ಯರಾದ ಮಂಜುಳಾ ನಾರಾಯಣಸ್ವಾಮಿ ಮತ್ತು ದೇವದಾಸ್ ಸ್ಥಾಯಿ ಸಮಿತಿಗೆ ಪಟ್ಟು ಹಿಡಿದಿದ್ದಾರೆ. ಜೆಡಿಎಸ್‌ನಲ್ಲಿ ಸಾಮಾಜಿಕ ನ್ಯಾಯ ಸಮಿತಿ ಸಿಗದಿದ್ದಲ್ಲಿ ಅವರನ್ನು ಬಿಜೆಪಿ ಸೆಳೆಯಲು ಮುಂದಾಗಿದ್ದು, ಕಾಂಗ್ರೆಸ್-ಜೆಡಿಎಸ್‌ಗೆ ತಿರುಗೇಟು ನೀಡಲು ಮುಂದಾಗಿದೆ. ಹೀಗಾಗಿ, ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ 12 ಗಂಟೆಗೆ ಸಮಯ ನಿಗದಿ ಮಾಡಿದ್ದರೂ ಸಂಜೆವರೆಗೂ ಆಯ್ಕೆ ಪ್ರಕ್ರಿಯೆ ಆರಂಭವಾಗಲಿಲ್ಲ.

ಸಂಭವನೀಯ ಅಧ್ಯಕ್ಷರ ಪಟ್ಟಿ:

*ಮಾರುಕಟ್ಟೆ ಸ್ಥಾಯಿ ಸಮಿತಿ ಫರೀದಾ ಇಷ್ತಿಯಾಕ್(ಕಾಂಗ್ರೆಸ್)

*ಅಪೀಲು ಸ್ಥಾಯಿ ಸಮಿತಿ- ಸುಜಾತ ರಮೇಶ್(ಕಾಂಗ್ರೆಸ್)

*ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ-ಲಾವಣ್ಯ ಗಣೇಶ್(ಕಾಂಗ್ರೆಸ್)

*ಲೆಕ್ಕಪತ್ರ ಸ್ಥಾಯಿ ಸಮಿತಿ-ವೇಲು ನಾಯಕರ್(ಕಾಂಗ್ರೆಸ್)

*ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ-ಸೌಮ್ಯಶಿವಕುಮಾರ್(ಕಾಂಗ್ರೆಸ್)

*ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ-ಹೇಮಲತಾ ಗೋಪಾಲಯ್ಯ (ಜೆಡಿಎಸ್)

*ವಾರ್ಡ್‌ಮಟ್ಟದ ಸಮಿತಿ-ಉಮೇ ಸಲ್ಮಾ(ಜೆಡಿಎಸ್)

*ಶಿಕ್ಷಣ ಸ್ಥಾಯಿ ಸಮಿತಿ-ಇಮ್ರಾನ್ ಪಾಷ(ಜೆಡಿಎಸ್)

*ನಗರ ಯೋಜನಾ ಸ್ಥಾಯಿ ಸಮಿತಿ-ಚಂದ್ರಪ್ಪ(ಪಕ್ಷೇತರ)

*ಆಡಳಿತ ಮತ್ತು ಸುಧಾರಣ ಸ್ಥಾಯಿ ಸಮಿತಿ-ಆನಂದ್(ಪಕ್ಷೇತರ)

*ಆರೋಗ್ಯ ಸ್ಥಾಯಿ ಸಮಿತಿ-ಮುಜಾಯಿದ್ ಪಾಷಾ(ಎಸ್‌ಡಿಪಿಐ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X