Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ​ಕನ್ನಡ -ತುಳು ನಾಟಕ ರಂಗದ...

ಮಂಗಳೂರು: ​ಕನ್ನಡ -ತುಳು ನಾಟಕ ರಂಗದ ಕಲಾವಿದೆ ಉಷಾ ಭಂಡಾರಿಗೆ 'ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ'

ವಾರ್ತಾಭಾರತಿವಾರ್ತಾಭಾರತಿ14 Dec 2018 11:02 PM IST
share
ಮಂಗಳೂರು: ​ಕನ್ನಡ -ತುಳು ನಾಟಕ ರಂಗದ ಕಲಾವಿದೆ ಉಷಾ ಭಂಡಾರಿಗೆ ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ

ಮಂಗಳೂರು, ಡಿ.14: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ರಂಗ ಭೂಮಿ, ಕಿರು ತೆರೆ, ಚಲನಚಿತ್ರ ರಂಗದ ಕಲಾವಿದೆ ಹೆಗ್ಗೋಡಿನ ನಿನಾಸಂ ನಲ್ಲಿ ರಂಗ ಶಿಕ್ಷಣ ಪಡೆದು ನಾಟಕ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡ ಉಷಾ ಭಂಡಾರಿ ಅವರು 2018ನೆ ಸಾಲಿನ ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿಗೆ ಪಾತ್ರರಾಗಿದ್ದರೆ.

ಉಳ್ಳಾಲದ ತೊಕ್ಕೊಟ್ಟಿನಲ್ಲಿ ಜನಿಸಿದ ಉಷಾ ಭಂಡಾರಿ ಮಂಗಳೂರಿನ ಸೈಂಟ್ ಆ್ಯಗ್ನೇಸ್ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ ಪಡೆದ ಬಳಿಕ ನಿನಾಸಂನಲ್ಲಿ ರಂಗ ಶಿಕ್ಷಣ ಪಡೆದು ಕನ್ನಡ -ತುಳು ರಂಗ ಭೂಮಿಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು.

''ಖ್ಯಾತ ಸಾಹಿತಿ ಬೊಳುವಾರು ಮುಹಮ್ಮದ್ ಕುಂಞಿಯವರ ಮುತ್ತುಚ್ಚೇರಿ ನಾಟಕವನ್ನು 1989ರಲ್ಲಿ ಪ್ರಥಮವಾಗಿ ಮಂಗಳೂರಿನ ರೋಶನಿ ನಿಲಯದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಪ್ರದರ್ಶಿಸಿ ನಾಟಕ ರಂಗಕ್ಕೆ ನಾನು ಪ್ರವೇಶಿಸಿರುವುದು ನನ್ನ ಅವಿಸ್ಮರಣೀಯ ಅನುಭವ. ನಿರಂತರವಾಗಿ 30 ವರ್ಷಗಳಿಂದ ಈ ಕ್ಷೇತ್ರದಲ್ಲಿ ಕಲಾವಿದೆಯಾಗಿ ನಾನು ಕಾರ್ಯನಿರ್ವಹಿಸುತ್ತಿದ್ದೇನೆ. ಕರಾವಳಿ ಮುಖ್ಯವಾಗಿ ಮೈಸೂರಿನ ಬಹುತೇಕ ನಾಟಕ ತಂಡಗಳಲ್ಲಿ ನಾನು ನಟಿಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಎಸ್.ಎನ್. ಸೀತಾರಾಮರು ಬರೆದು ನಿರ್ದೇಶಿಸಿದ ಅತೀತ ನಾಟಕ 82 ಪ್ರದರ್ಶನಗಳನ್ನು ಕಂಡಿದೆ. ಇನ್ನೂ ಪ್ರದರ್ಶನ ನಡೆಯುತ್ತಿದೆ. ಪ್ರಶಸ್ತಿ ಬಂದಿರುವುದು ಇನ್ನಷ್ಟು ಪೊತ್ಸಾಹ ನೀಡಿದಂತಾಗಿದೆ ’’ಎಂದು ಉಷಾ ಭಂಡಾರಿ ವಾರ್ತಾಭಾರತಿಯೊಂದಿಗೆ ತಮ್ಮ ಸಂತಸ ಹಂಚಿಕೊಂಡರು.

ಉಷಾ ಭಂಡಾರಿಯವರು ನಕ್ಕಳಾ ರಾಜ ಕುಮಾರಿ, ದೇವರ ಕಾಡು, ಬೆಳದಿಂಗಳ ಬಾಲೆ, ಒಂದು ಮುತ್ತಿನ ಕಥೆ, ಎಡಕಲ್ಲು ಗುಡ್ಡದ ಮೇಲೆ ಮದಿಮೆ, ಅಪ್ಪೆ ಟೀಚರ್ ಸೇರಿದಂತೆ 20ಕ್ಕೂ ಹೆಚ್ಚು ಚಲನ ಚಿತ್ರದಲ್ಲಿ ನಟಿಸಿದವರು.

ತುಳು ರಂಗ ಭೂಮಿಯ ವಿಜಯ ಕುಮಾರ್ ಕೊಡಿಯಾಲ ಬೈಲ್ ನಿರ್ದೇಶಿಸಿದ ತುಳು ನಾಟಕಗಳಾದ ಒರಿಯರ್‌ದ್ ಒರಿ ಅಸಲ್, ದೇವು ಪೂಂಜ, ಮಂಡೆ ಬಲಿಪುಜಿ, ಅಕ್‌ಲೆಕ್ಕ ಎಂಕುಲತ್ತ್, ಕುಸೆಲ್ದ ಪರಬೆ, ಸಂಸಾರದ ಸರ್ಕಸ್, ಅಸಲ್ ಮೂರ್ತಿಲು, ಡಿ.ಕೆ.ಚವಟರ ಧರ್ಮೆತ್ತಿ ಮಾಯೆ, ಮೂಜಿನ ಮುತ್ತು, ಮೂಜಿ ಲೋಕದಲ್ಲಿ ನಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X