Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ: ದುಷ್ಕರ್ಮಿಗಳಿಂದ ರಾತ್ರೋರಾತ್ರಿ...

ಮಂಡ್ಯ: ದುಷ್ಕರ್ಮಿಗಳಿಂದ ರಾತ್ರೋರಾತ್ರಿ ಮನೆ ಧ್ವಂಸ

ವಾರ್ತಾಭಾರತಿವಾರ್ತಾಭಾರತಿ15 Dec 2018 8:29 PM IST
share
ಮಂಡ್ಯ: ದುಷ್ಕರ್ಮಿಗಳಿಂದ ರಾತ್ರೋರಾತ್ರಿ ಮನೆ ಧ್ವಂಸ

ಮಂಡ್ಯ, ಡಿ.15: ರಾತ್ರೋರಾತ್ರಿ ಮನೆಯೊಂದರ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಸೈಜುಗಲ್ಲಿನಿಂದ ಮನೆಯ ಬಾಗಿಲು ಮತ್ತು ಕಿಟಕಿಯ ಗಾಜುಗಳನ್ನು ಒಡೆದು ಹಾಕಿರುವ ಘಟನೆ ಪಾಂಡವಪುರ ತಾಲೂಕಿನ ಬಿಂಡಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಬಿಂಡಹಳ್ಳಿ ಗ್ರಾಮದಲ್ಲಿ ಮರದ ವ್ಯಾಪಾರ ಮಾಡುವ ಶ್ರೀನಿವಾಸಾಚಾರಿ ಎಂಬುವವರ ಮನೆಯೇ ದುಷ್ಕರ್ಮಿಗಳ ದಾಳಿಗೆ ತುತ್ತಾಗಿದ್ದು, ಇದೇ ಗ್ರಾಮದ ಸುಬ್ಬಾಚಾರಿ ಮಕ್ಕಳಾದ ನಂಜುಂಡಾಚಾರಿ ಮತ್ತು ಮಂಜು, ಹಾಗೂ ಗೋವಿಂದಾಚಾರಿ ಮಗ ಚಲುವಾಚಾರಿ ಎಂಬುವರೇ ಕಿಟಕಿ ಬಾಗಿಲು ಒಡೆದು ಹಾಕಿ, ಪುಂಡಾಟಿಕೆ ನಡೆಸಿದ ವ್ಯಕ್ತಿಗಳಾಗಿದ್ದಾರೆ ಎಂದು ಶ್ರೀನಿವಾಸಾಚಾರಿ ಅವರ ಹೆಂಡತಿ ಅನುಸೂಯ ಶ್ರೀರಂಗಪಟ್ಟಣ ಡಿವೈಎಸ್‍ಪಿ ಅವಗೆ ದೂರು ನೀಡಿದ್ದಾರೆ.

ದಾಳಿಗೆ ಕಾರಣ: ಬಿಂಡಹಳ್ಳಿ ಗ್ರಾಮದ ಶ್ರೀನಿವಾಸಾಚಾರಿ ಮಗ ಸುನೀಲ್‍ ಕುಮಾರ್ (24) ಮೈಸೂರಿನ ಎಚ್‍ಡಿಎಫ್‍ಸಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಮೈಸೂರಿನ ಮೇಟಗಳ್ಳಿ ಬಡಾವಣೆಯಲ್ಲಿ ವಾಸಿಸುತ್ತಿರುವ ಇದೇ ಗ್ರಾಮದ ಪ್ರಾಪ್ತ ವಯಸ್ಸಿನ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು. ಶುಕ್ರವಾರ ಬೆಳಗ್ಗೆಯಿಂದ ಯುವತಿ ನಾಪತ್ತೆಯಾಗಿರುವ ಕಾರಣ ಸುನೀಲ್‍ ಕುಮಾರ್ ಈಕೆಯನ್ನು ಕರೆದುಕೊಂಡು ಹೋಗಿದ್ದಾನೆ ಎಂಬುದು ದಾಳಿಕೋರರ ಆರೋಪವಾಗಿದೆ.

ಘಟನೆ ನಡೆದ ರಾತ್ರಿ ಶ್ರೀನಿವಾಸಾಚಾರಿ ಮನೆಯಲ್ಲಿ ಇರಲಿಲ್ಲ. ಅವರ ಹೆಂಡತಿ ಅನುಸೂಯ ಮನೆಯಲ್ಲಿದ್ದು, ಪಕ್ಕದ ಮನೆಯವರ ಸಹಾಯ ಪಡೆದು ರಾತ್ರೋರಾತ್ರಿ ಊರಿನಿಂದ ಪರಾರಿಯಾಗಿ ಪ್ರಾಣ ಕಾಪಾಡಿಕೊಂಡರು ಎನ್ನಲಾಗಿದೆ.

ಕೆಆರ್‍ಎಸ್ ಬಳಿಯೂ ಹಲ್ಲೆಗೆ ಸಂಚು: ಶುಕ್ರವಾರ ತಡರಾತ್ರಿ ನಡೆದ ದಾಳಿಯ ಬಗ್ಗೆ ಶ್ರೀನಿವಾಸಾಚಾರಿ ಕೆಆರ್‍ಎಸ್ ಪೊಲೀಸರಿಗೆ ನಮ್ಮ ವಿರುದ್ಧ ದೂರು ನೀಡಲು ಶನಿವಾರ ಬೆಳಗ್ಗೆ ಬಂದೇ ಬರುತ್ತಾನೆ ಎಂದು ಆತನ ಮೇಲೆ ಹಲ್ಲೆ ನಡೆಸಲು ಮೂವರು ಸನ್ನದ್ದರಾಗಿದ್ದನ್ನು ತಿಳಿದ ಅನುಸೂಯ ನೇರವಾಗಿ ಶ್ರೀರಂಗಪಟ್ಟಣ ಡಿವೈಎಸ್‍ಪಿ ಅವರಿಗೆ ದೂರು ನೀಡಿದರು.

ದಾಳಿಯಲ್ಲಿ ಬೆಲೆಬಾಳುವ ಮನೆಯ ಮುಂಬಾಗಿಲು, ಕಿಟಕಿಯ ಗಾಜುಗಳು ಮತ್ತು ಶೌಚಾಲಯದ ಬಾಗಿಲನ್ನೂ ದುಷ್ಕರ್ಮಿಗಳು ಒಡೆದು ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X